ಎಸ್ ಪಿ ಬಾಲಸುಬ್ರಹ್ಮಣ್ಯಂ 
ಸಿನಿಮಾ ಸುದ್ದಿ

ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಸ್ಥಿರತೆ- ಆಸ್ಪತ್ರೆ

ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಆಸ್ಪತ್ರೆಯಲ್ಲಿ ಹೋರಾಟ ನಡೆಸುತ್ತಿರುವ ದೇಶದ ಹೆಮ್ಮೆಯ ಗಾಯಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆ ಶುಕ್ರವಾರ ತಿಳಿಸಿದೆ.

ಚೆನ್ನೈ: ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಆಸ್ಪತ್ರೆಯಲ್ಲಿ ಹೋರಾಟ ನಡೆಸುತ್ತಿರುವ ದೇಶದ ಹೆಮ್ಮೆಯ ಗಾಯಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆ ಶುಕ್ರವಾರ ತಿಳಿಸಿದೆ.

74 ವರ್ಷದ ನಟ, ಗಾಯಕ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ವೆಂಟಿಲೇಟರ್ ಹಾಗೂ ಇಸಿಎಂಒ ನೆರವಿನಲ್ಲಿ ಇರುವುದಾಗಿ ಎಂಜಿಎಂ ಹೆಲ್ತ್ ಕೇರ್ ನ ವೈದ್ಯಕೀಯ ಸೇವೆಯ ಸಹಾಯಕ ನಿರ್ದೇಶಕ ಡಾ. ಅನುರಾಧ ಭಾಸ್ಕರನ್ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದ್ದಾರೆ.

ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಪ್ರಸ್ತುತ ಸ್ಥಿರವಾಗಿದೆ. ವೈದ್ಯಕೀಯ ತಜ್ಞರನ್ನೊಳಗೊಂಡ ಬಹು ಶಿಸ್ತಿನ ತಂಡ
ಹತ್ತಿರದಲ್ಲಿದ್ದು, ಎಸ್ ಪಿಬಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದೆ. ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆ ಹಾಗೂ ಪ್ರಗತಿ ಬಗ್ಗೆ
ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗುತ್ತಿದೆ ಎಂದು ಭಾಸ್ಕರನ್ ಹೇಳಿದ್ದಾರೆ.

ಎಸ್ ಪಿ ಬಾಲಸುಬ್ರಹ್ಮಣ್ಯರಂ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥನೆ ಸಲ್ಲಿಸಿರುವ ಎಲ್ಲರಿಗೂ ಧನ್ಯವಾದ ಆರ್ಪಿಸಿರುವ ಅವರ
ಪುತ್ರ ಚರಣ್, ನಿನ್ನೆ ಗಂಭೀರ ಪರಿಸ್ಥಿತಿಯಲ್ಲಿದ್ದ ತಮ್ಮ ತಂದೆಯ ಆರೋಗ್ಯ ಇಂದು ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂಬರ್ಥವಲ್ಲಾ, ಅವರ ದೇಹದ ಎಲ್ಲಾ ಭಾಗಗಳು ಕಾರ್ಯನಿರ್ವಹಿಸುತ್ತಿದ್ದು, ವೈದ್ಯರ
 ತಂಡದ ಮೇಲೆ ಸಂಪೂರ್ಣ ನಂಬಿಕೆ ಹೊಂದಿದ್ದೇವೆ ಎಂದು ಚರಣ್ ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ.

ಜನಪ್ರಿಯ ಗಾಯಕರಾಗಿರುವ ಎಸ್ ಪಿ ಬಾಲಸುಬ್ರಹ್ಮಣ್ಯಂ ಕೋವಿಡ್-19 ತಗುಲಿದ ಬಳಿಕ ಆಗಸ್ಟ್ 5 ರಿಂದ ಆಸ್ಪತ್ರೆಯಲ್ಲಿ
ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT