ನವ್ಯಾ ಸ್ವಾಮಿ-ರವಿಕೃಷ್ಣ 
ಸಿನಿಮಾ ಸುದ್ದಿ

ಕನ್ನಡ ಕಿರುತೆರೆ ನಟಿ ನವ್ಯಾ ಜೊತೆ ಅಭಿನಯಿಸಿದ್ದ ನಟನಿಗೂ ಕೊರೋನಾ!

ಕನ್ನಡದ ಕಿರುತೆರೆ ನಟಿ ನವ್ಯಾ ಸ್ವಾಮಿ ಕನ್ನಡದ ಜೊತೆಗೆ ತೆಲುಗಿನಲ್ಲೂ ಅಭಿನಯಿಸಿ ಖ್ಯಾತಿ ಗಳಿಸಿದ್ದಾರೆ. ಆದರೆ  ಅವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಇದೀಗ ಅವರ ಜೊತೆ ಅಭಿನಯಿಸಿದ್ದ ನಟನೂ ಕೊರೋನಾಗೆ ತುತ್ತಾಗಿದ್ದಾರೆ.

ಕನ್ನಡದ ಕಿರುತೆರೆ ನಟಿ ನವ್ಯಾ ಸ್ವಾಮಿ ಕನ್ನಡದ ಜೊತೆಗೆ ತೆಲುಗಿನಲ್ಲೂ ಅಭಿನಯಿಸಿ ಖ್ಯಾತಿ ಗಳಿಸಿದ್ದಾರೆ. ಆದರೆ  ಅವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಇದೀಗ ಅವರ ಜೊತೆ ಅಭಿನಯಿಸಿದ್ದ ನಟನೂ ಕೊರೋನಾಗೆ ತುತ್ತಾಗಿದ್ದಾರೆ.

ನವ್ಯಾ ಸ್ವಾಮಿ ಅವರು ತೆಲುಗಿನ ಆಮೆ ಕಥಾ ಧಾರಾವಾಹಿಯ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದರು. ದುರದೃಷ್ಟವಶಾತ್ ಅವರಿಗೆ ಕೊರೋನಾ ಸೋಂಕು ತಗುಲಿತ್ತು. 

ಇದೀಗ ಅವರ ಜೊತೆ ಅಭಿನಯಿಸಿದ್ದ ನಟ ರವಿಕೃಷ್ಣ ಅವರಿಗೂ ಕೊರೋನಾ ಸೋಂಕು ತಗುಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಸದ್ಯಕ್ಕೆ ಧಾರಾವಾಹಿ ಶೂಟಿಂಗ್ ಅನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ.

ಕೊರೋನಾ ಲಾಕ್ ಡೌನ್ ಸಡಿಲಿಕೆ ಬೆನ್ನಲ್ಲೇ ಹೈದರಾಬಾದ್ ನಲ್ಲಿ ಚಿತ್ರೀಕರಣ ಅನುವು ಮಾಡಿಕೊಡಲಾಗಿತ್ತು. ಈ ಹಿನ್ನೆಲೆಯಲ್ಲಿ ಹಲವು ಸಿನಿಮಾಗಳು ಹಾಗೂ ಧಾರಾವಾಹಿಗಳ ಚಿತ್ರೀಕರಣ ಭರದಿಂದ ಸಾಗಿತ್ತು.

ಮೈಸೂರು ಮೂಲದ ನಟಿ ಈ ಹಿಂದೆ ಕನ್ನಡದ ಲಕುಮಿ, ತಂಗಾಳಿ ಧಾರಾವಾಹಿಗಳಲ್ಲಿ ಬಣ್ಣ ಹಚ್ಚಿದ್ದರು. ಆ ಬಳಿಕ ತಮಿಳು, ತೆಲುಗಿನಲ್ಲಿ ಅವಕಾಶ ಗಿಟ್ಟಿಸಿಕೊಂಡ ಕನ್ನಡತಿ ವಾಣಿ ರಾಣಿ, 'ನಾ ಪೇರು ಮೀನಾಕ್ಷಿ' ಮೂಲಕ ತಮಿಳು- ತೆಲುಗು ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT