ಪ್ರಿಯಮಣಿ 
ಸಿನಿಮಾ ಸುದ್ದಿ

ಖಳನಾಯಕಿಯಾಗಿ ನಟಿಸಲು ಸಿದ್ದ: ನಟಿ ಪ್ರಿಯಾಮಣಿ

ತಮಿಳು, ತೆಲುಗು ಹಾಗೂ ಕನ್ನಡ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿರುವ ಅಂದದ ಬೆಡಗಿ ಪ್ರಿಯಾಮಣಿ(ಪ್ರಿಯಾ ವಾಸುದೇವ್ ಮಣಿ ಅಯ್ಯರ್) ತಮಗೆ ಖಳ ನಾಯಕಿ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕೆಂಬ ಆಸೆಯಿದೆ ಎಂದು ಹೇಳಿಕೊಂಡಿದ್ದಾರೆ. 

ಬೆಂಗಳೂರು: ತಮಿಳು, ತೆಲುಗು ಹಾಗೂ ಕನ್ನಡ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿರುವ ಅಂದದ ಬೆಡಗಿ ಪ್ರಿಯಾಮಣಿ(ಪ್ರಿಯಾ ವಾಸುದೇವ್ ಮಣಿ ಅಯ್ಯರ್) ತಮಗೆ ಖಳ ನಾಯಕಿ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕೆಂಬ ಆಸೆಯಿದೆ ಎಂದು ಹೇಳಿಕೊಂಡಿದ್ದಾರೆ. 

೨೦೦೪ರಲ್ಲಿ ಕಂಗಲಾಲ್ ಕೈಧು ಸೇ ಚಿತ್ರದೊಂದಿಗೆ ತಮಿಳು ಚಿತ್ರರಂಗಕ್ಕೆ ಪರಿಚಯವಾದ ಪ್ರಿಯಾಮಣಿ, ೨೦೦೬ರಲ್ಲಿ ‘ಪರುಥೀವೀರನ’ ತಮಿಳು ಚಿತ್ರದಲ್ಲಿನ ನಟನೆಗಾಗಿ ಅತ್ಯುತ್ತಮ ನಟಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದರು. ಲಾಕ್ ಡೌನ್ ನಿಂದಾಗಿ ಈಗ ಮನೆಗೆ ಸೀಮಿತಗೊಂಡಿರುವ ಪ್ರಿಯಾ ಮಣಿ ’ವಿರಾಟ್ ಪರ್ವಂ’ ಚಿತ್ರದಲ್ಲಿ ನಕ್ಸಲೈಟ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. 
ಲಾಕ್‌ಡೌನ್ ದಿನಗಳಲ್ಲಿ ಹೊಸ ಕಥೆಗಳನ್ನು ಕೇಳುತ್ತಿದ್ದೇನೆ. ಚಿತ್ರರಂಗದಲ್ಲಿ ಈ ಹಿಂದೆ ನಾಯಕರಿಗೆ ಮಾತ್ರ ಹೆಚ್ಚಿನ ಗೌರವ ನೀಡುತ್ತಿದ್ದರು ಈಗ ನಾಯಕ ನಾಯಕಿ ಇಬ್ಬರಿಗೂ ಸಮಾನ ಗೌರವ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಾಜಲ್ ಅಗರ್ವಾಲ್, ತಮನ್ನಾ, ನಯನತಾರಾ, ಸಮಂತಾರಂತಹ ನಾಯಕಿಯರು ಅವರಿಗಿರುವ ಅವರ ಮಾರುಕಟ್ಟೆಗೆ ತಕ್ಕಂತೆ ಸಂಭಾವನೆ ಪಡೆದು ಕೊಳ್ಳುತ್ತಾರೆ. ತಮಗೆ ಸಂಭಾವನೆಗಿಂತ ಒಳ್ಳೆಯ ಪಾತ್ರದಲ್ಲಿ ನಟಿಸಿ ಪ್ರೇಕ್ಷಕರನ್ನು ರಂಜಿಸಬೇಕೆಂಬುದು ತಮ್ಮಾಸೆ ಎಂದು ತಿಳಿಸಿದ್ದಾರೆ. ಪ್ರಸ್ತುತ ನಿರ್ಮಾಪಕರು ತಮಗೆ ನೀಡುತ್ತಿರುವ ಸಂಭಾವನೆಗೆ ತೃಪ್ತಿಯಿದೆ. ಒಳ್ಳೆಯ ಗಂಡ, ಕುಟುಂಬದೊಂದಿಗೆ ನೆಮ್ಮದಿಯ ಜೀವನ ನಡೆಸುತ್ತಿದ್ದೇನೆ. ಮದುವೆಯಾದ ಮೂರನೇ ದಿನವೇ ಚಿತ್ರದ ಚಿತ್ರೀಕರಣಕ್ಕೆ ತೆರಳಿದ್ದಾಗಿ, ಅತ್ತೆಯ ಮನೆಯವರೂ ಕೂಡಾ ಚಿತ್ರಗಳಲ್ಲಿ ನಟಿಸಲು ಪ್ರೋತ್ಸಾಹಿಸುತ್ತಿದ್ದಾರೆ. ಅಲ್ಲದೆ ಪತಿ ತಮ್ಮ ಎಲ್ಲಾ ಕಾಲ್‌ಶೀಟ್ ವ್ಯವಹಾರ ನೋಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

’ಪಡಿಯಪ್ಪ ’ ಚಿತ್ರದಲ್ಲಿ ’ ರಮ್ಯ ಕೃಷ್ಣ ನಟಿಸಿದ್ದ ‘ ನೀಲಾಂಬರಿ’ ಯಂತಹ ನೆಗೆಟಿವ್ ಶೇಡ್ ಪಾತ್ರದಲ್ಲಿ ನಟಿಬೇಕೆಂದು ಬಹಳ ದಿನಗಳಿಂದಲೂ ಕಾಯುತ್ತಿದ್ದೇನೆ. ಅದು ಯಾವಾಗ ನಿಜವಾಗಲಿದೆ ಎಂಬುದು ಗೊತ್ತಿಲ್ಲ. ಇನ್ನೂ ಪೂರ್ಣ ಪ್ರಮಾಣದ ಹಾಸ್ಯ ಪಾತ್ರದಲ್ಲಿ ನಟಿಸುವ ಆಸೆಯೂ ಇದೆ. ಲಾಕ್‌ಡೌನ್ ಅಂತ್ಯಗೊಂಡು ಯಾವಾಗ ಶೂಟಿಂಗ್ ಪ್ರಾರಂಭವಾಗುತ್ತದೊ ಎಂದು ತಿಳಿದಿಲ್ಲ. ಪ್ರಸ್ತುತ ಟಿವಿ ಕಾರ್ಯಕ್ರಮಗಳಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದೇನೆ ಎಂದು ಪ್ರಿಯಾಮಣಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT