ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಜಾಮೀನು ರಹಿತ ವಾರಂಟ್: ಮತ್ತೆ ಕಾನೂನು ಹೋರಾಟಕ್ಕೆ ಸಿದ್ಧ ಎಂದ ರಕ್ಷಿತ್ ಶೆಟ್ಟಿ

ಕಾಪಿರೈಟ್‌ ಉಲ್ಲಂಘಿಸಿ ‘ಕಿರಿಕ್‌ ಪಾರ್ಟಿ’ ಚಿತ್ರದಲ್ಲಿ ಹಾಡು ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಲಹರಿ ಸಂಸ್ಥೆ ನೀಡಿರುವ ಜಾಮೀನು ರಹಿತ ವಾರಂಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ನಟ ರಕ್ಷಿತ್ ಶೆಟ್ಟಿ ನಾವು ಮತ್ತೆ ಕಾನೂನು ಹೋರಾಟ ಮಾಡಲು ಸಿದ್ದ ಎಂದು ಹೇಳಿದ್ದಾರೆ.

ಬೆಂಗಳೂರು: ಕಾಪಿರೈಟ್‌ ಉಲ್ಲಂಘಿಸಿ ‘ಕಿರಿಕ್‌ ಪಾರ್ಟಿ’ ಚಿತ್ರದಲ್ಲಿ ಹಾಡು ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಲಹರಿ ಸಂಸ್ಥೆ ನೀಡಿರುವ ಜಾಮೀನು ರಹಿತ ವಾರಂಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ನಟ ರಕ್ಷಿತ್ ಶೆಟ್ಟಿ ನಾವು ಮತ್ತೆ ಕಾನೂನು ಹೋರಾಟ ಮಾಡಲು ಸಿದ್ದ ಎಂದು ಹೇಳಿದ್ದಾರೆ.

ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, 'ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಈಗಾಗಲೇ ಸಿವಿಲ್ ಮತ್ತು ಹೈ ಕೋರ್ಟ್‌ನಲ್ಲಿ ಈ ಕೇಸ್ ಅನ್ನು ಗೆದ್ದಿದೇವೆ. ಮತ್ತೆ ಅದೇ ಪ್ರಕರಣದ ಮೇಲೆ ಇನ್ನೊಂದು ಕೇಸ್‌ ದಾಖಲಿಸುವುದರಿಂದ ಯಾವ ಪ್ರಯೋಜನವಿದೆ? 6 ತಿಂಗಳ ಹಿಂದೆ ಎರಡನೇ ಪ್ರಕರಣ ದಾಖಲಿಸಿದ್ದ ನಮಗೂ ನಮ್ಮ ವಕೀಲರಿಗೂ ಈ ಬಗ್ಗೆ ಮಾಹಿತಿ ನೀಡಿಲ್ಲ ಏಕೆ ಎಂದು  ಪ್ರಶ್ನೆ ಮಾಡಿದ್ದಾರೆ.

ಅಂತೆಯೇ ಮತ್ತೊಂದು ಟ್ವೀಟ್ ನಲ್ಲಿ 'ನಾವು ಮತ್ತೆ ಕಾನೂನು ಹೋರಾಟ ಮಾಡಲು ನಿರ್ಧರಿಸಿದ್ದೇವೆ. ಆಗ ನಮ್ಮ ಸಿನಿಮಾ ಬಿಡುಗಡೆಗೆ ಕಷ್ಟವಾಗಿತ್ತು. ಕೊನೆಯ ಕ್ಷಣದಲ್ಲಿ ಹಾಡನ್ನು ಕತ್ತರಿಸಿ ಚಿತ್ರವನ್ನು ಬಿಡುಗಡೆ ಮಾಡಲಾಯಿತು ಎಂದು ರಕ್ಷಿತ್ ಶೆಟ್ಟಿ ಹೇಳಿದ್ದಾರೆ.

ಇನ್ನು ಲಹರಿ ಸಂಸ್ಥೆಯು ಎರಡನೇ ಪ್ರಕರಣ ದಾಖಲಿಸಿರುವ ಸಂಬಂಧ ರಕ್ಷಿತ್‌ ಶೆಟ್ಟಿ ಮತ್ತು ತಂಡ ನ್ಯಾಯಾಲಯಕ್ಕೆ ಹಾಜರಾಗದೇ ಇರುವುದಕ್ಕೆ ನ್ಯಾಯಾಲಯ ಜಾಮೀನು ರಹಿತ ವಾರಂಟ್‌ ಹೊರಡಿಸಿದೆ. 2016ರ ಡಿಸೆಂಬರ್ 30ರಂದು ಬಿಡುಗಡೆ ಆದ ಕಿರಿಕ್ ಪಾರ್ಟಿ ಚಿತ್ರದಲ್ಲಿ ಹೇಯ್‌ ಹೂ ಆರ್‌ ಯೂ (Hey who are you) ಹಾಡನ್ನು ಲಹರಿ ಸಂಸ್ಥೆಯ ಅನುಮತಿ ಇಲ್ಲದೆ ಬಳಸಲಾಗಿತ್ತು. ‘ಶಾಂತಿ ಕ್ರಾಂತಿ’ ಚಿತ್ರದ ಹಾಡನ್ನು ಚಿತ್ರದಲ್ಲಿ ಬಳಸಿಕೊಂಡಿದ್ದರಿಂದ ಲಹರಿ ಸಂಸ್ಥೆ 2017ರ ಜನವರಿ 11ರಂದು ದೂರು ದಾಖಲಿಸಿತ್ತು. ಲಹರಿ ಆಡಿಯೋ ಸಂಸ್ಥೆ ಕಾಪಿ ರೈಟ್ ಕಾಯ್ದೆ ಅಡಿ ರಕ್ಷಿತ್ ಶೆಟ್ಟಿ , ಪರಮವ್ಹಾ ಸ್ಟುಡಿಯೋ ಪ್ರೈವೇಟ್ ಲಿಮಿಟೆಡ್ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ವಿರುದ್ಧ ಪ್ರಕರಣ ದಾಖಲಿಸಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT