ಸ್ಪೂಕಿ ಕಾಲೇಜ್ 
ಸಿನಿಮಾ ಸುದ್ದಿ

'ಸ್ಪೂಕಿ ಕಾಲೇಜ್' ಸೇರಿಕೊಂಡ ದಿಯಾ ಖುಷಿ!

ದಿಯಾ ಚಿತ್ರದ ಮೂಲಕ ಪ್ರೇಕ್ಷಕರ ಮನಗೆದ್ದಿರುವ ನಟಿ ಖುಷಿ ರವಿ ಅವರು, ನಟ ಪೃಥ್ವಿ ಅಂಬರ್ ಜೊತೆಗೆ ಮತ್ತೆ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ. 

ದಿಯಾ ಚಿತ್ರದ ಮೂಲಕ ಪ್ರೇಕ್ಷಕರ ಮನಗೆದ್ದಿರುವ ನಟಿ ಖುಷಿ ರವಿ ಅವರು, ನಟ ಪೃಥ್ವಿ ಅಂಬರ್ ಜೊತೆಗೆ ಮತ್ತೆ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ. 

ಖುಷಿ ಅವರು ಸ್ಫೂಕಿ ಕಾಲೇಜ್ ಚಿತ್ರದಲ್ಲಿ ಎರಡು ಶೇಡ್'ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಂಗಿತರಂಗ ಹಾಗೂ ಅವನೇ ಶ್ರೀಮನ್ನಾರಾಯಣದಂತಹ ಭರ್ಜಿ ಚಿತ್ರಗಳನ್ನು ನೀಡಿ, ಅಪಾರ ಜನರ ಮೆಚ್ಚುಗೆ ಗಳಿಸಿರುವ ಹೆಚ್.ಕೆ.ಪ್ರಕಾಶ್ ಅವರು ಸ್ಫೂಕಿ ಕಾಜೇಜ್ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.  

ಧಾರವಾಡದ 103 ವರ್ಷಗಳ ಇತಿಹಾಸವಿರುವ ಕಾಲೇಜೊಂದರಲ್ಲಿ ಚಿತ್ರದ ಚಿತ್ರೀಕರಣ ಕಳೆದ 25 ದಿನಗಳಿಂದಲೂ ನಡೆಯುತ್ತಿದೆ. ಈಗಾಗಲೇ ಚಿತ್ರ ತಂಡ ಶೇ.70ರಷ್ಟು ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದು, ಚಿತ್ರತಂಡ ಇದೀಗ ಬೆಂಗಳೂರಿನತ್ತ ಮುಖ ಮಾಡಿದೆ. 

ಹಾರರ್, ಕಾಮಿಡಿ ಹಾಗೂ ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ ಇದಾಗಿದೆ. ದಿಯಾ ಚಿತ್ರದಲ್ಲಿ ಸೂಕ್ಷ್ಮವಾದ ನಟಿಯಾಗಿ ಪ್ರೇಕ್ಷಕರು ನನ್ನನ್ನು ನೋಡಿದ್ದರು. ಆದರೆ, ಈ ಚಿತ್ರದಲ್ಲಿ ನನ್ನ ಪಾತ್ರ ಸಂಪೂರ್ಣವಾಗಿ ವಿಭಿನ್ನವಾಗಿದೆ ಎಂದು ನಟಿ ಖುಷಿ ಹೇಳಿದ್ದಾರೆ. 

ಚಿತ್ರದಲ್ಲಿ ಎರಡು ಶೇಡ್'ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ನಿರ್ದೇಶಕರು ನನ್ನನ್ನು ಚಿತ್ರದಲ್ಲಿ ಜೋರಾಗಿರುವ ಪಾತ್ರದಲ್ಲಿಯೇ ತೋರಿಸುತ್ತಿದ್ದಾರೆ. ಹೊಸ ಪಾತ್ರ ನಿಭಾಯಿಸುವಾಗ ಸಾಮಾನ್ಯವಾಗಿಯೇ ಸಾಕಷ್ಟು ನಿರೀಕ್ಷೆಗಳು ಹಾಗೂ ಉತ್ಸಾಹಗಳು ಇದ್ದೇ ಇರುತ್ತವೆ. ಸ್ಫೂಕಿ ಚಿತ್ರದಲ್ಲೂ ಆ ಉತ್ಸಾಹವಿದೆ ಎಂದು ತಿಳಿಸಿದ್ದಾರೆ. 

ಧಾರವಾಡದಲ್ಲಿ ಚಿತ್ರೀಕರಣ ನಡೆಸುತ್ತಿರುವ ಚಿತ್ರತಂಡ ನಂತರ ದಾಂಡೇಲಿಯಲ್ಲಿಯೂ ಚಿತ್ರೀಕರಣ ನಡೆಸಲಿದೆ. ಚಿತ್ರಕ್ಕೆ ಮನೋಹರ್ ಜೋಷಿ ಅವರ ಛಾಯಾಗ್ರಹಣವಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಲಿದ್ದಾರೆ. 

ಶ್ರೀಕಾಂತ್ ಸಂಕಲನ ನಿರ್ವಹಿಸಲಿದ್ದಾರೆ. ವಿಶ್ವಾಸ್ ಕಲಾ ನಿರ್ದೇಶನವಿದೆ. ಚೇತನ್ ಅವರ ವಸ್ತ್ರವಿನ್ಯಾಸ ಈ ಚಿತ್ರಕ್ಕಿದೆ. ಚಿತ್ರದಲ್ಲಿ ಪೃಥ್ವಿ ರಾಷ್ಟ್ರಕೂಟ ಪ್ರಧಾನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಪ್ರಕಾಶ್ ಬೆಳವಾಡಿ, ಹನುಮಂತೇಗೌಡ, ರಘು ರಮಣಕೊಪ್ಪ, ಅರವಿಂದ್ ಬೋಳಾರ್, ವಿಜಯ್ ಚೆಂಡೂರ್, ಎಂ.ಕೆ. ಮಠ, ಅಶ್ವಿನ್ ಹಾಸನ್ ತಾರಾಗಣದಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT