ಸಿನಿಮಾ ಸುದ್ದಿ

ಎಸ್‌ಪಿಬಿಗೆ ಕೊರೋನಾ ನೆಗೆಟಿವ್ ಬಂದಿರೋದು ಸುಳ್ಳು! ವದಂತಿ ಹರಡಬೇಡಿ ಎಂದ ಪುತ್ರ ಚರಣ್

ಖ್ಯಾತ ಹಿನ್ನೆಲೆ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ (ಎಸ್‌ಪಿಬಿ) ಅವರಿಗೆ ಕೊರೋನಾ ನೆಗೆಟಿವ್ ಬಂದಿದೆ ಎಂಬ ವದಂತಿಗಳು ಹರಿದಾಡಿದ ಕೆಲವೇ ಗಂಟೆಗಳ ಬಳಿಕ ಇದೀಗ ಅವರ ಪುತ್ರ ಎಸ್‌ಪಿ ಚರಣ್ ಸ್ಪಷ್ಟೀಕರಣ ನೀಡಿದ್ದಾರೆ.

ಖ್ಯಾತ ಹಿನ್ನೆಲೆ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ (ಎಸ್‌ಪಿಬಿ) ಅವರಿಗೆ ಕೊರೋನಾ ನೆಗೆಟಿವ್ ಬಂದಿದೆ ಎಂಬ ವದಂತಿಗಳು ಹರಿದಾಡಿದ ಕೆಲವೇ ಗಂಟೆಗಳ ಬಳಿಕ ಇದೀಗ ಅವರ ಪುತ್ರ ಎಸ್‌ಪಿ ಚರಣ್ ಸ್ಪಷ್ಟೀಕರಣ ನೀಡಿದ್ದಾರೆ.

ಫೇಸ್‌ಬುಕ್  ನಲ್ಲಿ  ವೀಡಿಯೊ ಹೇಳಿಕೆ ಬಿಡುಗಡೆ ಮಾಡುವ ಮೂಲಕ "ಅಪ್ಪನಿಗೆ ಕೋವಿಡ್ ನೆಗೆಟಿವ್ ಬಂದಿದೆ ಎಂಬ ಮಾಹಿತಿ ನನ್ನಿಂದ ಹೇಳಲ್ಪಟ್ಟದ್ದಲ್ಲ. ವದಂತಿಗಳನ್ನು ಹರಡದಿರಿ, ವದಂತಿಗಳಿಗೆ ಕಿವಿ ಕೊಡದಿರಿ" ಎಂದು ಚರಣ್ ಹೇಳಿದ್ದಾರೆ.

ತಮ್ಮ ಅಧಿಕೃತ ಫೇಸ್‌ಬುಕ್  ಖಾತೆಯಲ್ಲಿ  ಎಸ್‌ಪಿ ಚರಣ್ ಅವರು ಆಸ್ಪತ್ರೆಯಿಂದ ಎಸ್‌ಪಿಬಿಯ ಆರೋಗ್ಯ ಸ್ಥಿತಿಯ ಬಗ್ಗೆ ನೇರ ಮಾಹಿತಿ ಪಡೆಯುವ  ಏಕೈಕ ವ್ಯಕ್ತಿ ನಾನು. . “ನಾನು ಸಾಮಾನ್ಯವಾಗಿ ಆಸ್ಪತ್ರೆಯ  ವೈದ್ಯಕೀಯ ತಂಡದೊಂದಿಗೆ ಚರ್ಚಿಸಿದ ನಂತರ ಅಪ್ಪನವರ  ಆರೋಗ್ಯ ಸ್ಥಿತಿಯ ಬಗೆಗೆ  ಪೋಸ್ಟ್ ಮಾಡುತ್ತೇನೆ. ಆದರೆ ದುರದೃಷ್ಟವಶಾತ್, ನಾನು ಬೆಳಿಗ್ಗೆ ಒಂದು ಪೋಸ್ಟ್ ಹಾಕಲು ಒತ್ತಡದಲ್ಲಿದ್ದೆ"

ಸೋಮವಾರ, ಎಸ್‌ಪಿಬಿ ಕೊರೋನಾವೈರಸ್ ನೆಗೆಟಿವ್ ವರದಿ ಸಿಕ್ಕಿದೆ ಎನ್ನುವ ವದಂತಿ ಎಲ್ಲೆಡೆ ಹರಡುತ್ತಿದೆ. ಇದು ದುರದೃಷ್ಟಕರ. "ಕೋವಿಡ್ ನೆಗೆಟಿವ್ ಅಥವಾ ಪಾಸಿಟಿವ್ ಏನೇ ಆಗಿದ್ದರೂ ಆರೋಗ್ಯ) ಸ್ಥಿತಿ ಇನ್ನೂ  ಹಾಗೆಯೇ ಇದೆ, " ಎಂದು ಅವರು ಹೇಳಿದರು. ಎಸ್‌ಪಿಬಿ ಅವರಿಗೆ ಲೈಫ್ ಸಪೋರ್ಟ್ ಅನ್ನು ಮುಂದುವರಿಸಲಾಗಿದೆ. , ಆದರೆ ಅವರ ಪ್ರಮುಖ ಆರೋಗ್ಯ ಸ್ಥಿತಿ ಸ್ಥಿರವಾಗಿವೆ. ಆಸ್ಪತ್ರೆಯ ವೈದ್ಯರು ಮತ್ತು ವೈದ್ಯಕೀಯ ತಂಡದೊಂದಿಗೆ ಚರ್ಚಿಸಿದ ನಂತರ ಇಂದು ಸಂಜೆ ಗಾಯಕನ ಆರೋಗ್ಯದ ಬಗ್ಗೆ ವಿವರ ನೀಡುತ್ತೇನೆ ಎಂದು ಅವರು ಹೇಳಿದರು.

ಗಾಯಕ ಎಸ್‌ಪಿಬಿ ಆಗಸ್ಟ್ 5 ರಂದು ಚೆನ್ನೈನ ಎಂಜಿಎಂ ಹೆಲ್ತ್‌ಕೇರ್ ಆಸ್ಪತ್ರೆಗೆ ದಾಖಲಾಗಿದ್ದರು. ಎದೆಯ ನೋವಿನ ಸಾಂಬಂಧ ಸಮಸ್ಯೆ ತೋರಿದ ನಂತರ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆ ವೇಳೆ ಗಾಯಕನಿಗೆ ಕೊರೋನಾ ಇರುವುದು ದೃಢವಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT