ಇಂದ್ರಜಿತ್ ಲಂಕೇಶ್ 
ಸಿನಿಮಾ ಸುದ್ದಿ

ಇತ್ತೀಚೆಗೆ ಮೃತಪಟ್ಟ ನಟನ ಕುರಿತ ಹೇಳಿಕೆ ಹಿಂಪಡೆಯುವೆ, ಸಿಸಿಬಿಗೆ 10-15 ಹೆಸರು ಕೊಟ್ಟಿದ್ದೇನೆ: ಇಂದ್ರಜಿತ್ ಲಂಕೇಶ್

ಮಾದಕ ಜಗತ್ತಿಗೂ ಚಂದನವನಕ್ಕೂ ನಂಟಿದೆ ಎಂಬ ಆರೋಪಕ್ಕೆ ತಮ್ಮ ಸಾಕ್ಷ್ಯಧಾರದಿಂದ ಮತ್ತಷ್ಟು ಪುಷ್ಟಿ ನೀಡಿರುವ ಇಂದ್ರಜಿತ್ ಲಂಕೇಶ್ ಅವರು, ಚಿರಂಜೀವಿ ಸರ್ಜಾ ಕುರಿತು ನೀಡಿದ್ದ ಹೇಳಿಕೆ ಹಿಂಪಡೆಯುವುದಾಗಿ ಸೋಮವಾರ ಹೇಳಿದ್ದಾರೆ.

ಬೆಂಗಳೂರು: ಮಾದಕ ಜಗತ್ತಿಗೂ ಚಂದನವನಕ್ಕೂ ನಂಟಿದೆ ಎಂಬ ಆರೋಪಕ್ಕೆ ತಮ್ಮ ಸಾಕ್ಷ್ಯಧಾರದಿಂದ ಮತ್ತಷ್ಟು ಪುಷ್ಟಿ ನೀಡಿರುವ ಇಂದ್ರಜಿತ್ ಲಂಕೇಶ್ ಅವರು, ಚಿರಂಜೀವಿ ಸರ್ಜಾ ಕುರಿತು ನೀಡಿದ್ದ ಹೇಳಿಕೆ ಹಿಂಪಡೆಯುವುದಾಗಿ ಸೋಮವಾರ ಹೇಳಿದ್ದಾರೆ.

ಇಂದು ನಗರದ ಚಾಮರಾಜಪೇಟೆಯಲ್ಲಿನ ಸಿಸಿಬಿ ಕಚೇರಿಯಲ್ಲಿ ಸುಮಾರು ಐದು ಗಂಟೆಗಳ ಕಾಲ ವಿಚಾರಣೆ ಎದುರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇಂದ್ರಜಿತ್ ಅವರು, ನೇರವಾಗಿ ಚಿರಂಜೀವಿ ಸರ್ಜಾ ಅವರ ಹೆಸರು ಹೇಳದೆ, ಡ್ರಗ್ಸ್ ಜಾಲಕ್ಕೆ ಸಂಬಂಧಿಸಿ ಇತ್ತೀಚಿಗೆ ಮೃತಪಟ್ಟ ಯುವ ನಟನ ಮರಣೋತ್ತರ ಪರೀಕ್ಷೆ ನಡೆಸಬೇಕಿತ್ತು ಎಂಬ ಹೇಳಿಕೆ ಹಿಂಪಡೆಯುವೆ ಎಂದಿದ್ದಾರೆ.

ಸಿಸಿಬಿ ಅಧಿಕಾರಿಗಳ ಜತೆ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದೇನೆ. ಅವರ ತನಿಖೆಗೆ ಬೇಕಾದ ಎಲ್ಲ ಮಾಹಿತಿಗಳನ್ನು ಕೊಟ್ಟಿದ್ದೇನೆ. ನಿನ್ನೆ ಮೊನ್ನೆ ಬಂದ ನಟರು ಡ್ರಗ್ಸ್‌ ಮಾಫಿಯಾಗೆ ಬ್ರಾಂಡ್ ಅಂಬಾಸಿಡರ್‌ಗಳು ಆಗಿದ್ದಾರೆ. ನಾನು ಇದುವರೆಗೂ ಹೇಳಿದ ಮಾತಿಗೆ ಬದ್ಧನಾಗಿದ್ದೇನೆ. ನನ್ನ ಬಳಿರುವ ಎಲ್ಲ ಮಾಹಿತಿಗಳನ್ನು ಅಧಿಕಾರಿಗಳಿಗೆ ನೀಡಿದ್ದೇನೆ. ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಅವರ ತನಿಖೆಗೆ ಸಹಕಾರವಾಗುವಂತೆ ನನಗೆ ತಿಳಿದ ಎಲ್ಲ ಮಾಹಿತಿಗಳನ್ನು ಅವರಿಗೆ ಕೊಟ್ಟಿದ್ದೇನೆ ಎಂದು ಇಂದ್ರಜಿತ್ ತಿಳಿಸಿದ್ದಾರೆ.

'ಯುವ ನಟರು, ಮಕ್ಕಳು, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಡ್ರಗ್ಸ್‌ ಜಾಲ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಇದರ ಕುರಿತಾಗಿ ಯುವಜನತೆಗೆ ಅರಿವು ಮೂಡಿಸಬೇಕು. ಅದಕ್ಕಾಗಿ ಏನು ಮಾಡಬೇಕೋ ಅದನ್ನು ಮಾಡಿದ್ದೇನೆ. ಆದರೆ, ಈಗ ಕೆಲವರ ಹೆಸರುಗಳನ್ನು ಹೇಳುವುದು ದೊಡ್ಡದಲ್ಲ. ಇದರಿಂದ ತನಿಖೆಗೆ ತೊಂದರೆ ಆಗಲಿದೆ. ಹೆಸರು ಹೇಳಿ ಅವರಿಗೆ ವೈಯಕ್ತಿಕವಾಗಿ ಹರ್ಟ್ ಮಾಡಬೇಕು ಅನ್ನೋ ಉದ್ದೇಶ ನನಗಿಲ್ಲ. ನಾನು ಯಾರಿಗೆ ತಲುಪಿಸಬೇಕೋ ಅವರಿಗೆ ಸಾಕ್ಷಿ ಸಮೇತ, ತಿಳಿಸಿದ್ದೇನೆ. ಇದರಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೋ, ಅವರೆಲ್ಲರ ಹೆಸರನ್ನು ಅಧಿಕಾರಿಗಳಿಗೆ ನೀಡಿದ್ದೇನೆ. ಸುಮಾರು 10-15 ಜನರ ಹೆಸರು ಕೊಟ್ಟಿದ್ದೇನೆ. ಅಧಿಕಾರಿಗಳ ಬಳಿಯೂ ಒಂದಷ್ಟು ಮಾಹಿತಿ ಇತ್ತು. ಅವರು ಇದರಲ್ಲಿ ಯಶಸ್ಸು ಪಡೆಯಲಿದ್ದಾರೆ ಎಂಬ ನಂಬಿಕೆ ಇದೆ ಎಂದಿದ್ದಾರೆ.

ನಾನು ಏನೆಲ್ಲ ಮಾಹಿತಿಗಳನ್ನು, ಸಾಕ್ಷಿಗಳನ್ನು ನೀಡಿದ್ದೇನೆ ಎಂಬುದನ್ನು ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲ. ಎಷ್ಟೇ ಪ್ರಯತ್ನಪಟ್ಟರು ಆ ಬಗ್ಗೆ ನಾನು ಮಾಧ್ಯಮಗಳಿಗೆ ಮಾಹಿತಿ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ಇಂದ್ರಜಿತ್ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT