ಹರಿಪ್ರಿಯಾ 
ಸಿನಿಮಾ ಸುದ್ದಿ

ಲಾಕ್ ಡೌನ್ ದಿನಗಳಲ್ಲಿ 'ನೀರ್ ದೋಸೆ' ಹಾಗೂ ಸಿಗರೇಟ್ ಗಳನ್ನು ನೆನೆದ ಹರಿಪ್ರಿಯಾ!

ನೀರ್ ದೋಸೆ" ಚಿತ್ರದಲ್ಲಿ ಬೆಳ್ಳುಳ್ಳಿ ಅಲಿಯಾಸ್ ಕುಮುದಾ ಪಾತ್ರದ ಮೂಲಕ ಪ್ರೇಕ್ಷಕರ ನಿದ್ದೆಗೆಡಿಸಿದ್ದ ನಟಿ ಹರಿಪ್ರಿಯಾ ಲಾಕ್ ಡೌನ್ ದಿನಗಳಲ್ಲಿ ಮತ್ತೊಮ್ಮೆ ಆ ಪಾತ್ರದ ಕುರಿತು ಮಾತನಾಡಿದ್ದಾರೆ.

ನೀರ್ ದೋಸೆ" ಚಿತ್ರದಲ್ಲಿ ಬೆಳ್ಳುಳ್ಳಿ ಅಲಿಯಾಸ್ ಕುಮುದಾ ಪಾತ್ರದ ಮೂಲಕ ಪ್ರೇಕ್ಷಕರ ನಿದ್ದೆಗೆಡಿಸಿದ್ದ ನಟಿ ಹರಿಪ್ರಿಯಾ ಲಾಕ್ ಡೌನ್ ದಿನಗಳಲ್ಲಿ ಮತ್ತೊಮ್ಮೆ ಆ ಪಾತ್ರದ ಕುರಿತು ಮಾತನಾಡಿದ್ದಾರೆ.

ತಮ್ಮ ಬ್ಲಾಗಿನಲ್ಲಿ ಈ ಕುರಿತು ಬರೆದುಕೊಂಡ ನಟಿ ನಿರ್ದೇಶಕ ವಿಜಯಪ್ರಸಾದ್ ಅವರ ಚಿತ್ರದಲ್ಲಿ ಕೆಲಸ ಮಾಡಿದ ಅನುಭವ ಮತ್ತು ಧೂಮಪಾನದ ಪರಿಣಾಮಗಳನ್ನು ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿ ಜಗ್ಗೇಶ್ ಮುಖ್ಯ ಪಾತ್ರದಲ್ಲಿ ನಟಿಸಿದ್ದು, ದತ್ತಣ್ಣ ಮತ್ತು ಸುಮಲತಾ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

"ನಾನು ಧೂಮಪಾನ ಮಾಡುತ್ತೇನೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ, ಆದರೆ ಇಲ್ಲಿ ನಾನು ನನ್ನ ಬೆರಳುಗಳ ನಡುವೆ ಸಿಗರೇಟ್ ಹಿಡಿದಿರುತ್ತೇನೆ ಮತ್ತು ಅದನ್ನು ಹೇಗೆ ಪಫ್ ಮಾಡುವುದೆಂದು ಕಲಿತೆ" ಹರಿಪ್ರಿಯಾ ಹೇಳುತ್ತಾರೆ, ಇದಕ್ಕೆ ಸಂಬಂಧಿಸಿ ಧೂಮಪಾನಿಗಳಾಗಿದ್ದ ತನ್ನ ಸಹೋದರ ಮತ್ತು ಸ್ನೇಹಿತರಿಂದ ಸಲಹೆಗಳನ್ನು ನಟಿ ಪಡೆದಿದ್ದರಂತೆ.

“ನಾನು ಯಾವಾಗಲೂ ಧೂಮಪಾನವನ್ನು ತ್ಯಜಿಸುವಂತೆ ಹೇಳುತ್ತಿದ್ದೆ. ಆದರೆ ನಾನೇ ಒಂದು ದಿನ ಕೈನಲ್ಲಿ ಸಿಗರೇಟ್ ಹಿಡಿಯಲಿದ್ದೇನೆಂದು ಯಾರು ಭಾವಿಸಿದ್ದರು?"

ಧೂಮಪಾನವು ತುಂಬಾ ಕೆಟ್ಟ ಪರಿಣಾಮ ಬೀರುವುದರಿಂದ ಜನರು ಹೇಗೆ ವ್ಯಸನಿಯಾಗುತ್ತಾರೆ ಎಂದು ಹರಿಪ್ರಿಯಾ ಆಶ್ಚರ್ಯಪಡುತ್ತಾರೆ, ಅಲ್ಲದೆ ಈ ಸಿಗರೇಟ್ ಸೇವನೆ ಆಕೆಯ ಮೇಲೂ ಎಷ್ಟು ಕೆಟ್ಟ ಪರಿಣಾಮ ಬೀರಿದೆ ಎಂದೂ ನೆನಪಿಸಿಕೊಳ್ಳುತ್ತಾರೆ." ಆ ದಿನಗಳಲ್ಲಿ ನನಗೆ ಪ್ರತಿ ಸಾರಿ ಮೈಗ್ರೇನ್ ಪ್ರಾರಂಭವಾಗುತ್ತಿತ್ತು. ಇದು ನಾಲ್ಕು ವರ್ಷಗಳ ನಂತರವೂ ಇಂದಿಗೂ ನನ್ನ ಮೇಲೆ ಪರಿಣಾಮ ಬೀರುತ್ತಲಿದೆ. ಆದರೆ ಚಿತ್ರ ಜನಪ್ರಿಯತೆ ಎಲ್ಲವನ್ನೂ ಇಷ್ಟವಾಗಿಸಿದೆ. "ಅಲ್ಲದೆ ಮುಖೇಶ್ ಅವರ ಸಾಲುಗಳಾದ - ‘Smoking Kills’ ಎನ್ನುವ ಸಾಲನ್ನು ಹೇಳಲು ನಟಿ ಮರೆತಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT