ಯಶ್ 
ಸಿನಿಮಾ ಸುದ್ದಿ

ಸಂಭಾವನೆ ವಿಚಾರಕ್ಕೆ 'ಕೆಜಿಎಫ್ 2' ಚಿತ್ರವನ್ನು ತಿರಸ್ಕರಿಸಿದ್ದ 'ಬಾಹುಬಲಿ' ಪ್ರಖ್ಯಾತ ನಟಿ!

ಕನ್ನಡ ಚಿತ್ರರಂಗದ ದಿಕ್ಕು ದಿಸೆ ಬದಲಿಸಿದ ಕೆಜಿಎಫ್ ಭಾರತೀಯ ಸಿನಿಮಾರಂಗವೇ ಸ್ಯಾಂಡಲ್ವುಡ್ ನತ್ತ ತಿರುಗಿ ನೋಡುವಂತೆ ಮಾಡಿತ್ತು. ಇನ್ನು ಈ ಚಿತ್ರದಲ್ಲಿ ನಟಿಸುಬೇಕೆಂದು ಹಲವು ನಟ-ನಟಿಯರೂ ಆಶಿಸುತ್ತಿರುವಾಗಲೇ ಬಾಹುಬಲಿ ನಟಿಯೊಬ್ಬರು ಸಂಭಾವನೆ ವಿಚಾರಕ್ಕೆ ಚಿತ್ರವನ್ನು ತಿರಸ್ಕರಿಸಿದ್ದಾರೆ.

ಕನ್ನಡ ಚಿತ್ರರಂಗದ ದಿಕ್ಕು ದಿಸೆ ಬದಲಿಸಿದ ಕೆಜಿಎಫ್ ಭಾರತೀಯ ಸಿನಿಮಾರಂಗವೇ ಸ್ಯಾಂಡಲ್ವುಡ್ ನತ್ತ ತಿರುಗಿ ನೋಡುವಂತೆ ಮಾಡಿತ್ತು. ಇನ್ನು ಈ ಚಿತ್ರದಲ್ಲಿ ನಟಿಸುಬೇಕೆಂದು ಹಲವು ನಟ-ನಟಿಯರೂ ಆಶಿಸುತ್ತಿರುವಾಗಲೇ ಬಾಹುಬಲಿ ನಟಿಯೊಬ್ಬರು ಸಂಭಾವನೆ ವಿಚಾರಕ್ಕೆ ಚಿತ್ರವನ್ನು ತಿರಸ್ಕರಿಸಿದ್ದಾರೆ.

ಕೆಜಿಎಫ್ 2 ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದ್ದು ಬಾಲಿವುಡ್ ನ ಸಂಜಯ್ ದತ್ ಮತ್ತು ರವೀನಾ ಟಂಡನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸಿನಿಮಾದ ಕಲಾವಿದರ ವಿಚಾರದಲ್ಲಿ ಚಿತ್ರತಂಡ ದೊಡ್ಡ ಮಟ್ಟದ ಪ್ಲಾನ್ ಮಾಡಿತ್ತು. ಇದೇ ರೀತಿ ಉತ್ತರ ಹಾಗೂ ದಕ್ಷಿಣ ಭಾರತದ ಕೆಲವು ಜನಪ್ರಿಯ ಕಲಾವಿದರನ್ನು ಸಂಪರ್ಕ ಮಾಡಿತ್ತು.

ಬಾಹುಬಲಿ ಚಿತ್ರದಲ್ಲಿ ಶಿವಗಾಮಿ ಪಾತ್ರದಲ್ಲಿ ನಟಿಸಿದ್ದ ರಮ್ಯಾಕೃಷ್ಣ ಅವರಿಗೆ ಕೆಜಿಎಫ್ 2 ಚಿತ್ರದಲ್ಲಿ ನಟಿಸಲು ಕೇಳಲಾಗಿತ್ತು. ಆದರೆ ಸಂಭಾವನೆ ವಿಚಾರದಲ್ಲಿ ಒಪ್ಪಿಗೆಯಾಗದೆ ರಮ್ಯಾಕೃಷ್ಣ ಅವರು ಚಿತ್ರವನ್ನು ತಿರಸ್ಕರಿಸಿದ್ದರಂತೆ.

ಬಾಹುಬಲಿ ಚಿತ್ರಕ್ಕಾಗಿ ರಮ್ಯಾಕೃಷ್ಣ ಅವರು 2.5 ಕೋಟಿ ರುಪಾಯಿ ಸಂಭಾವನೆ ಪಡೆದಿದ್ದರು. ಅಂದಿನಿಂದ ಶಿವಗಾಮಿಯ ಸಂಭಾವನೆ ಸ್ವಲ್ಪ ಹೆಚ್ಚಾಗಿತ್ತು. ದುಬಾರಿ ಸಂಭಾವನೆ ಕೇಳಿದ್ದರಿಂದ ರಮ್ಯಾಕೃಷ್ಣ ಅವರ ಬದಲಿಗೆ ಬಾಲಿವುಡ್ ನಟಿ ರವೀನಾ ಟಂಡನ್ ಅವರನ್ನು ಚಿತ್ರತಂಡ ಆಯ್ಕೆ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT