ಅನುಷ, ವರ್ಧನ್ ತೀರ್ಥಹಳ್ಳಿ 
ಸಿನಿಮಾ ಸುದ್ದಿ

‘ದಾರಿ ಯಾವುದಯ್ಯಾ ವೈಕುಂಠಕೆ' ಚಿತ್ರೀಕರಣ ‌ಪೂರ್ಣ

ಶ್ರೀ ಬಸವೇಶ್ವರ ಕ್ರಿಯೇಷನ್ಸ್ ಲಾಂಛನದಲ್ಲಿ ಶರಣಪ್ಪ ಎಂ ಕೊಟಗಿ ಅವರು ನಿರ್ಮಿಸಿರುವ 'ದಾರಿ ಯಾವುದಯ್ಯಾ ವೈಕುಂಠಕ್ಕೆ' ಚಿತ್ರದ ಚಿತ್ರೀಕರಣ ಪೂರ್ಣವಾಗಿದೆ.

ಬೆಂಗಳೂರು: ಶ್ರೀ ಬಸವೇಶ್ವರ ಕ್ರಿಯೇಷನ್ಸ್ ಲಾಂಛನದಲ್ಲಿ ಶರಣಪ್ಪ ಎಂ ಕೊಟಗಿ ಅವರು ನಿರ್ಮಿಸಿರುವ 'ದಾರಿ ಯಾವುದಯ್ಯಾ ವೈಕುಂಠಕ್ಕೆ' ಚಿತ್ರದ ಚಿತ್ರೀಕರಣ ಪೂರ್ಣವಾಗಿದೆ.

ಲಾಕ್ ಡೌನ್ ತೆರವಿನ ನಂತರ ಸರ್ಕಾರ ಅರ್ಧ ಭಾಗ ಚಿತ್ರೀಕರಣವಾಗಿರುವ ಚಿತ್ರಗಳ ಚಿತ್ರೀಕರಣ ಪೂರ್ಣ ಮಾಡಲು ಅನುಮತಿ ನೀಡಿದ್ದು. ಸರ್ಕಾರದ ನಿಯಮಗಳನ್ನು ಪಾಲಿಸಿ ಬೆಂಗಳೂರಿನಲ್ಲಿ ಕೊನೆಯ ಹಂತದ ಚಿತ್ರೀಕರಣ ಪೂರ್ಣಗೊಳಿಸಿ ಕುಂಬಳಕಾಯಿ ಒಡೆಯಲಾಯಿತು. ವರ್ಧನ್, ಅನುಷ ಬಲ ರಾಜವಾಡಿ ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಸದ್ಯದಲ್ಲೇ ಚಿತ್ರೀಕರಣ ನಂತರದ ಚಟುವಟಿಕೆ ಪ್ರಾರಂಭವಾಗಲಿದೆ. ಈ ಹಿಂದೆ 'ಕೃಷ್ಣ ಗಾರ್ಮೆಂಟ್ಸ್' ಚಿತ್ರ ನಿರ್ದೇಶಿಸಿದ್ದ ಸಿದ್ದು ಪೂರ್ಣಚಂದ್ರ ಈ ಚಿತ್ರದ ನಿರ್ದೇಶಕರು.ವರ್ಧನ್ ತೀರ್ಥಹಳ್ಳಿ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಅನುಷ. 'ಡಿಂಗ' ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದ ಅನುಷ ಅವರು ಶ್ರೀಮಾನ್ ಶ್ರೀಮತಿ ಹಾಗೂ ಅವಳು ಸುಜಾತ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. 

'ತಿಥಿ' ಚಿತ್ರದ ಖ್ಯಾತಿಯ ಪೂಜಾ,  ಬಲ ರಾಜವಾಡಿ, ಶೀಬಾ, ಡಿ.ವಿ.ನಾಗರಾಜ್, ಸುಚಿತ್,  ಅರುಣ್  ಮೂರ್ತಿ, ಸಂಗೀತ, ಗೌಡಿ, ಸಿದ್ಧಾರ್ಥ್, ಪ್ರಣಯ್ ಮೂರ್ತಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.ಭಗತ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ನಿತಿನ್ ಛಾಯಾಗ್ರಹಣ ಹಾಗೂ ಮುತ್ತುರಾಜ್ ಸಂಕಲನವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT