ಭಾರತಿ ವಿಷ್ಣುವರ್ಧನ್ 
ಸಿನಿಮಾ ಸುದ್ದಿ

ಸಾಹಸಸಿಂಹ 'ವಿಷ್ಣುವರ್ಧನ್' ಪುತ್ಥಳಿ ಧ್ವಂಸ ಅಪಮಾನವಲ್ಲ, ಆಶೀರ್ವಾದ: ನಟಿ ಭಾರತಿ

ಇತ್ತೀಚೆಗೆ ಬೆಂಗಳೂರಿನ ಟೋಲ್ ಗೇಟ್ ಬಳಿ ವಿಷ್ಣುವರ್ಧನ್ ಪುತ್ಥಳಿ ಧ್ವಂಸವಾಗಿದ್ದು, ಇದನ್ನು ಅಪಮಾನವೆಂದು ಭಾವಿಸದೆ, ಆಶೀರ್ವಾದದಂತೆ ಪರಿಗಣಿಸೋಣ ಎಂದು ಭಾರತಿ ವಿಷ್ಣುವರ್ಧನ್ ಹೇಳಿದ್ದಾರೆ.

ಮೈಸೂರು/ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನ ಟೋಲ್ ಗೇಟ್ ಬಳಿ ವಿಷ್ಣುವರ್ಧನ್ ಪುತ್ಥಳಿ ಧ್ವಂಸವಾಗಿದ್ದು, ಇದನ್ನು ಅಪಮಾನವೆಂದು ಭಾವಿಸದೆ, ಆಶೀರ್ವಾದದಂತೆ ಪರಿಗಣಿಸೋಣ ಎಂದು ಭಾರತಿ ವಿಷ್ಣುವರ್ಧನ್ ಹೇಳಿದ್ದಾರೆ.

ವಿಷ್ಣುವರ್ಧನ್ ಅವರ 11ನೇ ಪುಣ್ಯ ಸ್ಮರಣೆಯ ದಿನದಂದು ಪುತ್ಥಳಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಸುದ್ದಿಗಾರರೊಡನೆ ಮಾತನಾಡಿ, ಡಾ. ವಿಷ್ಣುವರ್ಧನ್ ಬಗ್ಗೆ ಮಾತನಾಡುವವರು ಸದಾ ಇರಬೇಕು.  ಇದು ಅವರ ಇರುವಿಕೆಯನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತದೆ.  ಹೀಗಾಗಿ ಅವರ ಪುತ್ಥಳಿ ಧ್ವಂಸ ಅಪಮಾನವಲ್ಲ, ಆಶೀರ್ವಾದವೆಂದು ಭಾವಿಸೋಣ” ಎಂದಿದ್ದಾರೆ.

ಇಡೀ ಚಿತ್ರರಂಗವೇ ಪುತ್ಥಳಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದೆ. ಇದಕ್ಕಾಗಿ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ. ಆದರೆ ದುಷ್ಕೃತ್ಯ ಎಸಗಿದವರ ಬಗ್ಗೆ ಮಾತನಾಡದಿರುವುದೇ ಉತ್ತಮ ಎಂದು ಭಾರತಿ ವಿಷ್ಣುವರ್ಧನ್ ಹೇಳಿದ್ದಾರೆ. 

ಇದೇ ವೇಳೆ ವಿಷ್ಣು ಸ್ಮಾರಕದ ಕುರಿತು ಮಾತನಾಡಿ, ಸರ್ಕಾರದಿಂದ ಎಲ್ಲ ಬಗೆಯ ಸಹಕಾರ ದೊರಕಿದೆ. ಸ್ಮಾರಕ ನಿರ್ಮಾಣ ಮುಕ್ತಾಯವಾಗಿ ಅದು ಅಭಿಮಾನಿಗಳಿಗೆ ಕೊಡುಗೆಯಾದರೆ ಅದಕ್ಕಿಂತ ತೃಪ್ತಿ ಇನ್ನೊಂದಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT