ಸಿನಿಮಾ ಸುದ್ದಿ

ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ: ಸಿಬಿಐ ಅಧಿಕಾರಿಗಳಿಂದ ಅಡುಗೆ ಭಟ್ಟನ ವಿಚಾರಣೆ

Shilpa D

ಮುಂಬಯಿ: ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಮುಂದುವರಿಸಿದ್ದು, ನಟನ ಮನೆಯ ಅಡುಗೆ ಕೆಲಸದವನನ್ನು ವಿಚಾರಣೆಗೊಳಪಡಿಸಲಾಗಿದೆ.

ನಿನ್ನೆ ಸಿಬಿಐ ತಂಡ ಸಾಂತಾಕ್ರೂಜ್ ನಲ್ಲಿರುವ ಅತಿಥಿ ಗೃಹಕ್ಕೆ ಭಟ್ಟನನ್ನು ಕರೆತರಲಾಗಿತ್ತು,  ಪ್ರಕರಣದ ವಿಚಾರಣೆ ನಡೆಸುತ್ತಿರುವ ಅಧಿಕಾರಿಗಳು ಬಾಂದ್ರಾ ಪೊಲೀಸ್ ಠಾಣೆಗೆ ಆಗಮಿಸಿದ್ದರು.

ಶುಕ್ರವಾರ ಇಬ್ಬರು ಮುಂಬಯಿ ಪೊಲೀಸರು ಸುಶಾಂತ್ ಮನೆಗೆ ಭೇಟಿ ನೀಡಿದ್ದರು. ನಾವು ಸಿಬಿಐ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುತ್ತಿರುವುದಾಗಿ ಮುಂಬಯಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ತಿಳಿಸಿದ್ದಾರೆ.

ಜೂನ್ 14 ರಂದು ನಟ ಸುಶಾಂತ್ ಸಿಂಗ್ ರಜಪೂತ್ ತಮ್ಮ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. 
 

SCROLL FOR NEXT