ನಟಿ ವಿಜಯಲಕ್ಷ್ಮಿ 
ಸಿನಿಮಾ ಸುದ್ದಿ

ಆತ್ಮಹತ್ಯೆಗೆ ಯತ್ನಿಸಿದ ನಟಿ ವಿಜಯಲಕ್ಷ್ಮಿ, ಆಸ್ಪತ್ರೆಗೆ ದಾಖಲು

ನಾಗಮಂಡಲ ಹಾಗೂ ಸೂರ್ಯವಂಶ ಖ್ಯಾತಿಯ ನಟಿ ವಿಜಯಲಕ್ಷ್ಮಿ ಅವರು ಭಾನುವಾರ ಬಿಪಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚೆನ್ನೈ: ನಾಗಮಂಡಲ ಹಾಗೂ ಸೂರ್ಯವಂಶ ಖ್ಯಾತಿಯ ನಟಿ ವಿಜಯಲಕ್ಷ್ಮಿ ಅವರು ಭಾನುವಾರ ಬಿಪಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದು ನನ್ನ ಕಡೆಯ ವಿಡಿಯೋ ಎಂದು ಹೇಳಿರುವ ನಟಿ, ತಮ್ಮ ಸಾವಿಗೆ ನಟ, ರಾಜಕಾರಣಿ ಸೀಮನ್ ಮತ್ತು ಹರಿಂದರನ್ ಅವರುಗಳೇ ಕಾರಣ. ನಾನು ಈಗಾಗಲೇ ಬಿಪಿ ಮಾತ್ರೆಗಳನ್ನು ತೆಗೆದುಕೊಂಡಿದ್ದೇನೆ ಎಂದು ಫೇಸ್ ಬುಕ್‍ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ವಿಡಿಯೋದಲ್ಲಿ ತಮಿಳು ಹಾಗೂ ಕನ್ನಡದಲ್ಲಿ ಮಾತನಾಡಿರುವ ವಿಜಯಲಕ್ಷ್ಮಿ, ನಾನು ಕರ್ನಾಟಕದಲ್ಲಿ ಹುಟ್ಟಿದ್ದೀನಿ ಎಂಬ ಕಾರಣಕ್ಕೆ ಸೀಮನ್ ಮತ್ತು ಹರಿಂದ್ರನ್ ನನಗೆ ಸಾಕಷ್ಟು ಕಾಟ ಕೊಟ್ಟಿದ್ದಾರೆ. ಮಹಿಳೆಯಾಗಿ ನಾನು ಎಷ್ಟು ತಡೆದುಕೊಳ್ಳಬೇಕು ಅಷ್ಟು ತಡೆದುಕೊಂಡಿದ್ದೇನೆ. ಇನ್ನುಮುಂದೆ ತಡೆದುಕೊಳ್ಳಲಾಗದು ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ.

ನಾನು ವೇಶ್ಯಾವೃತ್ತಿ ಮಾಡುತ್ತಿದ್ದೇನೆ ಎಂದೆಲ್ಲ ನನ್ನ ಬಗ್ಗೆ ಅಪಪ್ರಚಾರ ಮಾಡಿದ್ದಾರೆ. ಇವರು ಬದುಕುವುದಕ್ಕೆ ಬಿಡುತ್ತಿಲ್ಲ ಎಂದು ವಿಜಯಲಕ್ಷ್ಮಿ ಆರೋಪ ಮಾಡಿದ್ದಾರೆ.

'ನಾನೀಗ ಒಂದಷ್ಟು ಬಿಪಿ ಮಾತ್ರೆಗಳನ್ನು ನುಂಗಿದ್ದೇನೆ. ಇನ್ನು ಸ್ವಲ್ಪ ಹೊತ್ತಿಗೆ ನನ್ನ ಬಿಪಿ ಕಮ್ಮಿ ಆಗಲಿದೆ. ನನ್ನ ಸಾವಿಗೆ ಕಾರಣರಾದ ಈ ಸೀಮನ್‌ ಮತ್ತು ಹರಿಂದ್ರನ್ ಅವರನ್ನು ಯಾವುದೇ ಕಾರಣಕ್ಕೂ ಬಿಡಲೇಬೇಡಿ. 'ನಾಮ್ ತಮಿಳರ್ ಕಚ್ಚಿ' ಎಂಬ ಪಕ್ಷವನ್ನು ಸೀಮನ್ ಕಟ್ಟಿದ್ದಾನೆ. ಕನ್ನಡಿಗರಿಗೆ ಆತ ಬಹಳಷ್ಟು ಕಾಟ ಕೊಟ್ಟಿದ್ದಾನೆ. ನಾನು ಹುಟ್ಟಿದ್ದು ಕರ್ನಾಟಕದಲ್ಲಿ. ನನ್ನ ಮಾತೃಭಾಷೆ ತಮಿಳು ಅನ್ನೋದು ಎಲ್ಲರಿಗೂ ಗೊತ್ತಿದೆ. ನಾನು ಕರ್ನಾಟಕದಲ್ಲಿ ಹುಟ್ಟಿದ್ದೇನೆ ಎಂಬ ಒಂದೇ ಕಾರಣಕ್ಕೆ ನನಗೆ ತುಂಬ ತೊಂದರೆ ನೀಡಿದ್ದಾನೆ' ಎಂದು ವಿಜಯಲಕ್ಷ್ಮಿ ದೂರಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಭೇಟಿ ನೀಡುವಂತೆ ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಆಹ್ವಾನ!

AI ಇಂಪ್ಯಾಕ್ಟ್ ಶೃಂಗಸಭೆ ಟಾರ್ಗೆಟ್: ವಿದೇಶಿಗರಿಂದ ದಾಳಿ ಸಾಧ್ಯತೆ, ಗುಪ್ತಚರ ವರದಿ ಬೆನ್ನಲ್ಲೇ G20 ಗ್ರೇಡ್ ಸೈಬರ್ ಭದ್ರತಾ ವ್ಯವಸ್ಥೆ!

T20 World Cup 2026: ಸ್ಕಾಟ್ಲೆಂಡ್ ವಿರುದ್ಧ ನೇಪಾಳಕ್ಕೆ 7 ವಿಕೆಟ್ ಗಳ ಭರ್ಜರಿ ಜಯ!

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ: ಅಶ್ವಿನಿ ವೈಷ್ಣವ್

'ಕರಾವಳಿ' ಹೂಡಿಕೆ ವಿವಾದ: ಪ್ರಿಯಾಂಕ್ ಖರ್ಗೆ ಸಹಜವಾಗಿ ಹೇಳಿದ್ದಾರೆ, ಆದರೆ ದಕ್ಷಿಣ ಕನ್ನಡ ಬದಲಾಗುತ್ತಿದೆ; ಪರಮೇಶ್ವರ್

SCROLL FOR NEXT