ಕಮಲಿ ನಿರ್ದೇಶಕ ಅರವಿಂದ್ ಕೌಶಿಕ್ 
ಸಿನಿಮಾ ಸುದ್ದಿ

ಕಮಲಿ ಧಾರಾವಾಹಿ ನಿರ್ದೇಶಕ ಅರವಿಂದ ಕೌಶಿಕ್ ವಿರುದ್ಧ ದೂರು ದಾಖಲು

ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ  'ಕಮಲಿ' ಧಾರಾವಾಹಿ ನಿರ್ಮಾಪಕ ರೋಹಿತ್ ತಮಗೆ ವಂಚನೆಯಾಗಿದೆ ಎಂದು‌ ಆರೋಪಿಸಿ ನಿರ್ದೇಶಕರ ವಿರುದ್ಧ  ನಗರ ಪೊಲೀಸ್ ಆಯುಕ್ತ ಎನ್ ಭಾಸ್ಕರ್ ರಾವ್ ಅವರಿಗೆ ದೂರು ನೀಡಿದ್ದಾರೆ.

ಬೆಂಗಳೂರು:  ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ  'ಕಮಲಿ' ಧಾರಾವಾಹಿ ನಿರ್ಮಾಪಕ ರೋಹಿತ್ ತಮಗೆ ವಂಚನೆಯಾಗಿದೆ ಎಂದು‌ ಆರೋಪಿಸಿ ನಿರ್ದೇಶಕರ ವಿರುದ್ಧ  ನಗರ ಪೊಲೀಸ್ ಆಯುಕ್ತ ಎನ್ ಭಾಸ್ಕರ್ ರಾವ್ ಅವರಿಗೆ ದೂರು ನೀಡಿದ್ದಾರೆ.

ಧಾರಾವಾಹಿ ನಿರ್ದೇಶಕ ಅರವಿಂದ್ ಕೌಶಿಕ್, ಶಿಲ್ಪಾ ಕೌಶಿಕ್ ಮತ್ತು ನವೀನ್ ಸಾಗರ್ ಎಂಬುವವರ ವಿರುದ್ಧ  ರೋಹಿತ್ ದೂರು ದಾಖಲಿಸಿದ್ದಾರೆ. ಸತ್ವ ಮೀಡಿಯಾ ಸಂಸ್ಥೆಯಡಿ ನಿರ್ಮಾಣಗೊಳ್ಳುತ್ತಿರುವ ಕಮಲಿ ಧಾರಾವಾಹಿಗೆ ತಾವು 73 ಲಕ್ಷ ರೂ. ಬಂಡವಾಳ ಹೂಡಿಕೆ ಮಾಡಿದ್ದು, ಹೂಡಿಕೆಯ ನಂತರ ಬಂದ ಲಾಭಾಂಶ ಹಾಗೂ ಬಂಡವಾಳವನ್ನು ತಮಗೆ ವಾಪಾಸ್ಸು ನೀಡಿಲ್ಲ ಎಂದು ರೋಹಿತ್ ಆರೋಪಿಸಿದ್ದಾರೆ.

ಕಳೆದ 2018ರ ಮೇ 28ರಂದು 'ಕಮಲಿ' ಧಾರಾವಾಹಿ ಆರಂಭವಾಗಿತ್ತು. ಸುಮಾರು 287 ಸಂಚಿಕೆಗಳು ಪ್ರಸಾರವಾಗುವವರೆಗೂ ರೋಹಿತ್ ಅವರನ್ನು ನಿರ್ಮಾಪಕನೆಂದು ತೋರಿಸಲಾಗಿತ್ತು. ಆದರೆ, ನಂತರ ಧಾರಾವಾಹಿಯ ಟೈಟಲ್ ಕಾರ್ಡ್​ನಿಂದ ರೋಹಿತ್ ಅವರ ಹೆಸರನ್ನು ತೆಗೆದು ಹಾಕಲಾಗಿತ್ತು ಎನ್ನಲಾಗಿದೆ.

ಧಾರಾವಾಹಿಯ ನಿರ್ದೇಶಕ ಅರವಿಂದ್ ಕೌಶಿಕ್ ತಮ್ಮ ಪತ್ನಿ ಶಿಲ್ಪಾ ಹೆಸರಿನಲ್ಲಿ ಸತ್ವ ಮೀಡಿಯಾ ಬ್ಯಾನರ್​ನಡಿ ಧಾರಾವಾಹಿ ನಿರ್ಮಿಸಿದ್ದು, ಈ ಸಂಬಂಧ ಖಾಸಗಿ ಚಾನೆಲ್ ಜೊತೆ ಅಗ್ರಿಮೆಂಟ್ ಮಾಡಿಕೊಂಡಿದ್ದಾರೆ.

ಈ ಮೂಲಕ ಅರವಿಂದ್ ಕೌಶಿಕ್, ಆತನ ಪತ್ನಿ ಶಿಲ್ಪಾ, ಹಾಗೂ ನವೀನ್ ಸಾಗರ್ ಎಂಬುವವರು ಸೇರಿಕೊಂಡು ಧಾರಾವಾಹಿಯಿಂದ ಬಂದ ಎಲ್ಲ ಲಾಭಾಂಶವನ್ನು ತಾವೇ ಪಡೆದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. 73 ಲಕ್ಷ ರೂ. ಬಂಡವಾಳ ಹೂಡಿಕೆ ಮಾಡಿದ್ದ ತಮಗೆ ಅತ್ಯಂತ ವ್ಯವಸ್ಥಿತವಾಗಿ ವಂಚನೆಯಾಗಿದೆ ಎಂದು ರೋಹಿತ್ ಆರೋಪಿಸಿದ್ದಾರೆ.

ಈ ಸಂಗತಿಯನ್ನು ದಾರವಾಹಿ ಪ್ರಸಾರವಾಗುವ ವಾಹಿನಿ ಗಮನಕ್ಕೂ ತಂದಿದ್ದೆ. ಆದರೆ, ವಾಹಿನಿ ನಿರ್ದೇಶಕರು ಸೂಕ್ತ ರೀತಿಯಲ್ಲಿ ಸ್ಪಂದಿಸಿಲ್ಲ ಎಂದು ರೋಹಿತ್ ದೂರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT