ರಮ್ಯಾ 
ಸಿನಿಮಾ ಸುದ್ದಿ

ಸೆಲ್ಫಿ ಪೋಸ್ಟ್ ಮಾಡುವ ಮೂಲಕ ಸಾಮಾಜಿಕ ಜಾಲತಾಣಕ್ಕೆ ರಮ್ಯಾ ಕಮ್ ಬ್ಯಾಕ್!

ರಾಜಕೀಯದ ನಡುವೆಯೇ ಕಳೆದೊಂದು ವರ್ಷದಿಂದ ಸಾಮಾಜಿಕ ಜಾಲತಾಣಗಳಿಂದ ದೂರವಿದ್ದ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಇದೀಗ ವಾಪಸ್ ಆಗಿದ್ದು, ಸೆಲ್ಫಿಗಳ ಮೂಲಕ ಭರ್ಜರಿ ಕಮ್ ಬ್ಯಾಕ್ ಮಾಡಿದ್ದಾರೆ.

ಬೆಂಗಳೂರು: ರಾಜಕೀಯದ ನಡುವೆಯೇ ಕಳೆದೊಂದು ವರ್ಷದಿಂದ ಸಾಮಾಜಿಕ ಜಾಲತಾಣಗಳಿಂದ ದೂರವಿದ್ದ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಇದೀಗ ವಾಪಸ್ ಆಗಿದ್ದು, ಸೆಲ್ಫಿಗಳ ಮೂಲಕ ಭರ್ಜರಿ ಕಮ್ ಬ್ಯಾಕ್ ಮಾಡಿದ್ದಾರೆ.

ಹೌದು.. ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥರಾಗಿದ್ದ ರಮ್ಯಾ (ದಿವ್ಯ ಸ್ಪಂಧನ) ಇದೀಗ ಬರೊಬ್ಬರಿ ಒಂದು ವರ್ಷಗಳ ಸುಧೀರ್ಘ ವಿರಾಮದ ಬಳಿಕ ಸಾಮಾಜಿಕ ಜಾಲತಾಣಗಳಿಗೆ ವಾಪಸ್ ಆಗಿದ್ದಾರೆ. ಅಲ್ಲದೆ ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಸರಣಿ ಸೆಲ್ಫಿಗಳನ್ನು ಪೋಸ್ಟ್ ಮಾಡುವ ಮೂಲಕ ಸಾಮಾಜಿಕ ಜಾಲತಾಣಗಳಿಗೆ ರೀ ಎಂಟ್ರಿ ಕೊಟ್ಟಿದ್ದಾರೆ. 

'ನನ್ನ ಕೊನೆಯ ಪೊಸ್ಟ್ ಮಾಡಿ ಬಹುತೇಕ ಒಂದು ವರ್ಷವಾಗಿತ್ತು. ಮರಗಳು, ಪಕ್ಷಿಗಳು, ಪುಸ್ತಕಗಳು ಮತ್ತು ನನ್ನ ನಾಯಿಗಳ ಚಿತ್ರಗಳೊಂದಿಗೆ ನಾನು ನಿಧಾನವಾಗಿ ನನ್ನನ್ನು ತೊಡಗಿಸಿಕೊಂಡಿದ್ದೆ. ಆರಂಭದಲ್ಲಿ ಕ್ಯಾಮೆರಾ ಮುಂದೆ ನಿಂತು ಪೋಸ್ ನೀಡುವುದು ನನಗೆ ಏಲಿಯನ್ ಗಳ ಹಾಗೆ ಭಾಸವಾಗುತ್ತಿತ್ತು. ಕೆಲ ಪ್ರಯತ್ನಗಳ ಬಳಿಕ ಇದನ್ನು ಕೈ ಬಿಟ್ಟಿದ್ದೆ. ಬಳಿಕ ನನ್ನ ಸಾಕು ನಾಯಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿದೆ. ಇದು ನನಗೆ ವಿಚಿತ್ರ ಅನಿಸುತ್ತಿತ್ತು. ಹೀಗಾಗಿ ನಾನು ನನ್ನದೇ ಸೆಲ್ಫಿಗಳನ್ನು ಪೋಸ್ಟ್ ಮಾಡಲು ಆರಂಭಿಸಿದೆ ಎಂದು ಹೇಳಿದ್ದಾರೆ.

ರಮ್ಯಾ ಅವರ ಕಮ್ ಬ್ಯಾಕ್ ನಿಂದಾಗಿ ಅವರ ಅಭಿಮಾನಿಗಳು ಫುಲ್ ಖುಷ್ ಆಗಿದ್ದು, ಇದರ ನಡುವೆಯೇ ಕೆಲ ಮಂದಿ ರಾಜಕೀಯದಿಂದ ದೂರ ಉಳಿದ ಕುರಿತು ರಮ್ಯಾ ಅವರನ್ನು ಪ್ರಶ್ನಿಸುತ್ತಿದ್ದಾರೆ. ಅಲ್ಲದೆ ಸಿನಿಮಾಗಳಿಗೂ ಕಮ್ಯ್ ಬ್ಯಾಕ್ ಮಾಡುವಿರಾ ಎಂದು ಪ್ರಶ್ನಿಸುತ್ತಿದ್ದಾರೆ. ನಟಿ ರಮ್ಯಾ ಕೊನೆಯ ಬಾರಿಗೆ 2016ರಲ್ಲಿ ನಾಗರಹಾವು ಎಂಬ ಚಿತ್ರದಲ್ಲಿ ಅಭಿನಯಿಸಿದ್ದರು.

ಹಳೆಯ ಟ್ರಾಕ್ ಗೆ ಮರಳಿದ ರಮ್ಯಾ-ರಕ್ಷಿತ ಸ್ನೇಹ
ಇನ್ನು ಇತ್ತ ರಮ್ಯಾ ಸಾಮಾಜಿಕ ಜಾಲತಾಣಕ್ಕೆ ಕಮ್ ಬ್ಯಾಕ್ ಮಾಡುತ್ತಲೇ ರಕ್ಷಿತಾರೊಂದಿಗಿನ ಸ್ನೇಹ ಕೂಡ ಟ್ರಾಕ್ ಗೆ ಮರಳಿದಂತಿದೆ. ಉಭಯ ನಟಿಯರೂ ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರರನ್ನು ಫಾಲೋ ಮಾಡಲು ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT