ಪಾರ್ವತಿ ಅರುಣ್ ಮತ್ತು ವಿನೋದ್ ಪ್ರಭಾಕರ್ 
ಸಿನಿಮಾ ಸುದ್ದಿ

ವಿನೋದ್ ಪ್ರಭಾಕರ್ ಗೆ ಜೋಡಿಯಾಗಲಿದ್ದಾರೆ ಪಾರ್ವತಿ ಅರುಣ್

ವಿನೋದ್‌ ಪ್ರಭಾಕರ್‌ ದರ್ಶನ್‌ ಜೊತೆ “ರಾಬರ್ಟ್‌’ ನಲ್ಲಿ ನಟಿಸಿರೋದು ಗೊತ್ತೇ ಇದೆ. ಸದ್ಯಕ್ಕೆ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಅವರು ಮನೆಯಲ್ಲಿದ್ದಾರೆ. ಆದರೂ, ಹೊಸ ಸಿನಿಮಾಗೆ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ.

ಬೆಂಗಳೂರು: ವಿನೋದ್‌ ಪ್ರಭಾಕರ್‌ ದರ್ಶನ್‌ ಜೊತೆ “ರಾಬರ್ಟ್‌’ ನಲ್ಲಿ ನಟಿಸಿರೋದು ಗೊತ್ತೇ ಇದೆ. ಸದ್ಯಕ್ಕೆ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಅವರು ಮನೆಯಲ್ಲಿದ್ದಾರೆ. ಆದರೂ, ಹೊಸ ಸಿನಿಮಾಗೆ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. ಹಾಗಂತ, ಚಿತ್ರೀಕರಣಕ್ಕೆ ಹೊರಡುತ್ತಿಲ್ಲ. ಕೋವಿಡ್ 19 ಸಮಸ್ಯೆ ಬಗೆಹರಿದ ನಂತರ ಅವರು ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ. 

ವಿನೋದ್‌ ಪ್ರಭಾಕರ್‌ ನಟಿಸಲಿರುವ ಹೊಸ ಚಿತ್ರಕ್ಕಿನ್ನೂ ಹೆಸರಿಟ್ಟಿಲ್ಲ. ಈ ಚಿತ್ರಕ್ಕೆ ಪ್ರಮೋದ್‌ ಕುಮಾರ್‌ ನಿರ್ದೇಶಕರು. ಇನ್ನು, ಹೇಮಾವತಿ ಮುನಿಸ್ವಾಮಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ಇವರು “ಕುಲ್ಫಿ’ ಚಿತ್ರ ನಿರ್ಮಿಸಿದ್ದರು. ಈಗ ವಿನೋದ್‌ ಪ್ರಭಾಕರ್‌ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಇನ್ನು, “ಗೀತಾ’ ಸಿನಿಮಾದಲ್ಲಿ ನಾಯಕಿಯಾಗಿದ್ದ ಮಲಯಾಳಂ ಚಿತ್ರರಂಗದ ನಟಿ ಪಾರ್ವತಿ ಅರುಣ್‌ ವಿನೋದ್‌ ಪ್ರಭಾಕರ್‌ ಆವರಿಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ವಿನೋದ್‌ ಪ್ರಭಾಕರ್‌ ಚಿತ್ರಗಳೆಂದರೆ, ಪಕ್ಕಾ ಆ್ಯಕ್ಷನ್‌ ಮಯವಾಗಿರುತ್ತವೆ. ಈ ಸಿನಿಮಾ ಕೂಡ ಭರ್ಜರಿ ಆ್ಯಕ್ಷನ್‌ ಹೊಂದಿದ್ದು, ಈಗಿನ ಟ್ರೆಂಡ್‌ಗೆ ತಕ್ಕಂತೆ ಕಥೆ ಹೆಣೆದಿರುವ ನಿರ್ದೇಶಕರು, ವಿನೋದ್‌ ಪ್ರಭಾಕರ್‌ ಫ್ಯಾನ್ಸ್‌ಗೆ ಬೇಕಾದ ಎಲ್ಲಾ ಎಲಿಮೆಂಟ್ಸ್‌ ಇಟ್ಟು ಸಿನಿಮಾ ಮಾಡುತ್ತಿದ್ದಾರೆ.

ಕೋವಿಡ್ 19  ಸಮಸ್ಯೆ ಬಗೆಹರಿದ ಬಳಿಕ ಚಿತ್ರದ ಫ‌ಸ್ಟ್‌ ಲುಕ್‌ ಅನ್ನು ಗ್ರ್ಯಾಂಡ್‌ ಆಗಿ ರಿಲೀಸ್‌ ಮಾಡುವ ಮೂಲಕ ಮುಹೂರ್ತ ಮಾಡುವ ಯೋಚನೆ ನಿರ್ಮಾಪಕರದ್ದು. ಚಿತ್ರದಲ್ಲಿ ಭರ್ಜರಿ ಐದು ಫೈಟ್ಸ್‌ಗಳಿದ್ದು, ಚಿತ್ರದ ಎಲ್ಲಾ ಹಾಡುಗಳಿಗೂ “ಬಹದ್ದೂರ್‌’ ಚೇತನ್‌ ಸಾಹಿತ್ಯ ಬರೆಯುತ್ತಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT