ದರ್ಶನ್ 
ಸಿನಿಮಾ ಸುದ್ದಿ

ಹಾರ-ತುರಾಯಿ ಬದಲಿಗೆ ದವಸ ಧಾನ್ಯ ತನ್ನಿ:ಅಭಿಮಾನಿಗಳಿಗೆ ದರ್ಶನ್ ಸೂಚನೆ

ಚಾಲೆಂಜಿಂಗ್ ಸ್ಟಾರ್ ದರ್ಶನ್, ತಮ್ಮ ಜನ್ಮದಿನವನ್ನು ಸರಳವಾಗಿ ಆಚರಿಸಿಕೊಳ್ಳುತ್ತಿದ್ದು, ಈ ಬಾರಿಯೂ ಅದೇ ಸರಳತೆ ದರ್ಶನ್ ಮುಂದುವರೆಸಿದ್ದಾರೆ.

ಬೆಂಗಳೂರು: ಸ್ಟಾರ್ ನಟರ ಜನ್ಮದಿನವನ್ನು ಅಭಿಮಾನಿಗಳು ತಮ್ಮಷ್ಟದಂತೆ ಅದ್ಧೂರಿಯಾಗಿ ಆಚರಣೆ ಮಾಡುತ್ತಾರೆ.

ಆದರೆ, ಚಾಲೆಂಜಿಂಗ್ ಸ್ಟಾರ್ ದರ್ಶನ್, ತಮ್ಮ ಜನ್ಮದಿನವನ್ನು ಸರಳವಾಗಿ ಆಚರಿಸಿಕೊಳ್ಳುತ್ತಿದ್ದು, ಈ ಬಾರಿಯೂ ಅದೇ ಸರಳತೆ ದರ್ಶನ್ ಮುಂದುವರೆಸಿದ್ದಾರೆ.

ಫೆಬ್ರವರಿ16ರಂದು ದರ್ಶನ್ ಹುಟ್ಟು ಹಬ್ಬ ಇರುವುದರಿಂದ ಹಾರ, ತುರಾಯಿ, ಕೇಕ್ ತರುವ ಬದಲು ಅಕ್ಕಿ ಬೇಳೆ, ದವಸ ಧಾನ್ಯ ತರಲು ಡಿ ಬಾಸ್ ಅಭಿಮಾನಿಗಳಿಗೆ ಸೂಚಿಸಿದ್ದಾರೆ.

ಹುಟ್ಟು ಹಬ್ಬದ ನಂತರ ಸಂಗ್ರಹಣೆ ಆದ ಅಕ್ಕಿ, ಧವಸ ಧಾನ್ಯಗಳನ್ನು ಅನಾಥಾಶ್ರಮಗಳಿಗೆ ತಲುಪಿಸುವ ಪ್ಲಾನ್ ಇಟ್ಟುಕೊಳ್ಳಲಾಗಿದೆ.

ಈಗಾಗಲೇ ಮೈಸೂರಿನಲ್ಲಿ ದವಸ ಧಾನ್ಯ ಸಂಗ್ರಹಿಸುವ ಕೆಲಸಕ್ಕೆ ದರ್ಶನ್ ಅಭಿಮಾನಿಗಳು ಮುಂದಾಗಿದ್ದಾರೆ. 

ದರ್ಶನ್ ಕೂಡ ಈ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಕೇಕ್, ಹಾರಕ್ಕೆ ಖರ್ಚು ಮಾಡುವ ಹಣದಲ್ಲಿ ದವಸ-ಧಾನ್ಯ ತೆಗೆದುಕೊಂಡು ಬರುವಂತೆ ಸಂದೇಶ ನೀಡಿದ್ದಾರೆ. ಈ ಮೂಲಕ ಭಿನ್ನವಾಗಿ ಹುಟ್ಟು ಹಬ್ಬ ಆಚರಣೆ ಮಾಡಲು ದರ್ಶನ್ ರೆಡಿ ಆಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ: RCB ಗೆ 18 ರನ್ ಗಳ ಭರ್ಜರಿ ಗೆಲುವು!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

SCROLL FOR NEXT