ಆದಿಪುರುಷ್ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ಆದಿಪುರಷನ ಅವತಾರ ತಾಳಿದ ಬಾಹುಬಲಿ: ಪೌರಾಣಿಕ ಪಾತ್ರದಲ್ಲಿ ಮಿಂಚಲಿದ್ದಾರೆ ಪ್ರಭಾಸ್, ಕನ್ನಡದಲ್ಲೂ ಬಿಡುಗಡೆಯಾಗಲಿದೆ ಚಿತ್ರ

ಭಾರತದ ಬಹುಬೇಡಿಕೆ ನಟರಾಗಿರುವ ಟಾಲಿವುಡ್ ರೆಬೆಲ್ ಸ್ಟಾರ್ ಪ್ರಭಾಸ್ ಅವರು ಅಭಿಮಾನಿಗಳಿಗೆ ಸರ್ಪ್ರೈಸ್ ವೊಂದನ್ನು ನೀಡಿದ್ದು, ತಮ್ಮನೇ 22ನೇ ಸಿನಿಮಾ ಹೆಸರನ್ನು ಬಹಿರಂಗಪಡಿಸಿದ್ದಾರೆ. 

ನವದೆಹಲಿ: ಭಾರತದ ಬಹುಬೇಡಿಕೆ ನಟರಾಗಿರುವ ಟಾಲಿವುಡ್ ರೆಬೆಲ್ ಸ್ಟಾರ್ ಪ್ರಭಾಸ್ ಅವರು ಅಭಿಮಾನಿಗಳಿಗೆ ಸರ್ಪ್ರೈಸ್ ವೊಂದನ್ನು ನೀಡಿದ್ದು, ತಮ್ಮನೇ 22ನೇ ಸಿನಿಮಾ ಹೆಸರನ್ನು ಬಹಿರಂಗಪಡಿಸಿದ್ದಾರೆ. 

ನಿರ್ದೇಶಕ ಓಂ ರಾವತ್ ನಿರ್ದೇಶನದ ಆದಿಪುರುಷ ಸಿನಿಮಾದಲ್ಲಿ ಪೌರಾಣಿಕ ಪಾತ್ರದಲ್ಲಿ ಪ್ರಭಾಸ್ ಅವರು ಕಾಣಿಸಿಕೊಳ್ಳುತ್ತಿದ್ದು, ಈ ಚಿತ್ರವು ಪ್ರಭಾಸ್ ಅವರ 22ನೇ ಸಿನಿಮಾವಾಗಿದೆ. 

ಚಿತ್ರದ ಟೈಟಲ್ ಪೋಸ್ಟರ್'ನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಇದು ಅಧರ್ಮದ ವಿರುದ್ಧ ಗೆಲುವು ಸಾಧಿಸಿದ್ದರ ಸಂಭ್ರಮ ಎಂಬ ಟ್ಯಾಗ್ ಲೈನ್'ನ್ನು ನೀಡಲಾಗಿದೆ. ಪೋಸ್ಟರ್'ನ್ನು ಗಮನಿಸಿದರೆ ಚಿತ್ರವೊಂದು ಸಾಹಸಮಯ ಸಿನಿಮಾವಾಗಿರಲಿದೆ ಎಂದು ಹೇಳಲಾಗುತ್ತಿದೆ. 

ಈ ಹಿಂದೆ ಬಾಹುಬಲಿಯಾಗಿ ಕಾಣಿಸಿಕೊಂಡಿದ್ದ ಪ್ರಭಾಸ್ ಅವರು ಆದಿಪುರುಷ್ ಚಿತ್ರದಲ್ಲಿ ಪೌರಾಣಿಕ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 

ಸಿನಿಮಾದ ಪೋಸ್ಟರ್ ನೋಡಿದರೆ, ಪ್ರಭಾಸ್ ಅವರು ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಪೋಸ್ಟರ್ ನಲ್ಲಿ ಬಿಲ್ಲು ಹಿಡಿದ ರಾಮ. ಹನುಮಂತ ಹಾಗೂ ಹತ್ತು ತಲೆಗಳ ರಾವಣನ ಚಿತ್ರಗಳಿರುವುದು ಕಂಡು ಬಂದಿದೆ. ಈ ಸಿನಿಮಾ ಕುರಿತಾಗಿ ಕೆಲವು ದಿನಗಳಿಂದ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದ್ದವು. ಆದರೆ, ಕಳೆದ ರಾತ್ರಿ ಪ್ರಭಾಸ್ ಹಾಗೂ ಓಂ ರಾವತ್ ಅವರೇ ಈ ಎಲ್ಲಾ ಸುದ್ದಿಗಳಿಗೂ ಸ್ಪಷ್ಟತೆಗಳನ್ನು ನೀಡಿದ್ದಾರೆ. 

ಅಜಯ್ ದೇವಗನ್ ಜೊತೆ ತಾನಾಜಿಯಂತಹ ಐತಿಹಾಸಿಕ ಹಿಟ್ ಸಿನಿಮಾ ಕೊಟ್ಟಿರುವ ನಿರ್ದೇಶಕ ಓಂ ರಾವತ್ ಅವರು ಇದೀಗ ಪೌರಾಣಿಕ ಸಿನಿಮಾಗೆ ಕೈ ಹಾಕಿದ್ದಾರೆ. ಓಂ ರಾವತ್ ಅವರ ತಾನಾಜಿ ಚಿತ್ರ ಬಾಕ್ಸಾಫಿಸ್ ನಲ್ಲಿ ಧೂಳೆಬ್ಬಿಸಿತ್ತು. ಇದೀಗ ಪ್ರಭಾಸ್ ಜೊತೆಗೆ ಮಾಡುತ್ತಿರುವ ಆದಿಪುರುಷ್ ಸಿನಿಮಾ ತೆಲುಗು ಹಾಗೂ ಹಿಂದಿಯಲ್ಲಿ ನಿರ್ಮಾಣವಾಗುತ್ತಿದ್ದು. ನಂತರ ಅದನ್ನು ಕನ್ನಡ, ತಮಿಳು, ಮಲಯಾಳಂ ಸೇರಿದಂದೆ ಇತರೆ ಅಂತರಾಷ್ಟ್ರೀಯ ಭಾಷೆಗಳಿಗೂ ಡಬ್ ಆಗಲಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT