ಸಂಜನಾ 
ಸಿನಿಮಾ ಸುದ್ದಿ

ನಟಿ ಸಂಜನಾ ಇಸ್ಲಾಂ ಧರ್ಮಕ್ಕೆ ಮತಾಂತರ: ಮೌಲ್ವಿ ವಿರುದ್ಧ ದೂರು ದಾಖಲು

ಡ್ರಗ್ಸ್‌ ಜಾಲ ಪ್ರಕರಣದಲ್ಲಿ ಮೂರು ತಿಂಗಳು ಜೈಲಿನಲ್ಲಿದ್ದು, ಬಳಿಕ ಜಾಮೀನಿನ ಮೇಲೆ  ಬಿಡುಗಡೆ ಹೊಂದಿರುವ ನಟಿ ಸಂಜನಾ ಗಲ್ರಾನಿ ಅವರಿಗೀಗ ಮತ್ತೊಂದು ಸಂಕಷ್ಟ ಎದುರಾಗಿದೆ.

ಬೆಂಗಳೂರು:  ಡ್ರಗ್ಸ್‌ ಜಾಲ ಪ್ರಕರಣದಲ್ಲಿ ಮೂರು ತಿಂಗಳು ಜೈಲಿನಲ್ಲಿದ್ದು, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಹೊಂದಿರುವ ನಟಿ ಸಂಜನಾ ಗಲ್ರಾನಿ ಅವರಿಗೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಹೌದು ನಟಿ ಸಂಜನಾ ಅವರನ್ನು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಿಸಲಾಗಿದೆ ಎಂದು ಆರೋಪಿಸಿ ಬೆಂಗಳೂರು ನಗರದ ವಕೀಲರೊಬ್ಬರು ದೂರು ದಾಖಲಿಸಿದ್ದಾರೆ.

ಸ್ಯಾಂಡಲ್ ವುಡ್ ನಟಿ ಸಂಜನಾ ಅವರನ್ನು ಬಲವಂತವಾಗಿ ಹಿಂದೂ ಧರ್ಮದಿಂದ ಇಸ್ಲಾಂ ಗೆ ಮತಾಂತರ ಮಾಡಲಾಗಿದೆ ಎಂದು ಆರೋಪಿಸಿ ಟ್ಯಾನರಿ ರಸ್ತೆಯ ದಾರುಲ್ ಉಲಮ್ ಶಾವಲಿಲುಲ್ಲಾ ಎಂಬ ಮೌಲ್ವಿ ವಿರುದ್ಧ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಕೀಲ ಅಮೃತೇಶ್ ಎನ್ನುವವರು ಮೌಲ್ವಿ ವಿರುದ್ಧ ದೂರು ಸಲ್ಲಿಸಿದ್ದಾರೆ. 

ದೂರಿನ ಅನುಸಾರ ನಟಿ ಸಂಜನಾ ಅವರನ್ನು  09 ಅಕ್ಟೋಬರ್ 2018 ರಂದು ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರ ಮಾಡಲಾಗಿದೆ. ಅಲ್ಲದೆ ಅವರಿಗೆ "ಮಹಿರಾ" ಎಂದು ಮರುನಾಮಕರಣ ಸಹ ಮಾಡಿದ್ದಾರೆ. ಇದಕ್ಕೆ ದಾಖಲೆಯಾಗಿ ಮರುನಾಮಕರಣ ಮಾಡಿದ ಪ್ರಮಾಣಪತ್ರ ಸಹ ನೀಡಲಾಗಿದೆ. ಆದರೆ ಈ ಮತಾಂತರ ನಟಿಯ ಇಚ್ಚೆಗೆ ವಿರುದ್ಧ, ಬಲವಂತದಿಂದ ನಡೆದಿದೆ ಎಂದು ಎಫ್​​​ಐಆರ್ ದಾಖಲಾಗಿದೆ. 

ಈ ಸಂಬಂಧ ಕಾಟನ್‌ಪೇಟೆ ಪೊಲೀಸರು ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಜರುಗಿಸಲು ತೀರ್ಮಾನಿಸಿದ್ದಾರೆ.

ನಟಿ ಸಂಜನಾ ಕಾರ್ಡಿಯಾಲಜಿಸ್ಟ್ ಆಗಿರುವ  ಡಾ. ಅಜೀಜ್ ಎನ್ನುವವರೊಂದಿಗೆ ಮದುವೆಯಾಗಿದ್ದರೆಂದು ಹೇಳಲಾಗುವ ಫೋಟೋ ಒಂದು ಕೆಲ ದಿನಗಳ ಹಿಂದೆ ಸಾಮಾಜಿಕ ತಾಣದಲ್ಲಿ ಹರಿದಾಡಿತ್ತು. ಆ ವೇಳೆ ಸಂಜನಾ ಇಸ್ಲಾಂಗೆ ಮತಾಂತರವಾಗಿ ಹೆಸರು ಬದಲಿಸಿಕೊಂಡಿದ್ದರೆಂಬ ಬಗ್ಗೆ ದಾಖಲೆಗಳು ಸಿಕ್ಕಿವೆ ಎನ್ನಲಾಗಿತ್ತು. 

ಈ ನಡುವೆ ಜೈಲಿನಿಂದ ಹೊರಬಂದಿರುವ ಸಂಜನಾ ಯಲಹಂಕ ಬಳಿಯ ರೆಸಾರ್ಟ್ ವೊಂದರಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT