ನಟ ಚೇತನ್ 
ಸಿನಿಮಾ ಸುದ್ದಿ

ಭೂ ಕಾಯ್ದೆ ಅಂಗೀಕಾರ: ದುಃಖದ ದಿನ ಎಂದ ನಟ ಚೇತನ್‌, ದೇವೇಗೌಡ, ಕುಮಾರಸ್ವಾಮಿ ವಿರುದ್ಧವೂ ಆಕ್ರೋಶ

ರಾಜ್ಯ ಸರ್ಕಾರ ಮಂಡಿಸಿದ ಭೂ ಸುಧಾರಣಾ ಕಾಯ್ದೆ(ಎರಡನೇ ತಿದ್ದುಪಡಿ)–2020 ಮಸೂದೆಯು ವಿಧಾನ ಪರಿಷತ್‌ನಲ್ಲಿ ಜೆಡಿಎಸ್‌ ಬೆಂಬಲದೊಂದಿಗೆ ಅಂಗೀಕಾರ..

ಬೆಂಗಳೂರು: ರಾಜ್ಯ ಸರ್ಕಾರ ಮಂಡಿಸಿದ ಭೂ ಸುಧಾರಣಾ ಕಾಯ್ದೆ(ಎರಡನೇ ತಿದ್ದುಪಡಿ)–2020 ಮಸೂದೆಯು ವಿಧಾನ ಪರಿಷತ್‌ನಲ್ಲಿ ಜೆಡಿಎಸ್‌ ಬೆಂಬಲದೊಂದಿಗೆ ಅಂಗೀಕಾರಗೊಂಡಿರುವುದಕ್ಕೆ ಸ್ಯಾಂಡಲ್ ವುಡ್ ನಟ, ಸಾಮಾಜಿಕ ಹೋರಾಟಗಾರ ಚೇತನ್ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ 'ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ 2020' ರೈತ ವಿರೋಧಿಯಾಗಿದೆ. ಇದರಡಿ 450 ಎಕರೆ ಕೃಷಿ ಭೂಮಿಯನ್ನು ಖರೀದಿಸಲು ಯಾರಿಗಾದರೂ ಅವಕಾಶ ದೊರೆಯುತ್ತದೆ. ಜೆಡಿಎಸ್ ಬೆಂಬಲದೊಂದಿಗೆ ನಿನ್ನೆ ವಿಧಾನ ಪರಿಷತ್ತಿನಲ್ಲಿ ಮಸೂದೆ ಅಂಗೀಕರಿಸಿದ್ದು, ಸರಿಯಲ್ಲ. ನಮಗೆ ಈ ದಿನ ಅತ್ಯಂತ ದುಃಖದ ದಿನ" ಎಂದು ಅವರು ಸಾಮಾಜಿಕ ಜಾಲತಾಣದ ಹೇಳಿಕೊಂಡಿದ್ದಾರೆ.

ರೈತರ ಹಕ್ಕುಗಳಿಗಾಗಿ ಹೋರಾಡುವುದಾಗಿ ಹೇಳಿಕೊಂಡು ತಮ್ಮ ರಾಜಕೀಯ ವೃತ್ತಿಯನ್ನು ಕಟ್ಟಿಕೊಂಡ ಮುಖ್ಯಮಂತ್ರಿ ಬಿ.ಎಸ್ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೋಸದವರು ಎಂಬುದು ಇದರಿಂದ ಸಾಬೀತಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT