ತಮ್ಮ ಮುಂದಿನ ಚಿತ್ರದಲ್ಲಿ ರಗಡ್ ಲುಕ್ ನಲ್ಲಿ ವಿಕ್ರಮ್ ರವಿಚಂದ್ರನ್ 
ಸಿನಿಮಾ ಸುದ್ದಿ

ತಮ್ಮ ಮುಂದಿನ ಚಿತ್ರದಲ್ಲಿ ರಗಡ್ ಲುಕ್ ನಲ್ಲಿ ವಿಕ್ರಮ್ ರವಿಚಂದ್ರನ್

​ವಿಕ್ರಮ್ ರವಿಚಂದ್ರನ್ ಅವರ ಮೊದಲ ಸಿನಿಮಾ ತ್ರಿವಿಕ್ರಮ ಬಿಡುಗಡೆಗೆ ಅವರ ಅಭಿಮಾನಿಗಳು ಕಾಯುತ್ತಿರುವಾಗಲೇ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಪುತ್ರ ಎರಡನೇ ಸಿನಿಮಾಗೆ ತಯಾರಾಗುತ್ತಿದ್ದಾರೆ. 

ವಿಕ್ರಮ್ ರವಿಚಂದ್ರನ್ ಅವರ ಮೊದಲ ಸಿನಿಮಾ ತ್ರಿವಿಕ್ರಮ ಬಿಡುಗಡೆಗೆ ಅವರ ಅಭಿಮಾನಿಗಳು ಕಾಯುತ್ತಿರುವಾಗಲೇ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಪುತ್ರ ಎರಡನೇ ಸಿನಿಮಾಗೆ ತಯಾರಾಗುತ್ತಿದ್ದಾರೆ. 

ಪ್ರಿಯಾಮಣಿ, ಅಮಿತಾಬ್ ಬಚ್ಚನ್ (ವಾಯ್ಸ್ ಓವರ್) ರಂತಹ ತಾರಾಗಣವನ್ನಿಟ್ಟುಕೊಂಡು ನೇತ್ರದಾನದ ಕುರಿತು ವೈಟ್ ಎಂಬ ಕಿರು ಚಿತ್ರ ನಿರ್ದೇಶಿಸಿದ್ದ ಸಹಾಯಕ ನಿರ್ದೇಶಕ ಮನು ನಾಗ್ ವಿಕ್ರಮ್ ರವಿಚಂದ್ರನ್ ಅವರ ಎರಡನೇ ಚಿತ್ರವನ್ನು ನಿರ್ದೇಶಿಸುವ ಮೂಲಕ ಮೊದಲ ಬಾರಿಗೆ ನಿರ್ದೇಶನಕ ಕ್ಯಾಪ್ ತೊಡಲಿದ್ದಾರೆ. 

ಮನು ನಾಗ್ ಮಲಯಾಳಂ ನಲ್ಲಿ ಅಥಿಧಿಕಲ್, ಕನ್ನಡದಲ್ಲಿ ಬೆಳ್ಳಿ, ಯೋಗರಾಜ್ ಭಟ್ಟರ ದನ ಕಾಯೋನು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕಾರ್ಯನಿರ್ವಹಿಸಿದ್ದಾರೆ.

ವಿಕ್ರಮ್ ರವಿಚಂದ್ರನ್ ಅವರು ಮನು ನಿರ್ದೇಶಿಸುತ್ತಿರುವ ಚಿತ್ರದಲ್ಲಿ ರಗಡ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದು, ಚಿತ್ರ ಪೋಷಕರು ಮತ್ತು ಮಗನ ನಡುವಿನ ಭಾವನೆಗಳ ಸುತ್ತ ಹೆಣೆದಿರುವ ಕಥಾಹಂದರವನ್ನು ಹೊಂದಿರಲಿದೆ. 

"ವಿಕ್ರಮ್ ಚಿತ್ರಕಥೆಯನ್ನು ಇಷ್ಟಪಟ್ಟಿದ್ದಾರೆ, ಅವರ ಪಾತ್ರದ ಚಿತ್ರಣವನ್ನೂ ಮೆಚ್ಚಿದ್ದಾರೆ. ಈ ಸಿನಿಮಾಗೆ ಅವರು ಒಪ್ಪಿಗೆ ಸೂಚಿಸಿದ್ದು, ತಯಾರಿ ಕೆಲಸ ಭರದಿಂದ ಸಾಗಿದೆ, ಪ್ರೊಡಕ್ಷನ್ ಹೌಸ್, ಉಳಿದ ತಾರಾಗಣಗಳ ಬಗ್ಗೆ ಚಿತ್ರತಂಡ ಹಾಗೂ ನಟ ವಿಕ್ರಮ್ ರವಿಚಂದ್ರನ್ ಶೀಘ್ರವೇ  ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. 

ಅಂದಹಾಗೆ ವಿಕ್ರಮ್ ರವಿಚಂದ್ರನ್ ಮೊದಲ ಬಾರಿಗೆ ನಟಿಸಿದ್ದ, ಸಹನಾ ಮೂರ್ತಿ ನಿರ್ದೇಶನದ ಸಿನಿಮಾ ತ್ರಿವಿಕ್ರಮದ ಟೀಸರ್ ಪೋಸ್ಟರ್ ಗಳು ನಿರೀಕ್ಷೆಗಳನ್ನು ಹೆಚ್ಚಿಸಿದೆ. ತ್ರಿವಿಕ್ರಮ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, 2 ಹಾಡುಗಳ ಚಿತ್ರೀಕರಣ ಬಾಕಿ ಇದೆ. ಗೌರಿ ಎಂಟರ್ಟೈನರ್ಸ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಚಿತ್ರ ದೇಶಾದ್ಯಂತ ತೆರೆ ಕಾಣಲಿದ್ದು, ತಮಿಳು, ತೆಲುಗು, ಮಲಯಾಳಂ, ಹಿಂದಿಗಳಲ್ಲಿಯೂ ತೆರೆ ಕಾಣಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT