ರಕ್ಷಿತ್ ಶೆಟ್ಟಿ 
ಸಿನಿಮಾ ಸುದ್ದಿ

ಶ್ರೀಮನ್ನಾರಾಯಣನಿಗೆ ಸಂಕಷ್ಟ: ರಕ್ಷಿತ್‌ ಶೆಟ್ಟಿ ವಿರುದ್ಧ ಜಾಮೀನುರಹಿತ ವಾರಂಟ್‌

ಕಾಪಿ ರೈಟ್‌ ಉಲ್ಲಂಘಿಸಿ ‘ಕಿರಿಕ್‌ ಪಾರ್ಟಿ’ ಚಿತ್ರದಲ್ಲಿ ಹಾಡು ಬಳಸಿದ ಆರೋಪ ಸಂಬಂಧ ವಿಚಾರಣೆಗೆ ಹಾಜರಾಗದ ನಟ ರಕ್ಷಿತ್ ಶೆಟ್ಟಿ ಅವರ ವಿರುದ್ಧ ಬೆಂಗಳೂರಿನ 9ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ಬೆಂಗಳೂರು: ಕಾಪಿ ರೈಟ್‌ ಉಲ್ಲಂಘಿಸಿ ‘ಕಿರಿಕ್‌ ಪಾರ್ಟಿ’ ಚಿತ್ರದಲ್ಲಿ ಹಾಡು ಬಳಸಿದ ಆರೋಪ ಸಂಬಂಧ ವಿಚಾರಣೆಗೆ ಹಾಜರಾಗದ ನಟ ರಕ್ಷಿತ್ ಶೆಟ್ಟಿ ಅವರ ವಿರುದ್ಧ ಬೆಂಗಳೂರಿನ 9ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಮತ್ತು ಅವರ ಮಾಲೀಕತ್ವದ ಪರಮ್ವಾಹ್ ಸ್ಟುಡಿಯೋಸ್ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್‍ಗೆ ಸಂಕಷ್ಟ ಎದುರಾಗಿದೆ. 2016ರಲ್ಲಿ ರಿಲೀಸ್ ಆಗಿ ಬಾಕ್ಸ್ ಆಫೀಸ್‍ನಲ್ಲಿ ಸದ್ದು ಮಾಡಿದ 'ಕಿರಿಕ್ ಪಾರ್ಟಿ' ಚಿತ್ರದಲ್ಲಿ ಅನುಮತಿ ಇಲ್ಲದೆ ಹಾಡನ್ನು ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿ ಲಹರಿ ಆಡಿಯೋ ಸಂಸ್ಥೆ ರಕ್ಷಿತ್ ಶೆಟ್ಟಿ ಒಡೆತನದ ಪರಮ್ವಾಹ್ ಸ್ಟುಡಿಯೋಸ್ ವಿರುದ್ಧ ಕೋರ್ಟ್ ಮೆಟ್ಟಿಲೇರಿತ್ತು.

ಈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ನಗರದ 9ನೇ ಎಸಿಎಂಎಂ ಕೋರ್ಟ್ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿತ್ತು. ಆದರೆ ಆರೋಪಿಗಳು ನ್ಯಾಯಾಲಯಕ್ಕೆ ನಿರಂತರ ಗೈರು ಹಾಜರಾದ ಹಿನ್ನಲೆಯಲ್ಲಿ ಕೋರ್ಟ್ ಜಾಮೀನುರಹಿತ ಬಂಧನ ವಾರಂಟ್ ಜಾರಿ ಮಾಡಿದೆ.

ಕಿರಿಕ್ ಪಾರ್ಟಿ ಚಿತ್ರದಲ್ಲಿನ "ಹೇ ಹೂ ಆರ್ ಯೂ..." ಹಾಡಿನಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ 'ಶಾಂತಿ ಕ್ರಾಂತಿ' ಚಿತ್ರದ "ಮಧ್ಯರಾತ್ರಿಯಲ್ಲಿ..." ಹಾಡಿನ ಟ್ರ್ಯಾಕ್ ಬಳಕೆ ಮಾಡಿಕೊಂಡು ಕಾಪಿರೈಟ್ ಉಲ್ಲಂಘಿಸಿದ್ದಾರೆ ಎಂಬ ಆರೋಪ ಮಾಡಲಾಗಿದೆ. 

ಇದಕ್ಕೆ ಸಂಬಂಧಿಸಿದಂತೆ ಹಾಡಿನ ರೈಟ್ಸ್ ಹೊಂದಿರುವ ಲಹರಿ ಆಡಿಯೋ ಸಂಸ್ಥೆ ರಕ್ಷಿತ್ ಶೆಟ್ಟಿ ಒಡೆತನದ ಪರಮ್ ವಾಹ್ ಸ್ಟುಡಿಯೋಸ್ ವಿರುದ್ಧ ದೂರು ದಾಖಲಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT