ಸುಗ್ರೀವ ಖ್ಯಾತಿಯ ನಟ ಶ್ಯಾಂ ಸುಂದರ್ ಕಲಾನಿ 
ಸಿನಿಮಾ ಸುದ್ದಿ

ರಾಮಾಯಣ ಧಾರಾವಾಹಿಯ ಸುಗ್ರೀವ ಖ್ಯಾತಿಯ ನಟ ಶ್ಯಾಂ ಸುಂದರ್ ಕಲಾನಿ ನಿಧನ

ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ರಾಮಾಯಣ ಧಾರಾವಾಹಿಯಲ್ಲಿ ಸುಗ್ರೀವನ ಪಾತ್ರ ಮಾಡಿದ್ದ ನಟ ಶ್ಯಾಂ ಸುಂದ್ ಕಲಾನಿ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ರಾಮಾಯಣ ಧಾರಾವಾಹಿಯಲ್ಲಿ ಸುಗ್ರೀವನ ಪಾತ್ರ ಮಾಡಿದ್ದ ನಟ ಶ್ಯಾಂ ಸುಂದ್ ಕಲಾನಿ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ನಟ ಅರುಣ್ ಗೋವಿಲ್ ಟ್ವೀಟ್ ಮಾಡಿದ್ದು, ರಮಾನಂದ ಸಾಗರ್ ಅವರ ರಾಮಾಯಣ ಧಾರಾವಾಹಿಯಲ್ಲಿ ಸುಗ್ರೀವನ ಪಾತ್ರ ಮಾಡಿದ್ದ ಶ್ಯಾಂ ಸುಂದರ್ ಕಲಾನಿ ಅವರು ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು  ಏ.6ರಂದು ಹರಿಯಾಣದ ಕಲ್ಕಾ ಎಂಬಲ್ಲಿ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ. ರಮಾನಂದ ಸಾಗರ ಅವರ ನಿರ್ದೇಶನ, ನಿರ್ಮಾಣದ 1987ರ ರಾಮಾಯಣ ಧಾರಾವಾಹಿಯಲ್ಲಿ ಶ್ಯಾಮ ಸುಂದರ್‌ ಕಲಾನಿ ಅವರು ಸುಗ್ರೀವನ ಪಾತ್ರ ನಿರ್ವಹಿಸಿದ್ದರು. ಇದೇ  ಧಾರಾವಾಹಿಯಲ್ಲಿ ನಟ ಅರುಣ್ ಗೋವಿಲ್ ಅವರೂ ಕೂಡ ರಾಮನ ಪಾತ್ರ ನಿರ್ವಹಿಸಿದ್ದರು.

1987ರ ರಾಮಾಯಣ ಧಾರಾವಾಹಿಯನ್ನು ಕೊರೊನಾ ವೈರಸ್‌ ಲಾಕ್‌ಡೌನ್‌ ಹಿನ್ನೆಲೆಯಲ್ಲಿ, ಪ್ರೇಕ್ಷಕರ ಒತ್ತಾಯದ ಮೇರೆ ದೂರದರ್ಶನದಲ್ಲಿ ಮರು ಪ್ರಸಾರ ಮಾಡಲಾಗುತ್ತಿದೆ.  ಇದರ ಜೊತೆಗೆ ಅಂದಿನ ಕಾಲದ ಇತರೆ ಖ್ಯಾತ ಧಾರಾವಾಹಿಗಳಾದ ಮಹಾಭಾರ, ಶಕ್ತಿಮಾನ್ ಮತ್ತು  ಜಂಗಲ್ ಬುಕ್ ಕೂಡ ಪ್ರಸಾರವಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT