ಡಾ. ವಿಷ್ಣುವರ್ಧನ್, ಸುಮಲತಾ 
ಸಿನಿಮಾ ಸುದ್ದಿ

ವಿಷ್ಣುವಿನ ಘನತೆಗೆ ಸಾಸಿವೆ ಕಾಳಿನಷ್ಟು ಧಕ್ಕೆಯಾಗದು- ಸುಮಲತಾ

ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ಕುರಿತು ಸಂದರ್ಶನವೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ತೆಲುಗು ನಟ ವಿಜಯ್ ರಂಗರಾಜು ವಿರುದ್ಧ ಇಡೀ ಸ್ಯಾಂಡಲ್ ವುಡ್ ಆಕ್ರೋಶಗೊಂಡಿದೆ.

ಬೆಂಗಳೂರು: ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ಕುರಿತು ಸಂದರ್ಶನವೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ತೆಲುಗು ನಟ ವಿಜಯ್ ರಂಗರಾಜು ವಿರುದ್ಧ ಇಡೀ ಸ್ಯಾಂಡಲ್ ವುಡ್ ಆಕ್ರೋಶಗೊಂಡಿದೆ.
 
ಶನಿವಾರ ನಟರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಸುದೀಪ್, ಜಗ್ಗೇಶ್, ಗಣೇಶ್, ಶ್ರೀಮುರುಳಿ, ಸೃಜನ್ ಲೋಕೇಶ್ ಸೇರಿದಂತೆ ಅನೇಕ ನಿರ್ದೇಶಕರು ವಿಜಯ್ ರಂಗರಾಜು ಅವರ ಮಾತುಗಳನ್ನು ಖಂಡಿಸಿದ್ದರು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ಸಂಸದೆ ಸುಮಲತಾ ಅಂಬರೀಷ್ , ಸರಣಿ ಟ್ವೀಟ್ ಮಾಡಿದ್ದಾರೆ. ವಿಷ್ಣುವರ್ಧನ್ ಅವರ ವ್ಯಕ್ತಿತ್ವ, ವರ್ಚಸ್ಸು ಅವರನ್ನು ಪ್ರೀತಿಸುವ ಅಸಂಖ್ಯಾತ ಅಭಿಮಾನಿಗಳಿಗೆ ಗೊತ್ತು. ನಾಯಿ ಬೊಗಳಿದರೆ ದೇವಲೋಕ ಹಾಳಾಗದು ಎಂಬುದಕ್ಕೆ ಇದೊಂದು ಸರಿಯಾದ ಉದಾಹರಣೆ. ಇಂತಹ 'ಚೀಪ್ ಪಬ್ಲಿಸಿಟಿ' ಗಾಗಿ ಮನಬಂದಂತೆ ಬಾಯಿ ಹರಟುವ ವ್ಯಕ್ತಿಗಳು ಕ್ಷಮೆ ಕೇಳಲು ಅರ್ಹರಲ್ಲ. ಕ್ಷಮಿಸಲು ಆಗದು, ಕ್ಷಮಿಸಲು ಬಾರದು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT