ಚಿತ್ರದ ತುಣುಕು 
ಸಿನಿಮಾ ಸುದ್ದಿ

'ಕೊರೋನಾ ವಾರಿಯರ್' ಚಿತ್ರದ ಮೂಲಕ ಕೋವಿಡ್-19 ವಿರುದ್ಧ ಹೋರಾಡುತ್ತಿರುವವರಿಗೆ ಕೃತಜ್ಞತೆ!

ಮಾರಕ ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ವಿರುದ್ಧ ಹೋರಾಡುತ್ತಿರುವವರಿಗೆ ಕೃತಜ್ಞತೆ ಸಲ್ಲಿಸುವ ನಿಟ್ಟಿನಲ್ಲಿ ಮೈಸೂರಿನ ನಿವಾಸಿ ಸುತಾನ್ ದಿಲೀಪ್ ಕೊರೋನಾ ವಾರಿಯರ್ ಶೀರ್ಷಿಕೆಯಲ್ಲಿ ಚಿತ್ರವೊಂದನ್ನು ನಿರ್ಮಿಸಿದ್ದು, ಯು ಟ್ಯೂಬ್  ಚಾನೆಲ್ ನಲ್ಲಿ ವೀಕ್ಷಿಸಬಹುದಾಗಿದೆ. 

ಬೆಂಗಳೂರು: ಮಾರಕ ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ವಿರುದ್ಧ ಹೋರಾಡುತ್ತಿರುವವರಿಗೆ ಕೃತಜ್ಞತೆ ಸಲ್ಲಿಸುವ ನಿಟ್ಟಿನಲ್ಲಿ ಮೈಸೂರಿನ ನಿವಾಸಿ ಸುತಾನ್ ದಿಲೀಪ್ ಕೊರೋನಾ ವಾರಿಯರ್ ಶೀರ್ಷಿಕೆಯಲ್ಲಿ ಚಿತ್ರವೊಂದನ್ನು ನಿರ್ಮಿಸಿದ್ದು, ಯು ಟ್ಯೂಬ್  ಚಾನೆಲ್ ನಲ್ಲಿ ವೀಕ್ಷಿಸಬಹುದಾಗಿದೆ. 

ದಿಲೀಪ್ ಈ ಚಿತ್ರವನ್ನು ನಿರ್ದೇಶಿಸಿ ನಟಿಸಿದ್ದಾರೆ.ಚಿತ್ರದಲ್ಲಿ ನಾಲ್ಕು ನಿಮಿಷ  ಲಾಕ್ ಡೌನ್ ಸಂದರ್ಭದಲ್ಲಿ ಕರ್ತವ್ಯದಲ್ಲಿ ತೊಡಗಿಸಿಕೊಂಡವರ ಹೋರಾಟ, ತ್ಯಾಗವನ್ನು ತೋರಿಸಲಾಗಿದೆ. 

ಮೈಸೂರು ಜಿಲ್ಲಾ ಆಡಳಿತದ ಕೋವಿಡ್-19  ಡಿಜಿಟಲ್ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸುತ್ತಿರುವ ದಿಲೀಪ್, ಲಾಕ್ ಡೌನ್ ನಿಯಮಗಳ ಮಹತ್ವ ಕುರಿತಂತೆ ಜನರಿಗೆ ಸಂದೇಶ ಮೂಡಿಸಲಾಗುತ್ತಿದೆ ಎಂದು ಹೇಳಿದರು.

ನಾವು ಕುಟುಂಬದೊಂದಿಗೆ ಮನೆಯಲ್ಲಿ ಇದ್ದೇವೆ. ಆದರೆ, ಡಾಕ್ಟರ್, ಪೊಲೀಸ್ ಸಿಬ್ಬಂದಿ ತಮ್ಮನ್ನು ಹಾಗೂ ಅವರ ಕುಟುಂಬದ ಪ್ರಾಣವನ್ನು ಲೆಕ್ಕಿಸದೆ ನಮನೆಲ್ಲಾ ರಕ್ಷಿಸುತ್ತಿದ್ದಾರೆ.ಲಾಕ್ ಡೌನ್ ಗೆ ಗೌರವ ನೀಡುವಂತೆ ಜನರಲ್ಲಿ ಮನವಿ ಮಾಡಿಕೊಳ್ಳುವುದಾಗಿ ದಿಲೀಪ್ ಹೇಳಿದ್ದಾರೆ.  ಸೀಮಿತ ಪ್ರಮಾಣದ ಸಂಪನ್ಮೂಲಗಳಲ್ಲಿ ಮೂರು ಗಂಟೆಗಳ ಕಾಲ ಚಿತ್ರವನ್ನು ಚಿತ್ರೀಕರಿಸಲಾಗಿದೆ. 

ದಿಲೀಪ್ ಅಲ್ಲದೇ ಬೆಂಗಳೂರಿನ ಇತರ ಕಲಾವಿದರು  ಚಿತ್ರದಲ್ಲಿ ಅಭಿನಯಿಸಿದ್ದಾರೆ. ಕೋವಿಡ್-19 ಜೀವನವನ್ನು ಏರುಪೇರು ಮಾಡಿದೆ. ಆದರೆ,  ಇದೇ ಹಾದಿಯಲ್ಲಿ ನಾವೆಲ್ಲರೂ ಕೋವಿಡ್ -19 ವಾರಿಯರ್ ಪಾತ್ರ ಮಾಡಿರುವುದಾಗಿ ಮೀನಾ ಶಾಂತಲಾ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT