ಸಿನಿಮಾ ಸುದ್ದಿ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಗಂಭೀರ: ಶೀಘ್ರ ಗುಣಮುಖರಾಗುವಂತೆ ಮಂಗಳಮುಖಿಯರಿಂದ ವಿಶೇಷ ಪ್ರಾರ್ಥನೆ  

Nagaraja AB

ಚೆನ್ನೈ: ಕೋವಿಡ್- 19 ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ದೇಶದ ಹೆಮ್ಮೆಯ  ಗಾಯಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ  ಚಿಕಿತ್ಸೆ ಮುಂದುವರೆಸಲಾಗಿದೆ. 

ಬಾಲಸುಬ್ರಹ್ಮಣ್ಯಂ ಅವರ  ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ ಎಂದು ಎಂಜಿಎಂ ಆಸ್ಪತ್ರೆಯ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ 
ನೀಡಲಾಗಿದೆ.ಅವರು ತೀವ್ರ ನಿಗಾ ಘಟಕದಲ್ಲಿದ್ದು, ವೆಂಟಿಲೇಟರ್ ಅಳವಡಿಸಲಾಗಿದೆ.ನುರಿತ ವೈದ್ಯರ ತಂಡ ಆರೋಗ್ಯದ ಮೇಲೆ ಗಮನ ನೀಡಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಮಧ್ಯೆ ಅವರು ಬೇಗನೆ ಗುಣಮುಖರಾಗಲಿ ಎಂದು ಕರ್ನಾಟಕ,ಚೆನ್ನೈ ಸೇರಿದಂತೆ ಹಲವೆಡೆ ಅವರ ಅಭಿಮಾನಿಗಳು ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.ಚೆನ್ನೈನ ಆಸ್ಪತ್ರೆ ಮುಂಭಾಗ ಮಂಗಳಮುಖಿಯರು ಇಂದು ಎಸ್.ಪಿ. ಬಾಲಸುಬ್ರಹ್ಮಣ್ಯಂ ಬೇಗ ಚೇತರಿಸಿಕೊಳ್ಳಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

SCROLL FOR NEXT