ವಿಜಯಲಕ್ಷ್ಮಿ ದರ್ಶನ್ 
ಸಿನಿಮಾ ಸುದ್ದಿ

ಹೊಸ ಉದ್ಯಮಕ್ಕೆ ಕಾಲಿಟ್ಟ ವಿಜಯಲಕ್ಷ್ಮಿ ದರ್ಶನ್‌: ರೈತರಿಗೆ ನೆರವಾಗಲಿದ್ದಾರಾ ಚಾಲೆಂಜಿಂಗ್ ಸ್ಟಾರ್ ಪತ್ನಿ?

ದರ್ಶನ್​ ಪತ್ನಿ ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿರುತ್ತಾರೆ. ಕೆಲವು ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವ ಇವರು, ಈಗ ಹೊಸ ಉದ್ಯಮ ಆರಂಭಿಸಿದ್ದಾರಂತೆ. ತಮ್ಮ ಈ ಹೊಸ ಪ್ರಯತ್ನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಬೆಂಗಳೂರು: ದರ್ಶನ್​ ಪತ್ನಿ ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿರುತ್ತಾರೆ. ಕೆಲವು ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವ ಇವರು, ಈಗ ಹೊಸ ಉದ್ಯಮ ಆರಂಭಿಸಿದ್ದಾರಂತೆ. ತಮ್ಮ ಈ ಹೊಸ ಪ್ರಯತ್ನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಈಗಾಗಲೇ ಅವರ ಹೊಸ ಉದ್ಯಮ ಆರಂಭಿಸೋಕೆ ಅಗತ್ಯವಿರುವ ಎಲ್ಲ ಸಿದ್ಧತೆ ಮಾಡಿಕೊಂಡಿದ್ದಾರಂತೆ. ಕಮಿಂಗ್​ ಸೂನ್​ ಎನ್ನುತ್ತಲೇ ತಾವು ಆರಂಭಿಸಲಿರುವ ಉದ್ಯಮದ ಕುರಿತು ಒಂದು ಸುಳಿವು ಕೊಟ್ಟಿದ್ದಾರೆ.

ವಿಜಯಲಕ್ಷ್ಮಿ ಹೊಸ ಉದ್ಯಮಕ್ಕೆ ಕಾಲಿಟ್ಟಿದ್ದಾರೆ. ಆಗಸ್ಟ್‌ 15ರಿಂದ ತರಕಾರಿ ಮತ್ತು ಹಣ್ಣು ಮಾರಾಟ ಪ್ರಾರಂಭ ಮಾಡಲಿದ್ದಾರೆ ಎನ್ನಲಾಗಿದೆ. ವಿಜಯಲಕ್ಷ್ಮಿ ಹಣ್ಣು-ತರಕಾರಿ ಮಾರುವ ಉದ್ಯಮಕ್ಕೆ ಕೈ ಹಾಕಿದ್ದಾರೆ. ಸದ್ಯದಲ್ಲೇ ಇದಕ್ಕೆ ಕಿಕ್​ ಸ್ಟಾರ್ಟ್​ ಸಿಗಲಿದೆ.

ಫೇಸ್‌ಬುಕ್‌ ಮತ್ತು ಟ್ವಿಟ್ಟರ್ ನಲ್ಲಿ ಕಮಿಂಗ್ ಸೂನ್ ' ಎಂದು ಪೋಸ್ಟ್‌ ಹಾಕಿದ್ದಾರೆ, ಫಾರ್ಮ್‌ ಫ್ರೆಶ್‌ ಹಣ್ಣು ಹಾಗೂ ತರಕಾರಿ ಮಾರಾಟಕ್ಕೆ, ಆಗಸ್ಟ್‌ 15ರಂದು ಚಾಲನೆ ನೀಡಲಿದ್ದಾರೆ.  ಇದು ಆನ್‌ಲೈನ್‌ ಮಾರಾಟವೇ ಮಾತ್ರವೇ ಅಥವಾ ಸ್ಟೋರ್‌ ಇರುತ್ತದೆಯೇ ಎಂದು ಅಭಿಮಾನಿಗಳು ಪ್ರಶ್ನಿಸಿದ್ದಾರೆ. ಡಿ-ಬಾಸ್‌ ಫ್ಯಾನ್ಸ್‌ ಇವರ ಈ ಉದ್ಯಮಕ್ಕೆ ಕೈ ಜೋಡಿಸಲು
ಸಜ್ಜಾಗಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸೌದಿಯಲ್ಲಿ ಬಸ್–ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಘೋರ ದುರಂತ: 45 ಮಂದಿ ಭಾರತೀಯ ಯಾತ್ರಿಕರು ದುರ್ಮರಣ, ಸಹಾಯವಾಣಿ ಆರಂಭ

"ನನಗೆ ಚಿಂತೆಯೇ ಇಲ್ಲ. ಅಲ್ಲಾಹ್ ಜೀವ ಕೊಟ್ಟಿದ್ದಾನೆ.. ಅವನೇ ತೆಗೆದುಕೊಳ್ಳುತ್ತಾನೆ": ಕೋರ್ಟ್ ತೀರ್ಪಿಗೂ ಮೊದಲು ಶೇಖ್ ಹಸೀನಾ!

ಬಿಹಾರದಲ್ಲಿ ಶಾಕಿಂಗ್ ಟ್ವಿಸ್ಟ್: ಎನ್ ಡಿಎಗೆ ಲಾಲೂ ಪ್ರಸಾದ್ ಪುತ್ರ ತೇಜ್ ಪ್ರತಾಪ್ ಯಾದವ್ ಬೆಂಬಲ!

ಬಿಹಾರ: ನ. 20ಕ್ಕೆ ನೂತನ ಸಿಎಂ ಪದ ಗ್ರಹಣ, ಪ್ರಧಾನಿ ಮೋದಿ ಸಮಾರಂಭದಲ್ಲಿ ಭಾಗಿ!

ಸಂಪುಟ ವಿಸ್ತರಣೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್: ಸಿಎಂ ಸಿದ್ದರಾಮಯ್ಯ ಓಟಕ್ಕೆ 'ಬಂಡೆ' ಬ್ರೇಕ್! KN ರಾಜಣ್ಣ ಕಮ್ ಬ್ಯಾಕ್?

SCROLL FOR NEXT