ಭರತ್ 
ಸಿನಿಮಾ ಸುದ್ದಿ

ಕಂಠಿ, ಸಾಹೇಬ ಸಿನಿಮಾ‌ ನಿರ್ದೇಶಕ ಭರತ್ ಹಠಾತ್ ನಿಧನ

ಕಂಠಿ, ಸಾಹೇಬ ಸಿನಿಮಾಗಳನ್ನು ನಿರ್ದೇಶಿಸಿದ್ದ ಪ್ರತಿಭಾವಂತ ಯುವ ನಿರ್ದೇಶಕ ಎಸ್.ಭರತ್ ಹಠಾತ್ತನೆ ಸಾವಿಗೀಡಾಗಿದ್ದಾರೆ.

ಕಂಠಿ, ಸಾಹೇಬ ಸಿನಿಮಾಗಳನ್ನು ನಿರ್ದೇಶಿಸಿದ್ದ ಪ್ರತಿಭಾವಂತ ಯುವ ನಿರ್ದೇಶಕ ಎಸ್.ಭರತ್ ಹಠಾತ್ತನೆ ಸಾವಿಗೀಡಾಗಿದ್ದಾರೆ.

45 ವರ್ಷದ ಭರತ್‌ ಆರೋಗ್ಯ ಸಮಸ್ಯೆಯಿಂದಾಗಿ ಚಾಮರಾಜನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ಕೊರೊನಾ ವೈರಸ್‌ನಿಂದಾಗಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಶ್ರೀಮುರಳಿ, ರಮ್ಯಾ ನಟಿಸಿದ್ದ ಕಂಠಿ ಸಿನಿಮಾವನ್ನು ನಿರ್ದೇಶಿಸಿದ್ದ ಭರತ್ ಆ ನಂತರ ಬಹು ವರ್ಷಗಳ ಬಿಡುವಿನ ಬಳಿಕ 2017 ರಲ್ಲಿ ಸಾಹೇಬ ಸಿನಿಮಾ ನಿರ್ದೇಶಿಸಿದ್ದರು. ಸಿನಿಮಾ ಒಂದನ್ನೇ ವೃತ್ತಿ ಮಾಡಿಕೊಂಡಿದ್ದ ಭರತ್, ಹೊಸ ಸಿನಿಮಾದ ತಯಾರಿಯಲ್ಲಿದ್ದಾಗಲೇ ವಿಧಿವಶರಾಗಿದ್ದಾರೆ. ರಾಮನಗರ ಚಿಕ್ಕಮುಳುವಾಡಿ ಗ್ರಾಮದವರಾಗಿದ್ದ ಭರತ್ ಹಲವು ವರ್ಷಗಳಿಂದ ಬೆಂಗಳೂರಿನ ವಿಜಯನಗರ ಅತ್ತಿಗುಪ್ಪೆ ಯಲ್ಲಿ ವಾಸವಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT