ಸುನಿಲ್ ಪುರಾಣಿಕ್ - ಸಿಎಂ ಯಡಿಯೂರಪ್ಪ ಹಾಗೂ ಶೃತಿ 
ಸಿನಿಮಾ ಸುದ್ದಿ

13ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವಕ್ಕೆ ಸಿಎಂ ಯಡಿಯೂರಪ್ಪ ಸಮ್ಮತಿ

ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಗಳತ್ತ ಸೆಳೆಯಲು 13ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವ ಪೂರಕ ವಾತಾವರಣವನ್ನು ನಿರ್ಮಿಸಲಿದೆ.

ಬೆಂಗಳೂರು: ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಗಳತ್ತ ಸೆಳೆಯಲು 13ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವ ಪೂರಕ ವಾತಾವರಣವನ್ನು ನಿರ್ಮಿಸಲಿದೆ. ಆದಕಾರಣ, 2021ರ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ ಸಿನಿಮೋತ್ಸವವನ್ನು ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ಅವರ ನೇತೃತ್ವದ ನಿಯೋಗ ಮಾಡಿದ ಮನವಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಂದಿಸಿದ್ದಾರೆ.

ಸುನಿಲ್ ಪುರಾಣಿಕ್ ನೇತೃತ್ವದ ನಿಯೋಗ ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, 3ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವ ಆಯೋಜಿಸಲು ಅನುಮತಿ ನೀಡುವಂತೆ ಕೋರಿದೆ.

ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವ ಸತತ ಕಳೆದ 12 ವರ್ಷಗಳ ಕಾಲ ಯಶಸ್ಸನ್ನು ಕಂಡಿದೆ. ವಿಶ್ವದಲ್ಲಿ 5000 ಸ್ಥಳಗಳಲ್ಲಿ ಚಲನಚಿತ್ರೋತ್ಸವಗಳು ನಡೆಯುತ್ತವೆ. ಆದರೆ, ಅವುಗಳಲ್ಲಿ ಕೇವಲ 45 ಚಲನಚಿತ್ರೋತ್ಸವಗಳಿಗೆ ಅಂತರಾಷ್ಟ್ರೀಯ ಮಾನ್ಯತೆ ದೊರೆತಿದೆ. ಇದೀಗ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವಕ್ಕೆ ಅಂತರಾಷ್ಟ್ರೀಯ ಮಾನ್ಯತೆ ದೊರೆಯುವ ಲಕ್ಷಣಗಳು ಗೋಚರಿಸುತ್ತಿವೆ. ಒಂದು ವೇಳೆ ಮಾನ್ಯತೆ ದೊರೆತರೆ ಇದು ವಿಶ್ವದಲ್ಲಿ 46ನೇ ಮಾನ್ಯತೆ ಪಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಎಂಬ ಹೆಗ್ಗಳಿಕೆಗೆ ಪಾತ್ರವಾಗುತ್ತದೆ. ಆದ್ದರಿಂದ 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವವನ್ನು ಆಯೋಜಿಸಲು ಸಮ್ಮತಿ ನೀಡುವಂತೆಯೂ ಹಾಗೂ ಅದಕ್ಕೆ ಅಗತ್ಯ ಅನುದಾನವನ್ನು ದೊರಕಿಸಿಕೊಡುವಂತೆಯೂ ನಿಯೋಗವು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತು.

ಭಾರತದಲ್ಲಿ ಕೇವಲ ನಾಲ್ಕು ಸ್ಥಳಗಳಲ್ಲಿ ಚಲನಚಿತ್ರೋತ್ಸವಗಳು ನಡೆಯುತ್ತವೆ. ಗೋವಾದಲ್ಲಿ ಭಾರತ ಸರ್ಕಾರ ಚಲನಚಿತ್ರೋತ್ಸವವನ್ನು ಆಯೋಜಿಸುತ್ತದೆ. ಉಳಿದಂತೆ ಪಶ್ಚಿಮ ಬಂಗಾಳ, ಕರ್ನಾಟಕ ಮತ್ತು ಕೇರಳ ರಾಜ್ಯ ಸರ್ಕಾರಗಳು ಚಲನನಚಿತ್ರೋತ್ಸವಗಳನ್ನು ಆಯೋಜಿಸುತ್ತಿವೆ ಎಂಬ ಅಂಶವನ್ನು ನಿಯೋಗವು ಮುಖ್ಯಮಂತ್ರಿಯವರ ಗಮನಕ್ಕೆ ತಂದಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT