ಜಗ್ಗೇಶ್ 
ಸಿನಿಮಾ ಸುದ್ದಿ

ನಗಿಸಿದ ದೇವರಿಗೆ ಸ್ಮಾರಕ ನಿರ್ಮಾಣ ಖಚಿತ: ನಟ ಜಗ್ಗೇಶ್

ಕನ್ನಡ ಚಿತ್ರರಂಗದ ಹಾಸ್ಯ ಚಕ್ರವರ್ತಿ ದಿವಂಗತ ನರಸಿಂಹರಾಜು ಅವರ ಸ್ಮಾರಕ ನಿರ್ಮಾಣ ಬಗ್ಗೆ ವಿಶೇಷ ಆಸಕ್ತಿ ವಹಿಸಿರುವುದಾಗಿ ನಟ ಜಗ್ಗೇಶ್ ಟ್ವಿಟರ್‍ ನಲ್ಲಿ ತಿಳಿಸಿದ್ದಾರೆ.

ಬೆಂಗಳೂರು: ಕನ್ನಡ ಚಿತ್ರರಂಗದ ಹಾಸ್ಯ ಚಕ್ರವರ್ತಿ ದಿವಂಗತ ನರಸಿಂಹರಾಜು ಅವರ ಸ್ಮಾರಕ ನಿರ್ಮಾಣ ಬಗ್ಗೆ ವಿಶೇಷ ಆಸಕ್ತಿ ವಹಿಸಿರುವುದಾಗಿ ನಟ ಜಗ್ಗೇಶ್ ಟ್ವಿಟರ್‍ ನಲ್ಲಿ ತಿಳಿಸಿದ್ದಾರೆ.
  
ಅಭಿಮಾನಿಯೊಬ್ಬರು “ಕರ್ನಾಟಕದ ಜನರ ಹೃದಯ ಗೆದ್ದ ಹಾಸ್ಯ ನಟ ನರಸಿಂಹರಾಜು ಅವರ ಹೆಸರಲ್ಲಿ ಅವರ ನೆನಪು ಉಳಿಸಲು ತಿಪಟೂರಿನಲ್ಲಿ ಸ್ಮಾರಕ ಮಾಡಲಾಗುವುದು ಎಂದು ಕಾರ್ಯಕ್ರಮವೊಂದರಲ್ಲಿ ಅವರ ಶ್ರೀಮತಿಯವರಿಗೆ ಆಶ್ವಾಸನೆ ನೀಡಿದ್ದ ನೆನಪು, ಅದೇನಾದರೂ ಕಾರ್ಯಗತ ಆಗ್ತಿದೆಯಾ” ಎಂದು ಜಗ್ಗೇಶ್ ಅವರನ್ನು ಟ್ವಿಟರ್ ನಲ್ಲಿ ಪ್ರಶ್ನಿಸಿದ್ದಾರೆ.
  
ಇದಕ್ಕೆ ಉತ್ತರಿಸಿರುವ ಜಗ್ಗೇಶ್, “ಖಂಡಿತ... ನಾನು ಹಾಗೂ ನನ್ನ ಗೆಳೆಯ, ಶಾಸಕ ನಾಗೇಶ್ ರವರು ಆ ಕಾರ್ಯದ ಬಗ್ಗೆ ವಿಶೇಷ ಆಸಕ್ತಿವಹಿಸಿರುವೆವು… ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನರಸಿಂಹರಾಜುರವರ ಮಡದಿಗೆ ಕಳೆದವಾರ ನೀಡಿರುವೆ. ನಗಿಸಿದ ದೇವರಿಗೆ ಖಡಿತ ನೆನಪಿನ ಸ್ಮಾರಕ ನಿರ್ಮಾಣ ಆಗುತ್ತದೆ... ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ, ಲೆಬನಾನ್ ಕದನ ವಿರಾಮ, ಆಸ್ತಿ ಬಿಡುಗಡೆ ಪ್ರಮುಖ ಅಜೆಂಡಾ-Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

IPL 2026: RCB ಸೋಲಿಸಿದ RRಗೆ ಬಿಗ್ ಶಾಕ್, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಬ್ಬಂದಿ, BCCI ಶಿಕ್ಷೆ..! Video

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

SCROLL FOR NEXT