ಶ್ರೀಮುರುಳಿ ಮತ್ತು ಪ್ರಶಾಂತ್ ನೀಲ್ 
ಸಿನಿಮಾ ಸುದ್ದಿ

ಶ್ರೀಮುರುಳಿಯ 'ಮದಗಜ' ಫಸ್ಟ್ ಲುಕ್ ಟೀಸರ್ ಅನಾವರಣಗೊಳಿಸಲಿದ್ದಾರೆ ಪ್ರಶಾಂತ್ ನೀಲ್

ರೋರಿಂಗ್ ಸ್ಟಾರ್ ಶ್ರೀಮರಳಿ ಅವರ ಜನ್ಮದಿನದ ಪ್ರಯುಕ್ತ ಡಿಸೆಂಬರ್ 17ರಂದು 'ಮದಗಜ' ಚಿತ್ರದ ಫಸ್ಟ್‌ಲುಕ್ ಟೀಸರ್ ರಿಲೀಸ್ ಆಗಲಿದೆ. ವಿಶೇಷವೆಂದರೆ, ಇದನ್ನು ರಿಲೀಸ್ ಮಾಡುವುದು ಪ್ರಶಾಂತ್ ನೀಲ್‌! 

ರೋರಿಂಗ್ ಸ್ಟಾರ್ ಶ್ರೀಮರಳಿ ಅವರ ಜನ್ಮದಿನದ ಪ್ರಯುಕ್ತ ಡಿಸೆಂಬರ್ 17ರಂದು 'ಮದಗಜ' ಚಿತ್ರದ ಫಸ್ಟ್‌ಲುಕ್ ಟೀಸರ್ ರಿಲೀಸ್ ಆಗಲಿದೆ. ವಿಶೇಷವೆಂದರೆ, ಇದನ್ನು ರಿಲೀಸ್ ಮಾಡುವುದು ಪ್ರಶಾಂತ್ ನೀಲ್‌! 

ಈ ಬಗ್ಗೆ ಮಾಹಿತಿ ನೀಡಿರುವ ಶ್ರೀಮುರಳಿ, 'ನನ್ನ ಗಾಡಫಾದರ್ ನಿರ್ದೇಶಕ ಪ್ರಶಾಂತ್ ನೀಲ್ 'ಮದಗಜ' ಚಿತ್ರದ ಫಸ್ಟ್‌ಲುಕ್ ಟೀಸರ್  ರಿಲೀಸ್ ಮಾಡಲಿದ್ದಾರೆ ಎಂದು ಹೇಳಲು ಖುಷಿಯಾಗುತ್ತಿದೆ. ಧನ್ಯವಾದಗಳು ನಿರ್ದೇಶಕರೇ..‌' ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ನಟ ಶ್ರೀಮುರಳಿಗೆ ಭರ್ಜರಿ ಬ್ರೇಕ್‌ ಸಿಕ್ಕಿದ್ದು ಪ್ರಶಾಂತ್ ನೀಲ್ ನಿರ್ದೇಶನದ 'ಉಗ್ರಂ' ಚಿತ್ರದಿಂದ. ಅದು ಅವರ ಚೊಚ್ಚಲ ನಿರ್ದೇಶನದ ಸಿನಿಮಾವಾಗಿತ್ತು. 'ಉಗ್ರಂ' ಸಿನಿಮಾ ಶ್ರೀಮುರಳಿ ವೃತ್ತಿಬದುಕಿನ ಸೆಕೆಂಡ್‌ ಇನಿಂಗ್ಸ್ ಎಂದು ಹೇಳಿದರೆ ತಪ್ಪಾಗಲಾರದು.  'ಕೆಜಿಎಫ್‌' 1 ಮತ್ತು 2 ನಂತರ ಪ್ರಶಾಂತ್ ಈಗ ಪ್ರಭಾಸ್‌ಗಾಗಿ 'ಸಲಾರ್' ಸಿನಿಮಾ
ಕೈಗೆತ್ತಿಕೊಂಡಿದ್ದಾರೆ. ಒಟ್ಟಿನಲ್ಲಿ ಕನ್ನಡ ಸಿನಿಪ್ರಿಯರು ಮತ್ತೊಮ್ಮೆ 'ಉಗ್ರಂ' ಕಾಂಬಿನೇಷನ್‌ ಅನ್ನು ಎದುರುನೋಡುತ್ತಿರುವುದಂತೂ ಸುಳ್ಳಲ್ಲ.

'ಹೆಬ್ಬುಲಿ', 'ರಾಬರ್ಟ್' ಥರದ ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಉಮಾಪತಿ ಶ್ರೀನಿವಾಸ್‌ 'ಮದಗಜ' ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಶ್ರೀಮುರಳಿಗೆ ನಾಯಕಿಯಾಗಿ ಮೊದಲ ಬಾರಿಗೆ ಆಶಿಕಾ ರಂಗನಾಥ್ ಕಾಣಿಸಿಕೊಂಡಿದ್ದಾರೆ. ಉಳಿದಂತೆ, ಚಿಕ್ಕಣ್ಣ, ಜಗಪತಿ ಬಾಬು, ಶಿವರಾಜ್ ಕೆ.ಆರ್. ಪೇಟೆ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ. 'ಮದಗಜ' ಚಿತ್ರದ ಹಾಡುಗಳಿಗೆ 'ಕೆಜಿಎಫ್' ಖ್ಯಾತಿಯ ರವಿ ಬಸ್ರೂರ್‌ ಸಂಗೀತ ನೀಡುತ್ತಿದ್ದಾರೆ. 

ಈಗಾಗಲೇ ಸಿನಿಮಾ ಮೂರನೇ ಹಂತದ ಶೂಟಿಂಗ್ ತಲುಪಿದ್ದು, ನಿರ್ದೇಶಕ ಮಹೇಶ್ ಕುಮಾರ್ ಪ್ರಮುಖ ಫೈಟಿಂಗ್ ದೃಶ್ಯಗಳನ್ನು ಸೆರೆ ಹಿಡಿಯಲು ತಯಾರಿ ನಡೆಸುತ್ತಿದ್ದಾರೆ, ಇದಕ್ಕಾಗಿ ಮೋಹನ್ ಬಿ ಕೆರೆ ವೈವಿಧ್ಯಮಯವಾದ ಆರ್ಟ್ ಕೆಲಸ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT