ಸ್ಪೂಕಿ ಕಾಲೇಜ್ 
ಸಿನಿಮಾ ಸುದ್ದಿ

'ಸ್ಪೂಕಿ ಕಾಲೇಜ್' ಸೇರಿಕೊಂಡ ದಿಯಾ ಖುಷಿ!

ದಿಯಾ ಚಿತ್ರದ ಮೂಲಕ ಪ್ರೇಕ್ಷಕರ ಮನಗೆದ್ದಿರುವ ನಟಿ ಖುಷಿ ರವಿ ಅವರು, ನಟ ಪೃಥ್ವಿ ಅಂಬರ್ ಜೊತೆಗೆ ಮತ್ತೆ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ. 

ದಿಯಾ ಚಿತ್ರದ ಮೂಲಕ ಪ್ರೇಕ್ಷಕರ ಮನಗೆದ್ದಿರುವ ನಟಿ ಖುಷಿ ರವಿ ಅವರು, ನಟ ಪೃಥ್ವಿ ಅಂಬರ್ ಜೊತೆಗೆ ಮತ್ತೆ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ. 

ಖುಷಿ ಅವರು ಸ್ಫೂಕಿ ಕಾಲೇಜ್ ಚಿತ್ರದಲ್ಲಿ ಎರಡು ಶೇಡ್'ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಂಗಿತರಂಗ ಹಾಗೂ ಅವನೇ ಶ್ರೀಮನ್ನಾರಾಯಣದಂತಹ ಭರ್ಜಿ ಚಿತ್ರಗಳನ್ನು ನೀಡಿ, ಅಪಾರ ಜನರ ಮೆಚ್ಚುಗೆ ಗಳಿಸಿರುವ ಹೆಚ್.ಕೆ.ಪ್ರಕಾಶ್ ಅವರು ಸ್ಫೂಕಿ ಕಾಜೇಜ್ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.  

ಧಾರವಾಡದ 103 ವರ್ಷಗಳ ಇತಿಹಾಸವಿರುವ ಕಾಲೇಜೊಂದರಲ್ಲಿ ಚಿತ್ರದ ಚಿತ್ರೀಕರಣ ಕಳೆದ 25 ದಿನಗಳಿಂದಲೂ ನಡೆಯುತ್ತಿದೆ. ಈಗಾಗಲೇ ಚಿತ್ರ ತಂಡ ಶೇ.70ರಷ್ಟು ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದು, ಚಿತ್ರತಂಡ ಇದೀಗ ಬೆಂಗಳೂರಿನತ್ತ ಮುಖ ಮಾಡಿದೆ. 

ಹಾರರ್, ಕಾಮಿಡಿ ಹಾಗೂ ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ ಇದಾಗಿದೆ. ದಿಯಾ ಚಿತ್ರದಲ್ಲಿ ಸೂಕ್ಷ್ಮವಾದ ನಟಿಯಾಗಿ ಪ್ರೇಕ್ಷಕರು ನನ್ನನ್ನು ನೋಡಿದ್ದರು. ಆದರೆ, ಈ ಚಿತ್ರದಲ್ಲಿ ನನ್ನ ಪಾತ್ರ ಸಂಪೂರ್ಣವಾಗಿ ವಿಭಿನ್ನವಾಗಿದೆ ಎಂದು ನಟಿ ಖುಷಿ ಹೇಳಿದ್ದಾರೆ. 

ಚಿತ್ರದಲ್ಲಿ ಎರಡು ಶೇಡ್'ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ನಿರ್ದೇಶಕರು ನನ್ನನ್ನು ಚಿತ್ರದಲ್ಲಿ ಜೋರಾಗಿರುವ ಪಾತ್ರದಲ್ಲಿಯೇ ತೋರಿಸುತ್ತಿದ್ದಾರೆ. ಹೊಸ ಪಾತ್ರ ನಿಭಾಯಿಸುವಾಗ ಸಾಮಾನ್ಯವಾಗಿಯೇ ಸಾಕಷ್ಟು ನಿರೀಕ್ಷೆಗಳು ಹಾಗೂ ಉತ್ಸಾಹಗಳು ಇದ್ದೇ ಇರುತ್ತವೆ. ಸ್ಫೂಕಿ ಚಿತ್ರದಲ್ಲೂ ಆ ಉತ್ಸಾಹವಿದೆ ಎಂದು ತಿಳಿಸಿದ್ದಾರೆ. 

ಧಾರವಾಡದಲ್ಲಿ ಚಿತ್ರೀಕರಣ ನಡೆಸುತ್ತಿರುವ ಚಿತ್ರತಂಡ ನಂತರ ದಾಂಡೇಲಿಯಲ್ಲಿಯೂ ಚಿತ್ರೀಕರಣ ನಡೆಸಲಿದೆ. ಚಿತ್ರಕ್ಕೆ ಮನೋಹರ್ ಜೋಷಿ ಅವರ ಛಾಯಾಗ್ರಹಣವಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಲಿದ್ದಾರೆ. 

ಶ್ರೀಕಾಂತ್ ಸಂಕಲನ ನಿರ್ವಹಿಸಲಿದ್ದಾರೆ. ವಿಶ್ವಾಸ್ ಕಲಾ ನಿರ್ದೇಶನವಿದೆ. ಚೇತನ್ ಅವರ ವಸ್ತ್ರವಿನ್ಯಾಸ ಈ ಚಿತ್ರಕ್ಕಿದೆ. ಚಿತ್ರದಲ್ಲಿ ಪೃಥ್ವಿ ರಾಷ್ಟ್ರಕೂಟ ಪ್ರಧಾನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಪ್ರಕಾಶ್ ಬೆಳವಾಡಿ, ಹನುಮಂತೇಗೌಡ, ರಘು ರಮಣಕೊಪ್ಪ, ಅರವಿಂದ್ ಬೋಳಾರ್, ವಿಜಯ್ ಚೆಂಡೂರ್, ಎಂ.ಕೆ. ಮಠ, ಅಶ್ವಿನ್ ಹಾಸನ್ ತಾರಾಗಣದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT