ದರ್ಶನ್ 
ಸಿನಿಮಾ ಸುದ್ದಿ

ಹಾರ-ತುರಾಯಿ ಬದಲಿಗೆ ದವಸ ಧಾನ್ಯ ತನ್ನಿ:ಅಭಿಮಾನಿಗಳಿಗೆ ದರ್ಶನ್ ಸೂಚನೆ

ಚಾಲೆಂಜಿಂಗ್ ಸ್ಟಾರ್ ದರ್ಶನ್, ತಮ್ಮ ಜನ್ಮದಿನವನ್ನು ಸರಳವಾಗಿ ಆಚರಿಸಿಕೊಳ್ಳುತ್ತಿದ್ದು, ಈ ಬಾರಿಯೂ ಅದೇ ಸರಳತೆ ದರ್ಶನ್ ಮುಂದುವರೆಸಿದ್ದಾರೆ.

ಬೆಂಗಳೂರು: ಸ್ಟಾರ್ ನಟರ ಜನ್ಮದಿನವನ್ನು ಅಭಿಮಾನಿಗಳು ತಮ್ಮಷ್ಟದಂತೆ ಅದ್ಧೂರಿಯಾಗಿ ಆಚರಣೆ ಮಾಡುತ್ತಾರೆ.

ಆದರೆ, ಚಾಲೆಂಜಿಂಗ್ ಸ್ಟಾರ್ ದರ್ಶನ್, ತಮ್ಮ ಜನ್ಮದಿನವನ್ನು ಸರಳವಾಗಿ ಆಚರಿಸಿಕೊಳ್ಳುತ್ತಿದ್ದು, ಈ ಬಾರಿಯೂ ಅದೇ ಸರಳತೆ ದರ್ಶನ್ ಮುಂದುವರೆಸಿದ್ದಾರೆ.

ಫೆಬ್ರವರಿ16ರಂದು ದರ್ಶನ್ ಹುಟ್ಟು ಹಬ್ಬ ಇರುವುದರಿಂದ ಹಾರ, ತುರಾಯಿ, ಕೇಕ್ ತರುವ ಬದಲು ಅಕ್ಕಿ ಬೇಳೆ, ದವಸ ಧಾನ್ಯ ತರಲು ಡಿ ಬಾಸ್ ಅಭಿಮಾನಿಗಳಿಗೆ ಸೂಚಿಸಿದ್ದಾರೆ.

ಹುಟ್ಟು ಹಬ್ಬದ ನಂತರ ಸಂಗ್ರಹಣೆ ಆದ ಅಕ್ಕಿ, ಧವಸ ಧಾನ್ಯಗಳನ್ನು ಅನಾಥಾಶ್ರಮಗಳಿಗೆ ತಲುಪಿಸುವ ಪ್ಲಾನ್ ಇಟ್ಟುಕೊಳ್ಳಲಾಗಿದೆ.

ಈಗಾಗಲೇ ಮೈಸೂರಿನಲ್ಲಿ ದವಸ ಧಾನ್ಯ ಸಂಗ್ರಹಿಸುವ ಕೆಲಸಕ್ಕೆ ದರ್ಶನ್ ಅಭಿಮಾನಿಗಳು ಮುಂದಾಗಿದ್ದಾರೆ. 

ದರ್ಶನ್ ಕೂಡ ಈ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಕೇಕ್, ಹಾರಕ್ಕೆ ಖರ್ಚು ಮಾಡುವ ಹಣದಲ್ಲಿ ದವಸ-ಧಾನ್ಯ ತೆಗೆದುಕೊಂಡು ಬರುವಂತೆ ಸಂದೇಶ ನೀಡಿದ್ದಾರೆ. ಈ ಮೂಲಕ ಭಿನ್ನವಾಗಿ ಹುಟ್ಟು ಹಬ್ಬ ಆಚರಣೆ ಮಾಡಲು ದರ್ಶನ್ ರೆಡಿ ಆಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತು ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: CM ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ; Video

Hong Kong ಅಗ್ನಿ ಪ್ರಮಾದ: ಮೂವರ ಬಂಧನ; 55 ಮಂದಿಯ ಜೀವ ತೆಗೆಯಿತಾ ಸಿಗರೇಟ್ ಕಿಡಿ? ವೈರಲ್ ಆಗಿರುವ ವಿಡಿಯೋದಲ್ಲೇನಿದೆ?

ರಾಜ್ಯದ ಮಹಿಳಾ ಕ್ರೀಡಾಪಟುಗಳನ್ನು ಸನ್ಮಾನಿಸಿ, ತಲಾ 5 ಲಕ್ಷ ರೂ. ಬಹುಮಾನ ಘೋಷಿಸಿದ ಸಿಎಂ

LPG ಆಮದು: ಭಾರತ-ಅಮೆರಿಕ ಒಪ್ಪಂದ ತೈಲ ಸಂಸ್ಥೆಗಳಿಗೆ ದುಬಾರಿ; ಗ್ರಾಹಕರ ಮೇಲೆ ಪರಿಣಾಮ? ತಜ್ಞರು ಹೇಳಿದ್ದೇನು?

SCROLL FOR NEXT