ಶ್ರೇಯಸ್ ಮಂಜು 
ಸಿನಿಮಾ ಸುದ್ದಿ

ಶ್ರೇಯಸ್ ಮಂಜು ಜೊತೆ 'ಕ್ಯೂ'ನಲ್ಲಿ ನಿಂತ ನಿರ್ದೇಶಕ ನಾಗಶೇಖರ್

ಪಡ್ಡೆಹುಲಿ ಚಿತ್ರದ ಮೂಲಕ ಭರವಸೆ ಮೂಡಿಸಿರುವ ನಟ ಶ್ರೇಯಸ್ ಮಂಜು ಅವರು ವಿಷ್ಣು ಪ್ರಿಯ ಚಿತ್ರದ ಬಿಡುಗಡೆಗಾಗಿ ಎದುರು ನೋಡುತ್ತಿದ್ದು, ಈ ನಡುವಲ್ಲೇ ನಿರ್ದೇಶಕ ನಾಗಶೇಖರ್ ಅವರು ನಿರ್ದೇಶಿಸುತ್ತಿರುವ ಚಿತ್ರವೊಂದಕ್ಕೆ ಹೀರೋ ಆಗಿ ನಟಿಸಲಿದ್ದಾರೆ. 

ಪಡ್ಡೆಹುಲಿ ಚಿತ್ರದ ಮೂಲಕ ಭರವಸೆ ಮೂಡಿಸಿರುವ ನಟ ಶ್ರೇಯಸ್ ಮಂಜು ಅವರು ವಿಷ್ಣು ಪ್ರಿಯ ಚಿತ್ರದ ಬಿಡುಗಡೆಗಾಗಿ ಎದುರು ನೋಡುತ್ತಿದ್ದು, ಈ ನಡುವಲ್ಲೇ ನಿರ್ದೇಶಕ ನಾಗಶೇಖರ್ ಅವರು ನಿರ್ದೇಶಿಸುತ್ತಿರುವ ಚಿತ್ರವೊಂದಕ್ಕೆ ಹೀರೋ ಆಗಿ ನಟಿಸಲಿದ್ದಾರೆ. 

ಅಮರ್ ಚಿತ್ರದ ಬಳಿಕ ತಮಿಳುಚಿತ್ರರಂಗಕ್ಕೆ ಹೋಗಿ ಅಲ್ಲೊಂದು ಸಿನಿಮಾಮ ಪೂರ್ಣಗೊಳಿಸಿ ಬಂದಿರುವ ನಿರ್ದೇಶಕ ನಾಗಶೇಖರ್ ಅವರು ಇದೀಗ ಹೊಸ ಚಿತ್ರ ಕುರಿತು ಶ್ರೇಯಸ್ ಮಂಜು ಜೊತೆಗೆ ಮಾತುಕತೆ ನಡೆಸುತ್ತಿದ್ದಾರೆ. 

ಚಿತ್ರದ ಟೈಟಲ್ ಕ್ಯೂ ಆಗಿದ್ದು, ಟ್ಯಾಗ್'ಲೈನ್ ಎ ವಲ್ ಸ್ಟೋರಿ ಆಫ್ ಎ ಕ್ವೀನ್ ಎಂದು ಹೇಳಲಾಗುತ್ತಿದೆ. ಈ ಕುರಿತು ಶ್ರೇಯಸ್ ಬೈಕ್ ಓಡಿಸುತ್ತಿರುವ ಫೋಟೋವೊಂದನ್ನು ಹಂಚಿಕೊಂಡಿರುವ ನಾಗಶೇಖರ್ ಅವರು ಸಂದೇಶ್ ಕಂಬೈನ್ಸ್'ಗಾಗಿ ನಿರ್ದೇಶನ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. 

ನಾಗಶೇಖರ್ ಅವರ ತಂಡದಲ್ಲಿ ಬರುವ ಸತ್ಯ ಹೆಗಡೆ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಸ್ಟಂಟ್ ಮಾಸ್ಟರ್ ರವಿ ವರ್ಮಾ, ಇಮ್ರಾನ್ ಸರ್ದಾರಿಯಾ ಹಾಗೂ ದೀಪು ಎಸ್ ಕುಮಾರ್ ಅವರೊಂದಿಗೆ ಕೆಲಸ ಮಾಡಲು ಇಚ್ಛಿಸಿದ್ದೆ. ಇಚ್ಛೆಯಂತೆಯೇ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ನಿರ್ದೇಶಕರು ಅತ್ಯುತ್ತಮವಾಗಿ ಕಥೆ ಬರೆದಿದ್ದಾರೆ. ಇದೊಂದು ಆ್ಯಕ್ಷನ್ ಕಮ್ ಡ್ರಾಮಾ ಚಿತ್ರವಾಗಿದ್ದು, ಪಾತ್ರ ನನಗೆ ಒಪ್ಪುವಂತಿದೆ. ಈ ಬಗ್ಗೆ ನನ್ನ ತಂದೆ ಜೊತೆಗೆ ಮಾತುಕತೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆಂದು ಶ್ರೇಯಸ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT