ಸ್ಯಾಂಡಲ್ ವುಡ್ ನಟ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕೊರೋನಾ ಸೋಂಕಿಗೆ ತುತ್ತಾಗಿದ್ದ ಸಂಸದೆ ಸುಮಲತಾ ಅಂಬರೀಶ್ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ರಾಕ್ ಲೈನ್ ವೆಂಕಟೇಶ್ ಕಳೆದ ಹದಿನೈದು ದಿನಗಳಿಂದ ಬೆಂಗಳೂರಿನ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ಆಪ್ಸತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮನೆಯಲ್ಲಿ ಮಕ್ಕಳೂ ಸೇರಿ ಕುಟುಂಬ ಸದಸ್ಯರು ಇರುವ ಕಾರಣ ವೆಂಕಟೇಶ್ ತಾವು ಮನೆಗೆ ತೆರಳುವ ಬದಲು ದೇವನಹಳ್ಳಿ ಸಮೀಪದ ರೆಸಾರ್ಟ್ ನಲ್ಲಿ ಮೂರು ವಾರದ ಕಾಲ ಸೆಲ್ಫ್ ಕ್ವಾರಂಟೈನ್ ನಲ್ಲಿರಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಇದೇ ವೇಳೆ ಸಂಸದೆ ಸುಮಲತಾ ಅಂಬರೀಶ್ ಸಹ ಕೊರೋನಾದಿಂದ ಚೇತರಿಸಿಕೊಂಡಿದ್ದು ನಾಲ್ಕು ವಾರದ ಹೋಂ ಕ್ವಾರಂಟೈನ್ ನಂತರ ತಾವು ಜನಸಂಪರ್ಕಕ್ಕೆ ಬರುವುದಾಗಿ ಸಾಮಾಜಿಕ ಮಾದ್ಯಮದಲ್ಲಿ ಹೇಳಿದ್ದಾರೆ.