ಸಿನಿಮಾ ಸುದ್ದಿ

ಗೋಲ್ಡನ್ ಸ್ಟಾರ್‌ಜತೆಗೆ ಸ್ಯಾಂಡಲ್‌ವುಡ್‌ನಲ್ಲಿ ನಟಿಸುತ್ತಿರುವುದು ಥ್ರಿಲ್ ನೀಡಿದೆ: ಸುರಭಿ

ಯೋಗರಾಜ್ ಭಟ್ ಅವರ ಗಾಳಿಪಟ  2 ಶೂಟಿಂಗ್ ನಲ್ಲಿ ತೊಡಗಿರುವ ಗೋಲ್ಡನ್ ಸ್ಟಾರ್ ಗಣೇಶ್ ಇದೇ ಸಮಯದಲ್ಲಿ  ಸುನಿ ನಿರ್ದೇಶನದ ಚಿತ್ರದಲ್ಲಿ ಸಹ ತೊಡಗಿಸಿಕೊಂಡಿದ್ದಾರೆ.ಸುಪ್ರೀತ್ ನಿರ್ಮಿಸಿರುವ ಈ ಚಿತ್ರವು ಫೆಬ್ರವರಿ 24 ರಂದು ಸೆಟ್ಟೇರಲಿದೆ.ಇದಕ್ಕೆ ಮುನ್ನ ನಿರ್ಮಾಪಕರು ಮಹೂರ್ತ ನೆರವೇರಿಸಲು ಯೋಜಿಸಿದ್ದಾರೆ.. ಇನ್ನೂ ಹೆಸರಿಡಲಾಗಿರುವ ಈ ಚಿತ್ರದಲ್ಲಿ ಸುರಭಿ ನಾಯಕಿಯಾಗಿ ಕಾ

ಯೋಗರಾಜ್ ಭಟ್ ಅವರ ಗಾಳಿಪಟ  2 ಶೂಟಿಂಗ್ ನಲ್ಲಿ ತೊಡಗಿರುವ ಗೋಲ್ಡನ್ ಸ್ಟಾರ್ ಗಣೇಶ್ ಇದೇ ಸಮಯದಲ್ಲಿ  ಸುನಿ ನಿರ್ದೇಶನದ ಚಿತ್ರದಲ್ಲಿ ಸಹ ತೊಡಗಿಸಿಕೊಂಡಿದ್ದಾರೆ.ಸುಪ್ರೀತ್ ನಿರ್ಮಿಸಿರುವ ಈ ಚಿತ್ರವು ಫೆಬ್ರವರಿ 24 ರಂದು ಸೆಟ್ಟೇರಲಿದೆ.ಇದಕ್ಕೆ ಮುನ್ನ ನಿರ್ಮಾಪಕರು ಮಹೂರ್ತ ನೆರವೇರಿಸಲು ಯೋಜಿಸಿದ್ದಾರೆ.. ಇನ್ನೂ ಹೆಸರಿಡಲಾಗಿರುವ ಈ ಚಿತ್ರದಲ್ಲಿ ಸುರಭಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ತಮಿಳು ಮತ್ತು ತೆಲುಗು ಚಲನಚಿತ್ರೋದ್ಯಮಗಳಲ್ಲಿ ಜನಪ್ರಿಯರಾಗಿರುವ ಈಕೆ ಧನುಷ್ ಅವರ ವೆಲೈಯಿಲ್ಲಾ ಪಟ್ಟಾಥಾರಿ ನಿಂದಾಗಿ ಹೆಸರಾಗಿದ್ದರು. ಇದೀಗ ಸ್ಯಾಂಡಲ್ ವುಡ್ ನಲ್ಲಿ ನಟಿಸುತ್ತಿರುವುದಕ್ಕೆ ನಟಿ ಉತ್ಸುಕರಾಗಿದ್ದು , "ಗೋಲ್ಡನ್ ಸ್ಟಾರ್ ಗಣೇಶ್ ಅವರೊಂದಿಗೆ ಸ್ಕ್ರೀನ್ ಸ್ಪೇಸ್ ಹಂಚಿಕೊಳ್ಳಲು ಇದು ಒಂದು ಸುವರ್ಣಾವಕಾಶ, ನನಗೆ ಕನ್ನಡದಲ್ಲಿ ಹೊಸತಾಗಿ ಕಾಣಿಸಲು  ಸರಿಯಾದ ಸಮಯ ಮತ್ತು ಅವಕಾ ಇದೆಂದು ನಾನು ಭಾವಿಸುತ್ತೇನೆ ಹೊಸದನ್ನು ಕಲಿಯಲು ಎದುರು ನೋಡುವ ನಾನು ಕನ್ನಡಕ್ಕೆ ಕರೆತಂದ  ನಿರ್ದೇಶಕ ಸುನಿ ಮತ್ತು ನಿರ್ಮಾಪಕ ಸುಪ್ರೀತ್  ಗೆ ಕೃತಜ್ಞಳಾಗಿದ್ದೇನೆ" ಎಂದರು.

ಬ್ಲಾಕ್ ಬಸ್ಟರ್ ಹಿಟ್ಸ್ ನೀಡಿದ ಚಮಕ್  ನಟ  ಮತ್ತು ನಿರ್ದೇಶಕ ಜೋಡಿ ಮತ್ತೊಂದು ರೊಮ್ಯಾಂಟಿಕ್ ಕಾಮಿಡಿ ಡ್ರಾಮಾಗಾಗಿ  ಒಟ್ಟಿಗೆ ಸೇರುತ್ತಿದ್ದಾರೆ, ಇದು ಇಂದಿನ ರಿಯಾಲಿಟಿ ಶೋ ಮತ್ತು ನ್ಯಾಯಾಲಯದ ಪ್ರಕರಣದ ಸುತ್ತ ಸುತ್ತುವ ಕಥನವಾಗಿರಲಿದೆ

ಕೆವಿಎನ್ ಮತ್ತು ಸುಪ್ರೀತ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗಿರುವ ಈ ಚಿತ್ರಕ್ಕೆ ಜುದಾ ಸ್ಯಾಂಡಿ ಸಂಗೀತ ಸಂಯೋಜಿಸಿದ್ದಾರೆ. ಸಂತೋಷ್ ರಾಯ್ ಪಥಾಜೆ  ಛಾಯಾಗ್ರಹಣ ಈ ಚಿತ್ರಕ್ಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT