ಆದಿಪುರುಷ್ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ಆದಿಪುರಷನ ಅವತಾರ ತಾಳಿದ ಬಾಹುಬಲಿ: ಪೌರಾಣಿಕ ಪಾತ್ರದಲ್ಲಿ ಮಿಂಚಲಿದ್ದಾರೆ ಪ್ರಭಾಸ್, ಕನ್ನಡದಲ್ಲೂ ಬಿಡುಗಡೆಯಾಗಲಿದೆ ಚಿತ್ರ

ಭಾರತದ ಬಹುಬೇಡಿಕೆ ನಟರಾಗಿರುವ ಟಾಲಿವುಡ್ ರೆಬೆಲ್ ಸ್ಟಾರ್ ಪ್ರಭಾಸ್ ಅವರು ಅಭಿಮಾನಿಗಳಿಗೆ ಸರ್ಪ್ರೈಸ್ ವೊಂದನ್ನು ನೀಡಿದ್ದು, ತಮ್ಮನೇ 22ನೇ ಸಿನಿಮಾ ಹೆಸರನ್ನು ಬಹಿರಂಗಪಡಿಸಿದ್ದಾರೆ. 

ನವದೆಹಲಿ: ಭಾರತದ ಬಹುಬೇಡಿಕೆ ನಟರಾಗಿರುವ ಟಾಲಿವುಡ್ ರೆಬೆಲ್ ಸ್ಟಾರ್ ಪ್ರಭಾಸ್ ಅವರು ಅಭಿಮಾನಿಗಳಿಗೆ ಸರ್ಪ್ರೈಸ್ ವೊಂದನ್ನು ನೀಡಿದ್ದು, ತಮ್ಮನೇ 22ನೇ ಸಿನಿಮಾ ಹೆಸರನ್ನು ಬಹಿರಂಗಪಡಿಸಿದ್ದಾರೆ. 

ನಿರ್ದೇಶಕ ಓಂ ರಾವತ್ ನಿರ್ದೇಶನದ ಆದಿಪುರುಷ ಸಿನಿಮಾದಲ್ಲಿ ಪೌರಾಣಿಕ ಪಾತ್ರದಲ್ಲಿ ಪ್ರಭಾಸ್ ಅವರು ಕಾಣಿಸಿಕೊಳ್ಳುತ್ತಿದ್ದು, ಈ ಚಿತ್ರವು ಪ್ರಭಾಸ್ ಅವರ 22ನೇ ಸಿನಿಮಾವಾಗಿದೆ. 

ಚಿತ್ರದ ಟೈಟಲ್ ಪೋಸ್ಟರ್'ನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಇದು ಅಧರ್ಮದ ವಿರುದ್ಧ ಗೆಲುವು ಸಾಧಿಸಿದ್ದರ ಸಂಭ್ರಮ ಎಂಬ ಟ್ಯಾಗ್ ಲೈನ್'ನ್ನು ನೀಡಲಾಗಿದೆ. ಪೋಸ್ಟರ್'ನ್ನು ಗಮನಿಸಿದರೆ ಚಿತ್ರವೊಂದು ಸಾಹಸಮಯ ಸಿನಿಮಾವಾಗಿರಲಿದೆ ಎಂದು ಹೇಳಲಾಗುತ್ತಿದೆ. 

ಈ ಹಿಂದೆ ಬಾಹುಬಲಿಯಾಗಿ ಕಾಣಿಸಿಕೊಂಡಿದ್ದ ಪ್ರಭಾಸ್ ಅವರು ಆದಿಪುರುಷ್ ಚಿತ್ರದಲ್ಲಿ ಪೌರಾಣಿಕ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 

ಸಿನಿಮಾದ ಪೋಸ್ಟರ್ ನೋಡಿದರೆ, ಪ್ರಭಾಸ್ ಅವರು ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಪೋಸ್ಟರ್ ನಲ್ಲಿ ಬಿಲ್ಲು ಹಿಡಿದ ರಾಮ. ಹನುಮಂತ ಹಾಗೂ ಹತ್ತು ತಲೆಗಳ ರಾವಣನ ಚಿತ್ರಗಳಿರುವುದು ಕಂಡು ಬಂದಿದೆ. ಈ ಸಿನಿಮಾ ಕುರಿತಾಗಿ ಕೆಲವು ದಿನಗಳಿಂದ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದ್ದವು. ಆದರೆ, ಕಳೆದ ರಾತ್ರಿ ಪ್ರಭಾಸ್ ಹಾಗೂ ಓಂ ರಾವತ್ ಅವರೇ ಈ ಎಲ್ಲಾ ಸುದ್ದಿಗಳಿಗೂ ಸ್ಪಷ್ಟತೆಗಳನ್ನು ನೀಡಿದ್ದಾರೆ. 

ಅಜಯ್ ದೇವಗನ್ ಜೊತೆ ತಾನಾಜಿಯಂತಹ ಐತಿಹಾಸಿಕ ಹಿಟ್ ಸಿನಿಮಾ ಕೊಟ್ಟಿರುವ ನಿರ್ದೇಶಕ ಓಂ ರಾವತ್ ಅವರು ಇದೀಗ ಪೌರಾಣಿಕ ಸಿನಿಮಾಗೆ ಕೈ ಹಾಕಿದ್ದಾರೆ. ಓಂ ರಾವತ್ ಅವರ ತಾನಾಜಿ ಚಿತ್ರ ಬಾಕ್ಸಾಫಿಸ್ ನಲ್ಲಿ ಧೂಳೆಬ್ಬಿಸಿತ್ತು. ಇದೀಗ ಪ್ರಭಾಸ್ ಜೊತೆಗೆ ಮಾಡುತ್ತಿರುವ ಆದಿಪುರುಷ್ ಸಿನಿಮಾ ತೆಲುಗು ಹಾಗೂ ಹಿಂದಿಯಲ್ಲಿ ನಿರ್ಮಾಣವಾಗುತ್ತಿದ್ದು. ನಂತರ ಅದನ್ನು ಕನ್ನಡ, ತಮಿಳು, ಮಲಯಾಳಂ ಸೇರಿದಂದೆ ಇತರೆ ಅಂತರಾಷ್ಟ್ರೀಯ ಭಾಷೆಗಳಿಗೂ ಡಬ್ ಆಗಲಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT