ನಟ ಜಗ್ಗಶ್ 
ಸಿನಿಮಾ ಸುದ್ದಿ

ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಪ್ರಕರಣ: ಕನ್ನಡಿಗರನ್ನ 45ವರ್ಷ ರಂಜಿಸಿದ ತಪ್ಪಿಗೆ ಈ ಶಿಕ್ಷೆನಾ?- ನಟ ಜಗ್ಗಶ್ ಪ್ರಶ್ನೆ

ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಪ್ರತಿಮೆ ಧ್ವಂಸ ಮಾಡಿರುವ ಕುರಿತಾಗಿ ಕಿಡಿಗೇಡಿಗಳ ಮನಸ್ಥಿತಿ ಕುರಿತಾಗಿ ಸಾಲು ಸಾಲು ಟ್ವೀಟ್ ಮಾಡಿರುವ ನವರಸ ನಾಯಕ ಜಗ್ಗೇಶ್ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು: ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಪ್ರತಿಮೆ ಧ್ವಂಸ ಮಾಡಿರುವ ಕುರಿತಾಗಿ ಕಿಡಿಗೇಡಿಗಳ ಮನಸ್ಥಿತಿ ಕುರಿತಾಗಿ ಸಾಲು ಸಾಲು ಟ್ವೀಟ್ ಮಾಡಿರುವ ನವರಸ ನಾಯಕ ಜಗ್ಗೇಶ್ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. 

ಕನ್ನಡಿಗರನ್ನ 45ವರ್ಷ ರಂಜಿಸಿದ ತಪ್ಪಿಗೆ ಈ ಶಿಕ್ಷೆನಾ?...ಆತನ ಆತ್ಮ ಈ ರಾಕ್ಷಸಿ ಕೃತ್ಯ ಗಮನಿಸದೆ ಇರಬಹುದು!ಆದರೆ ನೆನಪಿಡಿ ರಕ್ಕಸರೆ ನೀವು ಅಪಮಾನಿಸಿದ್ದು ನಿಮ್ಮ ರಂಜಿಸಿ ನಿರ್ಗಮಿಸಿದ ನಟನ ಅಲ್ಲಾ! ಬದಲಾಗಿ ನಿಮ್ಮ ಕನ್ನಡನೆಲದ ಮೆಚ್ಚಿನ ಮಗನನ್ನ! ನಿಮ್ಮ ತಂದೆತಾಯಿವಂಶ ಮೆಚ್ಚಿದ ಆತ್ಮ ಅದು! ನಿಮ್ಮಕೃತ್ಯ ಯಾವದೇವರು ಕ್ಷಮಿಸನು! ನತದೃಷ್ಟರೆ.! ಎಂದು ಹೇಳಿದ್ದಾರೆ. 

ಯಾವುದೋ ಭಾಷೆನಟನ  ವೈಭವಿಕರಿಸಿ ವಿಶಾಲಹೃದಯ ಎನ್ನುವವರೆ!ನಿಮ್ಮರಂಜಿಸಿ ಖುಷಿಪಡಿಸಿ ಸಂತನಂತೆ ಬಾಳಿ ನಿರ್ಗಮಿಸಿದ ಕಲಾಬಂಧು ಸತ್ತಮೇಲು ಕೊಂದು ಅಪಮಾನಿಸಿದ ಪಾಪಿಗಳಿಗೆ ತಕ್ಕ ಪಾಠಕಲಿಸಿ!ಕಲಾಬಂಧು ಶಿಲೆಯನ್ನ ಮರುಸ್ಥಾಪಿಸಿ ಗೌರವಿಸಿ ಕನ್ನಡತನದ ವಿಶಾಲಹೃದಯ ಪ್ರದರ್ಶಿಸಿ! ರಂಜಿಸಿ ಕಣ್ಮರೆಯಾದ ಕಲಾವಿದರಿಗೆ ಹೃದಯದಲ್ಲಿ ಜಾಗನೀಡಿ!ಅದು ಕನ್ನಡದ ಧರ್ಮ!

ಇಷ್ಟೇನಾ ಕನ್ನಡಕ್ಕೆ ದುಡಿದು ಕಣ್ಮರೆಯಾದ ಕಲಾವಿದರ ಹಣೆಬರಹ!ತುಂಬ ದುಃಖವಾಯಿತು! ಎಲ್ಲಿ ಹೋಯಿತು ಚಪ್ಪಾಳೆ ಸದ್ದು? ಎಲ್ಲಿ ಹೋಯಿತು ಬದುಕಿದ್ದಾಗ ನೋಡಲು ನಿಂತ ಅಭಿಮಾನ? ಎಲ್ಲಿ ಹೋಯಿತು ಇವನಮ್ಮವ ಇವನಮ್ಮವ ಎಂದ ಮನಗಳು? ಇದು ಕನ್ನಡಕ್ಕೆ ಮಾಡಿದ ಅವಮಾನ! ಒಳ್ಳೆಯ ಲಕ್ಷಣ ಅಲ್ಲ! ಬದಲಾಗಿ! ಎಂದು ದುಃಖದಿಂದ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT