ನಟಿ ರಮ್ಯಾ 
ಸಿನಿಮಾ ಸುದ್ದಿ

ಪ್ರತಿಭಟನಾನಿರತ ರೈತರಿಗೆ ಬೆಂಬಲ ನೀಡಿ ಒಪ್ಪೊತ್ತಿನ ಊಟ ಬಿಟ್ಟ ನಟಿ ರಮ್ಯಾ!

ದೇಶದಾದ್ಯಂತ ಬುಧವಾರ ರೈತರ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ನಡುವಲ್ಲೇ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರು ವಿಶೇಷವಾಗಿ ಬೆಂಬಲ ನೀಡುವ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ. 

ಬೆಂಗಳೂರು: ದೇಶದಾದ್ಯಂತ ಬುಧವಾರ ರೈತರ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ನಡುವಲ್ಲೇ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರು ವಿಶೇಷವಾಗಿ ಬೆಂಬಲ ನೀಡುವ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ. 

ಕೃಷಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ನೀಡುವ ಸಲುವಾಗಿ ರಮ್ಯಾ ಅವರು ಇಂದು ಮಧ್ಯಾಹ್ನದ ಊಟವನ್ನು ತ್ಯಜಿಸಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಬರೆದುಕೊಂಡಿರುವ ರಮ್ಯಾ ಅವರು, ಕಿಸಾನ್ ದಿನವಾಗಿರುವ ಇಂದು ರೈತರಿಗೆ ಬೆಂಬಲ ಸೂಚಿಸುವ ಹಿನ್ನೆಲೆಯಲ್ಲಿ ನಾನಿಂದು ಮಧ್ಯಾಹ್ನದ ಊಟವನ್ನು ತ್ಯಜಿಸುತ್ತಿದ್ದೇನೆ. ಕೇಂದ್ರದ ಕೃಷಿ ನೀತಿಯನ್ನು ವಿರೋಧಿಸಿ ರೈತರು ಆಗಸ್ಟ್ 9 ರಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಮೋದಿ ಸರ್ಕಾರ ಮಾತ್ರ ನಿಶ್ಚಿಂತತೆಯಿಂದ ಇದ್ದು, ಕಾನೂನು ರದ್ದುಗೊಳಿಸಲು ನಿರಾಕರಿಸಿದೆ. ಮೋದಿ ಸರ್ಕಾರ ರೈತರ ಪರ ಇರುವ ಬದರು ತಮ್ಮ ಕಾರ್ಪೊರೇಟ್ ಸ್ನೇಹಿತರನ್ನು ಮಾತ್ರ ಬೆಂಬಲಿಸುತ್ತಿದೆ ಎಂದು ಕಿಡಿಕಾರಿದ್ದಾರೆ. 

ಮತ್ತೊಂದು ಪೋಸ್ಟ್ ನಲ್ಲಿ ಉತ್ತರಪ್ರದೇಶದಲ್ಲಿರುವ ಭಾರತೀಯ ಕಿಸಾನ್ ಯೂನಿಯನ್ ನಾಯಕ ಟಿಕೈಟ್ ಅವರು, ದೇಶದಾದ್ಯಂತ ರೈತರ ದಿನದಂದು ಮಧ್ಯಾಹ್ನ ಊಟವನ್ನು ತ್ಯಜಿಸಬೇಕೆಂದು ಕರೆ ನೀಡಿದ್ದಾರೆ. 

ಮೋದಿ ಸರ್ಕಾರದ ರೈತ ವಿರೋಧಿ ನೀತಿಯಿಂದ ಇಡೀ ದೇಶಕ್ಕೆ ಅನ್ನ ನೀಡುವ ಅನ್ನದಾತರು ಇಂದು ಹಸಿದಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರ ದಿನಾಚರಣೆಯಂದು ಮನೆಯಲ್ಲಿ ಅಡುಗೆ ಮಾಡದೆ ರೈತರಿಗೆ ಬೆಂಬಲ ನೀಡಿ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

SCROLL FOR NEXT