ಪ್ರಜ್ವಲ್ ದೇವರಾಜ್, ದೇವರಾಜ್ 
ಸಿನಿಮಾ ಸುದ್ದಿ

ಗುರುದತ್ತ ಗಾಣಿಗ ಆಕ್ಷನ್ ಥ್ರಿಲ್ಲರ್ ಗಾಗಿ ಬೆಳ್ಳಿ ತೆರೆ ಮೇಲೆ ಮತ್ತೆ ಜೊತೆಯಾದ ದೇವರಾಜ್-ಪ್ರಜ್ವಲ್ ಜೋಡಿ!

ಪ್ರಜ್ವಲ್ ದೇವರಾಜ್ ಸಿಹಿ ತುಂಬಿದ ವರ್ಷದತ್ತ ಸಾಗುತ್ತಿರುವಂತೆ ತೋರುತ್ತಿದೆ. ಡೈನಾಮಿಕ್ ಪ್ರಿನ್ಸ್ ಆಫ್ ಸ್ಯಾಂಡಲ್ ವುಡ್ ನಿರ್ದೇಶಕ ಗುರುದತ್ತ ಗಾಣಿಗ ಅವರೊಂದಿಗೆ ಆಕ್ಷನ್ ಥ್ರಿಲ್ಲರ್ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಳ್ಳಲಿದ್ದಾರೆ.

ಪ್ರಜ್ವಲ್ ದೇವರಾಜ್ ಸಿಹಿ ತುಂಬಿದ ವರ್ಷದತ್ತ ಸಾಗುತ್ತಿರುವಂತೆ ತೋರುತ್ತಿದೆ. ಡೈನಾಮಿಕ್ ಪ್ರಿನ್ಸ್ ಆಫ್ ಸ್ಯಾಂಡಲ್ ವುಡ್ ನಿರ್ದೇಶಕ ಗುರುದತ್ತ ಗಾಣಿಗ ಅವರೊಂದಿಗೆ ಆಕ್ಷನ್ ಥ್ರಿಲ್ಲರ್ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಳ್ಳಲಿದ್ದಾರೆ. ನಿರ್ದೇಶಕರು ಈ ಹಿಂದೆ ರೆಬೆಲ್ ಸ್ಟಾರ್ ಅಂಬರೀಶ್ ಅವರ ಕಡೆಯ ಚಿತ್ರ "ಅಂಬಿ ನಿಂಗ್ ವಯಸ್ಸಾಯ್ತೋ" ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದರು.

ತಮ್ಮ ಮೊದಲ ಚಿತ್ರ ಬಿಡುಗಡೆಯಾದ ಎರಡು ವರ್ಷಗಳ ನಂತರ, ಅವರು ಉತ್ತಮ ಚಿತ್ರಕಥೆ ಮತ್ತು ನಟನಿಗಾಗಿ ಹುಡುಕಿದ್ದರು. ಈಗ ಅವರ ಎರಡನೇ ಯೋಜನೆ ಸಿದ್ದವಾಗುತ್ತಿದ್ದು ಮಾನವ ಕಳ್ಳಸಾಗಣೆ ವಿಷಯದ ಸುತ್ತ ಸುತ್ತುವ ಇನ್ನೂ ಹೆಸರಿಡದ ಈ ಚಿತ್ರವು ಪ್ರಜ್ವಲ್ ದೇವರಾಜ್ ಹಾಗೂ ಅವರ ತಂದೆ ನಟ ದೇವರಾಜ್ ಅವರನ್ನು ಒಟ್ಟಿಗೇ ತೆರೆ ಮೇಲೆ ತರಲಿದೆ. ಇದಕ್ಕೆ ಮುನ್ನ ಈ ತಂದೆ-ಮಗನ ಜೋಡಿ ಪಿಸಿ ಶೇಖರ್ ಅವರ "ಅರ್ಜುನ" ಚಿತ್ರದಲ್ಲಿ ಒಟ್ಟಿಗೇ ಕಾಣಿಸಿಕೊಂಡಿತ್ತು.

ಚಿತ್ರವನ್ನು ಗಾಂಧಿನಗರದ ಡಿಸ್ಟ್ರಿಬ್ಯೂಟರ್ ಕುಮಾರ್ ಬಿ ನಿರ್ಮಿಸಲಿದ್ದು ಬೆಂಗಳೂರು ಕುಮಾರ್ ಫಿಲ್ಮ್ಸ್ ಎಂಬ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಲಿದೆ. ಸದ್ಯ ಪ್ರಿ-ಪ್ರೊಡಕ್ಷನ್ ಹಂತದಲ್ಲಿರುವ ತಯಾರಕರು ಮುಂದಿನ ವರ್ಷದ ಆರಂಭದಲ್ಲಿ ಚಿತ್ರೀಕರಣ ಪ್ರಾರಂಭಿಸಲು ಯೋಜಿಸಿದ್ದಾರೆ.

ಶೂಟಿಂಗ್‌ಗಾಗಿ ಅವರು ಬೆಂಗಳೂರು ಮತ್ತು ಕೆಜಿಎಫ್‌ನ ಪ್ರದೇಶಗಳನ್ನು ಆಯ್ಕೆ ಮಾಡಿದ್ದು ಏತನ್ಮಧ್ಯೆ, ಜನವರಿ ಮಧ್ಯದಲ್ಲಿ ಫಸ್ಟ್ ಲುಕ್ ಜೊತೆಗೆ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಲು ತಂಡವು ಸಿದ್ಧವಾಗುತ್ತಿದೆ. ತಯಾರಕರು ಈ ಯೋಜನೆಗಾಗಿ "ಮುಂದಿನ ನಿಲ್ದಾಣ" ಚಿತ್ರದ ಒಪಿ ಅಭಿಮನ್ಯು ಸದಾನಂದನ್ ಅವರನ್ನು ಆಯ್ಕೆ ಮಾಡಿದ್ದು ಉಳಿದ ಪಾತ್ರವರ್ಗ ಹಾಗೂ ಸಿಬ್ಬಂದಿಗಳ ಆಯ್ಕೆ ಇನ್ನೂ ಅಂತಿಮವಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT