ಅವನೇ ಶ್ರೀಮನ್ನಾರಾಯಣ 
ಸಿನಿಮಾ ಸುದ್ದಿ

'ಅವನೇ ಶ್ರೀಮನ್ನಾರಾಯಣ' ವೀಕ್ಷಕರ ಪ್ರತಿಕ್ರಿಯೆಗೆ ಬಹಳ ಸಂತೋಷವಿದೆ: ನಿರ್ದೇಶಕ ಸಚಿನ್ ರವಿ

ನಟ ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಚಿತ್ರ ವೀಕ್ಷಣೆ ಮಾಡಿದ ಜನರ ಪ್ರತಿಕ್ರಿಯೆ ಅತ್ಯುತ್ತಮವಾಗಿದ್ದು, ಬಹಳ ಸಂತೋಷವಾಗುತ್ತಿದೆ ಎಂದು ಚಿತ್ರದ ನಿರ್ದೇಶದ ಸಚಿನ್ ರವಿಯವರು ಹೇಳಿದ್ದಾರೆ. 

ನಟ ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಚಿತ್ರ ವೀಕ್ಷಣೆ ಮಾಡಿದ ಜನರ ಪ್ರತಿಕ್ರಿಯೆ ಅತ್ಯುತ್ತಮವಾಗಿದ್ದು, ಬಹಳ ಸಂತೋಷವಾಗುತ್ತಿದೆ ಎಂದು ಚಿತ್ರದ ನಿರ್ದೇಶದ ಸಚಿನ್ ರವಿಯವರು ಹೇಳಿದ್ದಾರೆ. 

ಡಿ.27ರಂದು ಬಿಡುಗಡೆಗೊಂಡ ಅವನೇ ಶ್ರೀಮನ್ನಾರಾಯಣ ಚಿತ್ರಕ್ಕೆ ಪ್ರೇಕ್ಷಕರು ಫುಲ್ ಮಾರ್ಕ್ಸ್ ಕೊಡುತ್ತಿದ್ದಾರೆ. ಚಿತ್ರ ಅತ್ಯುತ್ತಮವಾಗಿ ಪ್ರದರ್ಶನಗೊಳ್ಳುತ್ತಿದ್ದು, ಜನವರಿ 1 ರಂದು ತೆಲುಗು ಭಾಷೆಗೂ ಡಬ್ ಆಗಿದೆ, ಜನವರಿ 3 ರಂದು ತಮಿಳು ಹಾಗೂ ಮಲಯಾಳಂನಲ್ಲೂ ಚಿತ್ರ ಬಿಡುಗಡೆ ಕಂಡಿದೆ. 

ಮೂರು ಅನ್ಯ ಭಾಷೆಗಳಲ್ಲಿ ಚಿತ್ರ ತೆರೆಕಂಡ ಹಿನ್ನೆಲೆಯಲ್ಲಿ ಚಿತ್ರ ತಂಡ ಮೂರೂ ರಾಜ್ಯಗಳಿಗೂ ಭೇಟಿ ನೀಡಿ ಪ್ರೇಕ್ಷಕರ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ. ಕೇವಲ ಕರ್ನಾಟಕದಲ್ಲಿ ಅಷ್ಟೇ ಅಲ್ಲದೆ, ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿಯೂ ಚಿತ್ರ ಉತ್ತಮವಾಗಿ ಪ್ರದರ್ಶನಗೊಳ್ಳುತ್ತಿರುವುದು ತಂಡಕ್ಕೆ ಸಂತಸ ತಂದಿದೆ. 

ಚಿತ್ರವು ಪ್ರೇಕ್ಷಕರಲ್ಲಿ ಸಾಕಷ್ಟು ಚರ್ಚೆಗಳನ್ನು ಮಾಡುವಂತೆ ಮಾಡಿದೆ. ಜನರ ಮಾತಿಗೆ ಹೆಚ್ಚಿನ ಪ್ರೇಕ್ಷಕರು ಚಿತ್ರ ನೋಡುವಂತಾಗುತ್ತಿದೆ. ಜನರಿಂದ ಸಕಾರಾತ್ಮಕ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ. ಇದೀಗ ಹಿಂದಿ ಭಾಷೆಯಲ್ಲೂ ಬಿಡುಗಡೆ ಮಾಡಲು ಸಿದ್ಧತೆಗಳು ನಡೆಯುತ್ತಿವೆ ಎಂದು ನಿರ್ದೇಶಕರು ಹೇಳಿದ್ದಾರೆ. 

ಬಾಲಿವುಡ್ ವರ್ಷನ್ ನಲ್ಲಿ ಕೆಲ ದೃಶ್ಯಗಳಿಗೆ ಕತ್ತರಿ ಬೀಳಲಿದ್ದು, 2 ಗಂಟೆ 52 ನಿಮಿಷಗಳ ಕಾಲ ಚಿತ್ರ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದ್ದಾರೆ. 

ನಿರ್ದೇಶಕಾನಾಗಿ ನಾನು 100 ಬಾರಿ ಚಿತ್ರವನ್ನು ನೋಡಿದ್ದೇನೆ. ಸ್ನೇಹಿತರು ಹಾಗೂ ಚಿತ್ರ ವಿಮರ್ಶಕರಿಂದ ವಿಭಿನ್ನ ರೀತಿಯ ಅಭಿಪ್ರಾಯಗಳು ವ್ಯಕ್ತವಾಗಿವೆ. ಚಿತ್ರಕ್ಕೆ 10ರಲ್ಲಿ 8 ಅಂಕಗಳನ್ನು ನೀಡಿದ್ದಾರೆ. ಕೆಲವರು ಚಿತ್ರ ಬಹಳ ಇಷ್ಟವಾಯಿತು. ಆದರೆ, ಹೆಚ್ಚು ಸಮಯವಿರುವುದರಿಂದ ಕೊಂಚ ಬೇಸರ ತರಿಸಿತು ಎಂದಿದ್ದಾರೆ. ಚಿತ್ರ ಬಿಡುಗಡೆಗೂ ಮುನ್ನವೇ ನಾವು ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಜನರು ಸಂತೋಷಪಡಬೇಕೆಂಬುದು ನಾವು ನಿರೀಕ್ಷಿಸಿದ್ದೆವು. ಆದರೆ, ಪ್ರೇಕ್ಷಕರಿಗ ಅದು ಎಳೆದಂತೆ ಕಾಣತ್ತಿದೆ. ಹೀಗಾಗಿ ಜನರ ಪ್ರತಿಕ್ರಿಯೆ ಮೇರೆಗೆ ಕೆಲ ಅನಗತ್ಯ ದೃಶ್ಯವನ್ನು ತೆಗೆದುಹಾಕಲು ನಿರ್ಧರಿಸಿದ್ದೇವಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT