ಸುಮನ್ ನಗರ್ ಕರ್ 
ಸಿನಿಮಾ ಸುದ್ದಿ

ಕೊರೋನಾ ಚ್ಯಾರಿಟಿಗಾಗಿ ಸುಮನ್ ನಗರ್ ಕರ್ 400 ಕಿ.ಮೀ. ಓಟ

ಕೊರೋನಾ ಮಹಾಮಾರಿಯಿಂದಾಗಿ ಇವತ್ತು ವಿಶ್ವವೇ ತಲ್ಲಣಿಸಿದೆ. ಅನೇಕರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಈ ರೀತಿ ತೊಂದರೆಗೊಳಗಾದವರಿಗೆ ಸಹಾಯ ಮಾಡುವ ಅನೇಕ ಸಮಾಜ ಸೇವೆಯ ಕೆಲಸಗಳೂ ಸಹ ನಡೆಯುತ್ತಿವೆ. 

ಕೊರೋನಾ ಮಹಾಮಾರಿಯಿಂದಾಗಿ ಇವತ್ತು ವಿಶ್ವವೇ ತಲ್ಲಣಿಸಿದೆ. ಅನೇಕರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಈ ರೀತಿ ತೊಂದರೆಗೊಳಗಾದವರಿಗೆ ಸಹಾಯ ಮಾಡುವ ಅನೇಕ ಸಮಾಜ ಸೇವೆಯ ಕೆಲಸಗಳೂ ಸಹ ನಡೆಯುತ್ತಿವೆ. 

ಈ ನಿಟ್ಟಿನಲ್ಲಿ ಸ್ಯಾಂಡಲ್ ವುಡ್ ತಾರೆಯರೂ ಸಹ ತೊಂದರೆಗೊಳಗಾದವರಿಗೆ ಸಹಾಯ ಮಾಡುವುದರಲ್ಲಿ ತೊಡಗಿಸಿಕೊಂಡಿದ್ದು, ಅವರಲ್ಲಿ ನಟಿ ಸುಮನ್ ನಗರ್ ಕರ್ ಸಹ ಒಬ್ಬರು. ಬೆಂಗಳೂರು ರನ್ನರ್ಸ್ ಆಯೋಜಿಸಿರುವ #Run2020-Move2feed fund raise ಅಭಿಯಾನದಲ್ಲಿ ಸುಮನ್ ನಗರ್ ಕರ್ ಕೂಡ ತಮ್ಮ ಪತಿ ಗುರು ಜೊತೆಯಲ್ಲಿ ಭಾಗಿಯಾಗಿದ್ದಾರೆ. 

ಜುಲೈ ಒಂದರಿಂದ ಇಪ್ಪತ್ತರವರೆಗೆ, ಇಪ್ಪತ್ತು ದಿನಗಳ ಕಾಲ ಇಪ್ಪತ್ತು ರನ್ನರ್ಸ್ ಪ್ರತಿದಿನ ಇಪ್ಪತ್ತು ಕಿಲೋಮೀಟರ್ ಓಡಿ ಈ ಮೂಲಕ fund raise(ಹಣ ಸಂಗ್ರಹಣೆ) ಮಾಡಲಿದ್ದಾರೆ.

ಸಂಗ್ರಹಣೆಯಾದ ಹಣವನ್ನ ಬಡವರಿಗೆ, ದಿನಗೂಲಿಯವರಿಗೆ, ಕಷ್ಟದಲ್ಲಿರುವವರಿಗೆ ಸಾಯಿ ವಿಶ್ವನಾಥ್ ಮೆಮೋರಿಯಲ್ ಟ್ರಸ್ಟಿನ ಮೂಲಕ ದಿನಸಿಗಳನ್ನ ಸರಬರಾಜು ಮಾಡಲಿದ್ದಾರೆ. ಈ ಒಂದು ಒಳ್ಳೆಯ ಕಾರ್ಯಕ್ಕೆ ಸಹಾಯ ಮಾಡಲಿಚ್ಚಿಸುವವರು ಫೇಸ್ ಬುಕ್ ನ Move2feed ಅಥವಾ ಸುಮನ್ ನಗರ್ ಕರ್ ಅವರ Facebook ಪೇಜ್ ಅಲ್ಲಿ ಹೆಚ್ಚಿನ ಮಾಹಿತಿ ಪಡೆಯಬಹುದು.

 ಕೆಲ ವರ್ಷಗಳ ಬ್ರೇಕ್ ನಂತರ ನಟನೆಗೆ ಮರಳಿರುವ ಸುಮನ್, ತಮ್ಮದೇ ನಿರ್ಮಾಣ ಸಂಸ್ಥೆಯಿಂದ "ಬಬ್ರೂ" ಹಾಗೂ "ಬ್ರಾಹ್ಮಿ" ಚಿತ್ರಗಳ ನಿರ್ಮಾಣ ಸಹ ಮಾಡಿದ್ದಾರೆ. ಹಲವಾರು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಬೆಂಗಾಲಿ ನಿರ್ದೇಶಕ ಸಂಚಯನ್ ಚಕ್ರಬರ್ತಿಯವರ "ಲಾಕ್ಡೌನ್ ಡೈರೀಸ್" ಹಿಂದಿ ಕಿರುಚಿತ್ರ ಹಾಗೂ ಸಿಂಗಾಪುರ್ ನಲ್ಲಿರುವ ಪ್ರಶಸ್ತಿ ವಿಜೇತ ನಿರ್ದೇಶಕಿ ಶಿಲ್ಪ ಕ್ರಿಷ್ನನ್ ಶುಕ್ಲಾ ಅವರ ಇಂಗ್ಲಿಷ್ ಹಿಂದಿ ಮಿಶ್ರಿತ ಚಲನಚಿತ್ರ "ಡಾಟ್ಸ್" ನಲ್ಲಿ ಕೂಡ ಅಭಿನಯಿಸಿದ್ದಾರೆ. ಆದರೆ ಎಷ್ಟೋ ಜನರಿಗೆ ಸುಮನ್ ಬಗ್ಗೆ ಗೊತ್ತಿರದ ವಿಷಯವೆಂದರೆ ಆಕೆ ಮ್ಯಾರಥಾನ್(42.2km) ರನ್ನ ರ್ ಎಂಬುದು. ಅಮೆರಿಕಾ ಹಾಗೂ ಬೆಂಗಳೂರಿನ ಹಲವಾರು ಮ್ಯಾರಥಾನ್ ರೇಸ್ಗಳಲ್ಲಿ ಇವರು ಭಾಗವಹಿಸಿದ್ದಾರೆ. ಈಗ ಈ ಇಪ್ಪತ್ತು ದಿನಗಳ ಪ್ರತಿದಿನ ಇಪ್ಪತ್ತು ಕಿಲೋಮೀಟರ್ ಓಡುವ ಅಭಿಯಾನದ ಮೂಲಕ ಹಣ ಸಂಗ್ರಹಿಸಿ ಕಷ್ಟದಲ್ಲಿರುವವರಿಗೆ ನೆರವಾಗುವ ಆಸೆ ಹೊಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT