ಧನಂಜಯ್-ರಚಿತಾ ರಾಮ್ 
ಸಿನಿಮಾ ಸುದ್ದಿ

ನಿರ್ದೇಶಕ ರವೀಂದ್ರನಾಥ್ ಚಿತ್ರದಲ್ಲಿ ಧನಂಜಯ್ ಮತ್ತು ರಚಿತಾ ರಾಮ್?

ನಿರ್ದೇಶಕ ರವೀಂದ್ರನಾಥ್ ನಿರ್ದೇಶನದ ಪುಷ್ಪಕ ವಿಮಾನ ಚಿತ್ರದಲ್ಲಿ ನಟಿಸಿದ್ದ ನಟಿ ರಚಿತಾ ರಾಮ್ ಇದೀಗ ನಿರ್ದೇಶಕರ ಮತ್ತೊಂದು ಚಿತ್ರದಲ್ಲಿ ಅಭಿನಯಿಸುತ್ತಿರುವುದನ್ನು ದೃಢಪಡಿಸಿದ್ದಾರೆ. ಇನ್ನು ವಿಖ್ಯಾತ ಚಿತ್ರ ಬ್ಯಾನರ್ ಅಡಿಯಲ್ಲಿ ಎಸ್ ರವೀಂದ್ರನಾಥ್ ನಿರ್ದೇಶನದ ಚಿತ್ರದಲ್ಲಿ ನಟ ಧನಂಜಯ್ ಕೂಡ ಭಾಗವಾಗಲಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ.

ನಿರ್ದೇಶಕ ರವೀಂದ್ರನಾಥ್ ನಿರ್ದೇಶನದ ಪುಷ್ಪಕ ವಿಮಾನ ಚಿತ್ರದಲ್ಲಿ ನಟಿಸಿದ್ದ ನಟಿ ರಚಿತಾ ರಾಮ್ ಇದೀಗ ನಿರ್ದೇಶಕರ ಮತ್ತೊಂದು ಚಿತ್ರದಲ್ಲಿ ಅಭಿನಯಿಸುತ್ತಿರುವುದನ್ನು ದೃಢಪಡಿಸಿದ್ದಾರೆ. ಇನ್ನು ವಿಖ್ಯಾತ ಚಿತ್ರ ಬ್ಯಾನರ್ ಅಡಿಯಲ್ಲಿ ಎಸ್ ರವೀಂದ್ರನಾಥ್ ನಿರ್ದೇಶನದ ಚಿತ್ರದಲ್ಲಿ ನಟ ಧನಂಜಯ್ ಕೂಡ ಭಾಗವಾಗಲಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ.

ಟಗರು ಖ್ಯಾತಿಯ ಡಾಲಿ ಮತ್ತು ಡಿಂಪಲ್ ಕ್ವೀನ್ ರಚಿತಾ ರಾಮ್ ತಮ್ಮ ಕನಸಿನ ಪಾತ್ರಗಳಿಗೆ ಸರಿಹೊಂದುತ್ತಾರೆ ಎಂದು ನಿರ್ದೇಶಕ ಮತ್ತು ನಿರ್ಮಾಪಕರು ಭಾವಿಸಿದ್ದಾರೆ. ರವೀಂದ್ರನಾಥ್ ನಿರ್ದೇಶನದಲ್ಲಿ ಅದಾಗಲೇ ರಚಿತಾ ನಟಿಸಿದ್ದು ಧನಂಜಯ್ ನಿರ್ದೇಶಕ ಮತ್ತು ನಿರ್ಮಾಪಕರೊಂದಿಗೆ ಕೈಜೋಡಿಸುತ್ತಿರುವುದು ಇದೇ ಮೊದಲು. 

ಯೋಗೇಶ್ ನಾರಾಯಣ್ ನಿರ್ಮಿಸುತ್ತಿರುವ ಪ್ರಭು ಶ್ರೀನಿವಾಸ್ ನಿರ್ದೇಶನದ ಚಿತ್ರದಲ್ಲಿ ಧನಂಜಯ್ ಮತ್ತು ರಚಿತಾ ಇಬ್ಬರೂ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ಲಾಕ್ ಡೌನ್ ಮೊದಲು ಲಖನೌದಲ್ಲಿ ಧನಂಜಯ್ ಅವರ ಒಂದು ಭಾಗವನ್ನು ಚಿತ್ರೀಕರಿಸಿದ್ದಾರೆ. ಚಿತ್ರೀಕರಣದಲ್ಲಿ ರಚಿತಾ ಇನ್ನೂ ಭಾಗವಹಿಸಿಲ್ಲ. ಎಲ್ಲವೂ ಸರಿಯಾಗಿ ನಡೆದರೆ, ಇಬ್ಬರು ನಟರಿಗೆ ಇದು ಎರಡನೇ ಯೋಜನೆಯಾಗಿದೆ.

ರಚಿತಾ ಅಭಿನಯದ 100, ಏಕ್ ಲವ್ ಯಾ ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ. ತೆಲುಗು ಚೊಚ್ಚಲ ಚಿತ್ರವಾದ ಸೂಪರ್ ಮಾಚಿ ಚಿತ್ರದ ಶೂಟಿಂಗ್ ಪೂರ್ಣಗೊಳಿಸಿದ ನಟಿ, ಏಪ್ರಿಲ್, ಲಿಲ್ಲಿ, ಮತ್ತು ವೀರಂ ಎಂಬ ವಿವಿಧ ಯೋಜನೆಗಳಿಗೆ ಸಹಿ ಮಾಡಿದ್ದಾರೆ. ಧನಂಜಯ್ ಸಹ ಸ್ಯಾಂಡಲ್‌ವುಡ್‌ನಲ್ಲಿ ಬ್ಯುಸಿ ನಟರಾಗಿದ್ದು ನಟ-ನಿರ್ದೇಶಕ ವಿಜಯ್ ಅವರೊಂದಿಗೆ ಸಲಗ ಚಿತ್ರದಲ್ಲಿ ತೆರೆ ಹಂಚಿಕೊಂಡಿದ್ದು ಚಿತ್ರ ಇನ್ನಷ್ಟೇ ಬಿಡುಗಡೆಯಾಗಬೇಕಿದೆ. 

ಧನಂಜಯ ಅವರು ಪುನೀತ್ ರಾಜ್‌ಕುಮಾರ್ ನಟನೆಯ ಯುವರತ್ನ, ಧ್ರುವ ಸರ್ಜಾ ನಟಿಸಿರುವ ಪೊಗರು ಚಿತ್ರದಲ್ಲಿ ನಟಿಸಿದ್ದಾರೆ. ಬಾದವ ರಾಸ್ಕಲ್ ಚಿತ್ರದ ನಿರ್ಮಾಣದ ಜೊತೆಗೆ ಡಾಲಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಏತನ್ಮಧ್ಯೆ, ಅವರು ಮೊದಲ ಭೂಗತ ಡಾನ್ ಅವರ ಜೀವನಚರಿತ್ರೆಯ ಜಯರಾಜ್ ಪಾತ್ರವನ್ನು ನಿರ್ವಹಿಸಲು ಸಜ್ಜಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT