ನಟ ವಿಜಯ್ ರಂಗರಾಜು ಕ್ಷಮೆ ಯಾಚನೆ 
ಸಿನಿಮಾ ಸುದ್ದಿ

ಗೋಳಾಡಿ ಅತ್ತು.. ವಿಷ್ಣುವರ್ಧನ್ ಕ್ಷಮೆ ಯಾಚಿಸಿದ ತೆಲುಗು ನಟ ವಿಜಯ್ ರಂಗರಾಜು!

ಸಾಹಸ ಸಿಂಹ ವಿಷ್ಣು ವರ್ಧನ್ ಅವರ ಕುರಿತಂತೆ ಆಕ್ಷೇಪಾರ್ಹ ಹೇಳಿಕೆ ನೀಡಿ ಕನ್ನಡಿಗರ ಆಕ್ರೋಶಕ್ಕೆ ಕಾರಣರಾಗಿದ್ದ ತೆಲುಗು ನಟ ವಿಜಯ್ ರಂಗರಾಜು ಕೊನೆಗೂ ದಾದಾ ಅಭಿಮಾನಿಗಳ ಕ್ಷಮೆ ಯಾಚಿಸಿದ್ದಾರೆ.

ಬೆಂಗಳೂರು: ಸಾಹಸ ಸಿಂಹ ವಿಷ್ಣು ವರ್ಧನ್ ಅವರ ಕುರಿತಂತೆ ಆಕ್ಷೇಪಾರ್ಹ ಹೇಳಿಕೆ ನೀಡಿ ಕನ್ನಡಿಗರ ಆಕ್ರೋಶಕ್ಕೆ ಕಾರಣರಾಗಿದ್ದ ತೆಲುಗು ನಟ ವಿಜಯ್ ರಂಗರಾಜು ಕೊನೆಗೂ ದಾದಾ ಅಭಿಮಾನಿಗಳ ಕ್ಷಮೆ ಯಾಚಿಸಿದ್ದಾರೆ.

ಈ ಹಿಂದೆ ತೆಲುಗು ಸಂದರ್ಶನವೊಂದರಲ್ಲಿ ನಟ ವಿಷ್ಣು ವರ್ಧನ್ ರ ಕುರಿತಂತೆ ಬಾಯಿಗೆ ಬಂದಂತೆ ಮಾತನಾಡಿದ್ದ ತೆಲುಗು ನಟ ವಿಜಯ್ ರಂಗರಾಜು ಕೊನೆಗೂ ವಿಷ್ಣು ಕುಟುಂಬದ ಕ್ಷಮೆ ಯಾಚಿಸಿದ್ದಾರೆ.

ಈ ಕುರಿತಂತೆ ವಿಡಿಯೋ ಮಾಡಿರುವ ನಟ ವಿಜಯ್ ರಂಗರಾಜು, 'ನಾನು ವಿಷ್ಣು ದಾದಾ ಬಗ್ಗೆ ತಪ್ಪು ಮಾತಾಡಿದ್ದೇನೆ, ನನ್ನನ್ನು ಕ್ಷಮಿಸಿ ಬಿಡಿ. ನಾನು ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸುತ್ತಿದ್ದೇನೆ. ನಾನು ಈಗ ಕೊರೊನಾದಿಂದ ಬಳಲುತ್ತಿದ್ದೇನೆ. ವಿಷ್ಣು ಅವರ ಅಭಿಮಾನಿಗಳಿಗೆ, ವಿಷ್ಣು ಅವರ  ಕುಟುಂಬದವರಿಗೆ, ಟಾಪ್‌ ನಟರಾದ ಪುನೀತ್ ರಾಜ್‌ಕುಮಾರ್, ಸುದೀಪ್‌, ಉಪೇಂದ್ರ ಅವರಲ್ಲಿ ಬೇಡಿ ಕೊಳ್ಳುತ್ತಿದ್ದೇನೆ. ನಾನು ಮಾಡಿದ್ದು ದೊಡ್ಡ ತಪ್ಪು. ನನ್ನನ್ನು ಕ್ಷಮಿಸಿಬಿಡಿ. ನಾನು ವಿಷ್ಣು ದಾದಾ ಬಗ್ಗೆ ಮಾತಾಡಿದ್ದು ತಪ್ಪು. ಈ ತಪ್ಪಿಗೆ ಈಗ ಶಿಕ್ಷೆ ಅನುಭವಿಸುತ್ತಿದ್ದೇನೆ. ಕೊರೊನಾದಿಂದ  ಬಳಲುತ್ತಿದ್ದೇನೆ. ನಾನು ಪಾಪ ಮಾಡಿದ್ದೇನೆ' ಎಂದು ಗೋಳಾಡುತ್ತ ಕ್ಷಮೆ ಕೇಳಿದ್ದಾರೆ.

'ನನ್ನನ್ನು ಬಿಟ್ಟುಬಿಡಿ. ನನ್ನ ಬಳಿ ದುಡ್ಡು ಇಲ್ಲ, ಏನೂ ಇಲ್ಲ. ಸಣ್ಣ ಪುಟ್ಟ ಪಾತ್ರಗಳನ್ನು ಮಾಡಿಕೊಂಡಿದ್ದೇನೆ. ವಿಷ್ಣುವರ್ಧನ್ ಅವರ ಬಗ್ಗೆ ನಾನು ಮಾತಾಡಿದ್ದು ತಪ್ಪು. ವಿಷ್ಣುವರ್ಧನ್ ಅವರ ಎಲ್ಲ ಫ್ಯಾನ್ಸ್‌ಗೆ ಕಾಲಿಗೆ ಬಿದ್ದು, ನಾನು ನಮಸ್ಕಾರ ಮಾಡಿ ಕೇಳಿಕೊಳ್ಳುತ್ತಿದ್ದೇನೆ. ನನ್ನನ್ನು ಕ್ಷಮಿಸಿ. ವಿಷ್ಣು  ದಾದಾ ಅವರೇ ನನ್ನನ್ನು ಕ್ಷಮಿಸಿಬಿಡಿ ಸ್ವಾಮಿ. ವಿಷ್ಣುವರ್ಧನ್ ಅವರ ಅಭಿಮಾನಿಗಳೇ, ಕರ್ನಾಟಕದ ಜನರೇ ನನ್ನನ್ನು ಕ್ಷಮಿಸಿಬಿಡಿ. ವಿಷ್ಣುವರ್ಧನ್‌ ಅವರ ಬಗ್ಗೆ ಮಾತಾಡಿ ನಾನು ಬಹಳ ದೊಡ್ಡ ತಪ್ಪು ಮಾಡಿಬಿಟ್ಟಿದ್ದೇನೆ. ಅಂತಹ ದೊಡ್ಡ ವ್ಯಕ್ತಿಯನ್ನು ನಾನು ಮುಟ್ಟುವುದಕ್ಕೆ ಸಾಧ್ಯವೇ?  ಯಾವುದೋ ಭರದಲ್ಲಿ ಏನೇನೋ ಮಾತನಾಡಿ ತಪ್ಪು ಮಾತಾಡಿಬಿಟ್ಟೆ. ಇನ್ಮುಂದೆ ಕನ್ನಡ, ತಮಿಳು, ತೆಲುಗು, ಮಲಯಾಳಂನ ಯಾವ ಕಲಾವಿದರ ಬಗ್ಗೆಯೂ ಈ ರೀತಿ ಮಾತನಾಡುವುದಿಲ್ಲ ಎಂದು ವಿಜಯ್ ರಂಗರಾಜು ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT