ದರ್ಶನ್ 
ಸಿನಿಮಾ ಸುದ್ದಿ

ದರ್ಶನ್ ಹುಟ್ಟು ಹಬ್ಬದಂದು ಗದ್ದಲ: ಮೂರು ಕೇಸ್ ದಾಖಲು

ದರ್ಶನ್ ಹುಟ್ಟುಹಬ್ಬದಂದು ಉಂಟಾದ ಗಲಾಟೆ ಸಂಬಂಧ ದರ್ಶನ್ ಅಭಿಮಾನಿಗಳು ಹಾಗೂ ಅವರ ಮ್ಯಾನೇಜರ್ ವಿರುದ್ಧ ಮೂರು ಎಫ್ ಐ ಆರ್ ದಾಖಲಾಗಿವೆ.

ಬೆಂಗಳೂರು: ದರ್ಶನ್ ಹುಟ್ಟುಹಬ್ಬದಂದು ಉಂಟಾದ ಗಲಾಟೆ ಸಂಬಂಧ ದರ್ಶನ್ ಅಭಿಮಾನಿಗಳು ಹಾಗೂ ಅವರ ಮ್ಯಾನೇಜರ್ ವಿರುದ್ಧ ಮೂರು ಎಫ್ ಐ ಆರ್ ದಾಖಲಾಗಿವೆ.

ಫೆಬ್ರವರಿ 15 ಮತ್ತು 16 ರಂದು ಹುಟ್ಟಹಬ್ಬ ಸಂಭ್ರಮಾಚರಣೆ ಸಂಬಂಧ ರಾಜರಾಜೇಶ್ವರಿ ನಗರದ ಐಡಿಯಲ್ಸ್ ಹೋಮ್ ನಿವಾಸಿಗಳು  ದೂರು ದಾಖಲಿಸಿದ್ದಾರೆ.

ದರ್ಶನ್ ಅಭಿಮಾನಿಗಳು ತಮ್ಮ ಮನೆಯ ಹೂ ಕುಂಡಗಳನ್ನು ಹಾಳು ಮಾಡಿದ್ದಾರೆಂದು ಒಂದು ದೂರು ಹಾಗೂ ಮನೆ ಮುಂದೆ ನಿಲ್ಲಿಸಿದ್ದ ಎಸ್ ಯು ವಿ ಕಾರಿಗೆ ಹಾನಿಯಾಗಿದ್ದು 40 ಸಾವಿರ ರು ನಷ್ಟವಾಗಿದೆ ಎಂದ ಮತ್ತೊಬ್ಬರು ದೂರು ದಾಖಲಿಸಿದ್ದಾರೆ.

ಮುಂದಿನ ದಿನಗಳಲ್ಲಿ ಈ ರೀತಿಯ ಸಂಭ್ರಮಾಚರಣೆಗೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದ್ದಾರೆ. ನಿವಾಸಿಗಳು ನೀಡಿರುವ ದೂರನ್ನು ಗಂಭೀರವಾಗಿ ಪರಿಗಣಿಸಿದ್ದು, ಸಿಸಿಟಿವಿ ಕ್ಯಾಮೆರಾ ಫೂಟೇಜ್ ಪರಿಶೀಲಿಸಿ  ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಿಸಿಟಿವಿಯಲ್ಲಿ ದೃಶ್ಯಗಳು ಸೆರೆಯಾಗಿವೆ, ಆದರೆ ಕತ್ತಲಾದ್ದರಿಂದ ವಿಡಿಯೋ ಸ್ಪಷ್ಟವಾಗಿಲ್ಲ, ಆಯೋಜಕರಿಗೆ ಹೇಳಿಕೆ ಕೊಡುವಂತೆ  ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ಪೊಲೀಸ್ ಪೇದೆ ದೇವರಾಜ್ ಎಂಬುವರು  ಜ್ಞಾನಭಾರತಿ ನಗರ ಪೊಲೀಸ್ ಠಾಣೆಯಲ್ಲಿ ದರು ದಾಖಲಿಸಿದ್ದಾರೆ, ದರ್ಶನ್ ಅಭಿಮಾನಿಯೊಬ್ಬರು ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಿದ್ದಾರೆ.  ಅಬಿಮಾನಿಯೊಬ್ಬ ತಮ್ಮ ಮೇಲೆ ಹಲ್ಲೆ ಮಾಡಿದ್ದರಿಂದ ತಮ್ಮ ಮೂಗು ಹಾಗೂ ಬಲ ಗಣ್ಣಿಗೆ ಗಾಯವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್ ಗೆ ಜಸ್ಟೀಸ್ ಪಾಂಚೋಲಿ ನೇಮಕ: ಕೊಲಿಜಿಯಂ ಶಿಫಾರಸಿಗೆ ನ್ಯಾಯಮೂರ್ತಿ ಬಿ. ವಿ. ನಾಗರತ್ನ ತೀವ್ರ ಅಸಮಾಧಾನ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT