ಐಶ್ವರ್ಯ ಪ್ರಸಾದ್ 
ಸಿನಿಮಾ ಸುದ್ದಿ

ರಾಬರ್ಟ್' ಚಿತ್ರದಲ್ಲಿ ಐಶ್ವರ್ಯ ಪ್ರಸಾದ್ ಪ್ರಮುಖ ಪಾತ್ರ

 ಪಡ್ಡೆ ಹುಲಿ ಹಾಗೂ ಹಾರರ್ ಸಿನಿಮಾ ಶಾರ್ದೂಲದ ನಂತರ ಸ್ವಲ್ಪ ವಿರಾಮ ಪಡೆದುಕೊಂಡಿದ್ದ ನಟಿ ಐಶ್ವರ್ಯ ಪ್ರಸಾದ್ ಇದೀಗ ತರುಣ್ ಕಿಶೋರ್ ಸುಧೀರ್ ನಿರ್ದೇಶನದ, ದರ್ಶನ್ ನಾಯಕ ನಟನಾಗಿರುವ ರಾಬರ್ಟ್ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಬೆಂಗಳೂರು:  ಪಡ್ಡೆ ಹುಲಿ ಹಾಗೂ ಹಾರರ್ ಸಿನಿಮಾ ಶಾರ್ದೂಲದ ನಂತರ ಸ್ವಲ್ಪ ವಿರಾಮ ಪಡೆದುಕೊಂಡಿದ್ದ ನಟಿ ಐಶ್ವರ್ಯ ಪ್ರಸಾದ್ ಇದೀಗ ತರುಣ್ ಕಿಶೋರ್ ಸುಧೀರ್ ನಿರ್ದೇಶನದ, ದರ್ಶನ್ ನಾಯಕ ನಟನಾಗಿರುವ ರಾಬರ್ಟ್ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಭಾನುವಾರ ಈ ಮಾಹಿತಿಯನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಆದಾಗ್ಯೂ, ಅವರ ಪಾತ್ರದ ಬಗ್ಗೆ ಯಾವುದೇ ಮಾಹಿತಿಯನ್ನು ಬಹಿರಂಗಗೊಳಿಸಿಲ್ಲ.

ಉಮಾಪತಿ ಎಸ್ ಗೌಡ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಜಗಪತಿ ಬಾಬು, ವಿನೋದ್ ಪ್ರಭಾಕರ್, ಸೋನಾಲ್ ಮಾಂಟೆರೋ, ರವಿ ಕಿಶನ್, ಚಿಕ್ಕಣ್ಣ, ಶಿವರಾಜ್ ಕೆ.ಆರ್. ಪೇಟೆ ಮತ್ತಿತರ ತಾರಾಬಳಗವಿದೆ.

108 ದಿನಗಳ ಕಾಲ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಒಂದು ಹಾಡನ್ನು ಬಾಕಿ ಉಳಿಸಿಕೊಂಡಿದೆ. ಅದನ್ನು ವಿದೇಶದಲ್ಲಿ ಚಿತ್ರೀಕರಣ ಮಾಡಲು ನಿರ್ಧರಿಸಲಾಗಿದೆ. ಈ ಮಧ್ಯೆ ಸಂಗೀತ ಸಂಯೋಜನೆಗಾಗಿ ರಿ ರೆಕಾರ್ಡಿಂಗ್ ಪ್ರಕ್ರಿಯೆ ನಡೆಯುತ್ತಿದೆ. 

ಅರ್ಜುನ್ ಜನ್ಯಾ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದು, ಏಪ್ರಿಲ್ 9 ರಂದು ಚಿತ್ರ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದ್ದಾರೆ.

ರಾಬರ್ಟ್ ಚಿತ್ರದ ನಿರ್ಮಾಣ ನಂತರದ ಕಾರ್ಯ ಸಾಗುತ್ತಿದೆ. ಪುದುಚೇರಿ, ಲಖನೌ, ಬೆಂಗಳೂರು, ಮೈಸೂರು, ಹೈದ್ರಾಬಾದ್, ಚೆನ್ನೈ, ಮತ್ತು ವಾರಾಣಸಿಯಲ್ಲಿ ಚಿತ್ರೀಕರಣ ಮಾಡಿರುವ ಈ ಚಿತ್ರಕ್ಕೆ ಸುಧಾಕರ್ ಎಸ್ ರಾಜ್ ಅವರ ಛಾಯಾಗ್ರಹಣವಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT