ಸಿನಿಮಾ ಸುದ್ದಿ

ಹಣ ಪಡೆದು ವಂಚನೆ: ನಿರ್ಮಾಪಕ ಕೆ. ಮಂಜು ವಿರುದ್ಧ ಎಫ್ಐಆರ್

Vishwanath S

ಬೆಂಗಳೂರು: ಹಣ ಪಡೆದು ವಂಚನೆ ಮಾಡಿರುವ ದೂರಿನ ಸಂಬಂಧ ನಿರ್ಮಾಪಕ ಕೆ. ಮಂಜು ವಿರುದ್ಧ ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ತಾರಾ ಅಭಿನಯದ 'ಹೆಬ್ಬೆಟ್ ರಾಮಕ್ಕ' ಚಿತ್ರದ ನಿರ್ಮಾಪಕ ಪುಟ್ಟರಾಜು ಎಂಬುವವರು ಕೆ. ಮಂಜು ವಿರುದ್ಧ ದೂರು ದಾಖಲಿಸಿದ್ದಾರೆ. ಹಣ ಪಡೆದು ವಂಚನೆ ಮಾಡಿದ ಆರೋಪದಡಿಯಲ್ಲಿ ಐಪಿಸಿ ಸೆಕ್ಷನ್ 420, 506 ಮತ್ತು 34 ಸೆಕ್ಷನ್ ಅಡಿಯಲ್ಲಿ ಎಫ್ ಐಆರ್ ದಾಖಲಾಗಿದೆ.

ಎಫ್ ಐಆರ್ ನಲ್ಲಿ ಮಂಜು ಅವರನ್ನು ಎರಡನೇ ಆರೋಪಿಯಾಗಿ ದಾಖಲಿಸಲಾಗಿದೆ. ರಾಜ್ಗೋಪಾಲ್ ಬಿ.ಎಂ, ರಮೇಶ್ ಬಾಬು, ವಿಜಯಲಕ್ಷ್ಮಿ ಎಂಬುವವರು ಪ್ರಮುಖ ಆರೋಪಿಗಳಾಗಿದ್ದಾರೆ.

SCROLL FOR NEXT