ದರ್ಶನ್ 
ಸಿನಿಮಾ ಸುದ್ದಿ

ಕೈಗೆ ಬಂದರೂ ಬಾಯಿಗೆ ಬಾರದ ತುತ್ತು: ರೈತರ ಪರಿಸ್ಥಿತಿ ಕಂಡು ನಟ ದರ್ಶನ್ ಕಳವಳ

ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಮಾಡಲಾಗಿರುವ ಹಿನ್ನೆಲೆಯಲ್ಲಿ ರೈತರು ಬೆಳೆದಿದ್ದ ಫಸಲು ಕೈಗೆ ಬಂದರು ಬಾಯಿಗೆ ಬಾರದಂತಾಗಿದೆ.

ಬೆಂಗಳೂರು: ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಮಾಡಲಾಗಿರುವ ಹಿನ್ನೆಲೆಯಲ್ಲಿ ರೈತರು ಬೆಳೆದಿದ್ದ ಫಸಲು ಕೈಗೆ ಬಂದರು ಬಾಯಿಗೆ ಬಾರದಂತಾಗಿದೆ.

ಈಗಾಗಲೇ ಕೆಲ ರೈತರು ತಾವು ಬೆಳೆದಿದ್ದ ಹಣ್ಣು, ಬೆಳೆ ಸಾಗಾಟ ಮಾಡಲಾಗದೇ, ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನು, ಕೆಲವರು ಹಣ್ಣು,ಹಾಲು, ತರಕಾರಿ, ಬೆಳೆಯನ್ನು ರಸ್ತೆಗೆ ಎಸಿದಿದ್ದಾರೆ‌.

ಇಂತಹ ವಿಷಮ ಪರಿಸ್ಥಿತಿಯಲ್ಲಿ‌ ರೈತರ ಬೆನ್ನಿಗೆ ನಿಲ್ಲುವಂತೆ ಚಾಲೆಂಜಿಂಗ್​ ಸ್ಟಾರ್ ದರ್ಶನ್ ನಾಡಿನ ಜನರನ್ನು ಕೋರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ದೇಶದಾದ್ಯಂತ ಲಾಕ್ ಡೌನ್ ಘೋಷಿಸಿರುವ ಕಾರಣ, ರಾಜ್ಯದೆಲ್ಲೆಡೆ ಬೇಡಿಕೆಯಿಲ್ಲದೇ ತಾವು ಬೆಳೆದ ತರಕಾರಿಯನ್ನು ನೇರವಾಗಿ ಗ್ರಾಹಕರ ಮನೆ ಬಾಗಿಲಿಗೆ ಯಾವುದೇ ಮಧ್ಯವರ್ತಿಗಳು ಇಲ್ಲದೆ ಮಾರಾಟ ಮಾಡಲು ರೈತರು ಮುಂದಾಗಿದ್ದಾರೆ. ಅವರ ಬಳಿ ತರಕಾರಿ ಖರೀದಿಸುವ ಮೂಲಕ ರೈತರನ್ನು ಉಳಿಸೋಣ. ಅವರಿಗೆ ದಕ್ಕಬೇಕಾದ ಹಣವು ಅವರ ಪಾಲೇ ಆಗಲಿ ಅನ್ನೋದು ನನ್ನ ಆಶಯ ಎಂದು ಅವರು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT