ಸುದೀಪ್ ಮತ್ತು ಅಜನೀಶ್ ಲೋಕನಾಥ್ 
ಸಿನಿಮಾ ಸುದ್ದಿ

ಸುದೀಪ್ ನಟನೆಯ 'ಫ್ಯಾಂಟಮ್' ಗೆ ಅಜನೀಶ್ ಲೋಕನಾಥ್ ಸಂಗೀತ

ಕಿಚ್ಚ ಸುದೀಪ್‌ ಮತ್ತು ನಿರ್ದೇಶಕ ಅನೂಪ್‌ ಭಂಡಾರಿ ಕಾಂಬಿನೇಷನ್‌ನಲ್ಲಿ 'ಫ್ಯಾಂಟಮ್‌' ಚಿತ್ರ ಘೋಷಣೆ ಆದಾಗಲೇ ಅಭಿಮಾನಿಗಳು ಥ್ರಿಲ್‌ ಆಗಿದ್ದರು. 'ರಂಗಿತರಂಗ' ರೀತಿಯ ಬೆಸ್ಟ್‌ ಸಿನಿಮಾ ನೀಡುವ ಮೂಲಕ ಕನ್ನಡ ಸಿನಿಪ್ರಿಯರನ್ನು ಭರ್ಜರಿಯಾಗಿ ರಂಜಿಸಿದ ನಿರ್ದೇಶಕ ಅನೂಪ್‌ ಭಂಡಾರಿ.

ಕಿಚ್ಚ ಸುದೀಪ್‌ ಮತ್ತು ನಿರ್ದೇಶಕ ಅನೂಪ್‌ ಭಂಡಾರಿ ಕಾಂಬಿನೇಷನ್‌ನಲ್ಲಿ 'ಫ್ಯಾಂಟಮ್‌' ಚಿತ್ರ ಘೋಷಣೆ ಆದಾಗಲೇ ಅಭಿಮಾನಿಗಳು ಥ್ರಿಲ್‌ ಆಗಿದ್ದರು. 'ರಂಗಿತರಂಗ' ರೀತಿಯ ಬೆಸ್ಟ್‌ ಸಿನಿಮಾ ನೀಡುವ ಮೂಲಕ ಕನ್ನಡ ಸಿನಿಪ್ರಿಯರನ್ನು ಭರ್ಜರಿಯಾಗಿ ರಂಜಿಸಿದ ನಿರ್ದೇಶಕ ಅನೂಪ್‌ ಭಂಡಾರಿ ಅವರು ಸುದೀಪ್‌ಗಾಗಿ ಒಂದು ಡಿಫರೆಂಟ್‌ ಆದಂತಹ ಕಥೆಯನ್ನೇ 'ಫ್ಯಾಂಟಮ್' ಚಿತ್ರಕ್ರ್ಕಾಗಿ ಸಿದ್ಧ ಮಾಡಿಕೊಂಡಿದ್ದಾರೆ. ಫ್ಯಾಂಟಮ್ ಗೆ ಅಜನೀಶ್ ಲೋಕನಾಥ್ ಸಂಗೀತ ನೀಡುತ್ತಿದ್ದಾರೆ.

ಇದೇ ಮೊದಲ ಬಾರಿಗೆ ಸುದೀಪ್ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ.ಗಾಯಕನೂ ಆಗಿರುವ ಅಜನೀಶ್ ರಂಗನಾಥ್ ಈ ಹಿಂದೆ ಹಲವು ಪ್ರಸಿದ್ಧ ನಿರ್ದೇಶಕ ಸಿನಿಮಾಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಹಂಸಲೇಖ, ಗುರುಕಿರಣ್ ಮತ್ತು ಅರ್ಜುನ್
ಜನ್ಯ  ಅವರ ಸಂಗೀತಕ್ಕೆ ಹಿನ್ನೆಲೆ ಗಾಯನ ನೀಡಿದ್ದಾರೆ.

ಶಿಶಿರ ಮೂಲಕ ಪಾದಾರ್ಪಣೆ ಮಾಡಿದ ಅಜನೀಶ್, ಉಳಿದವರು ಕಂಡಂತೆ, ರಂಗಿತರಂಗ, ಕಿರಿಕ್ ಪಾರ್ಟಿ, ಸರ್ಕಾರಿ ಹಿ. ಪ್ರಾ ಶಾಲೆ , ಬೆಲ್ ಬಾಟಮ್ , ಅವನೇ ಶ್ರೀ ಮನ್ನಾರಾಯಣ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ.

'ಫ್ಯಾಂಟಮ್‌' ಚಿತ್ರತಂಡ ದೊಡ್ಡ ಮಟ್ಟದಲ್ಲಿಯೇ ಪ್ಲ್ಯಾನ್‌ ಮಾಡಿಕೊಂಡು, ಅದನ್ನು ಕಾರ್ಯರೂಪಕ್ಕೆ ತರುತ್ತಿದೆ. ಬಹುಕೋಟಿ ವೆಚ್ಚದಲ್ಲಿ ತೆಲಂಗಾಣದಲ್ಲಿ ಕಾಡಿನ ಸೆಟ್‌ ಹಾಕಿಸುತ್ತಿರುವುದು ವಿಶೇಷ. ಕಳೆದ ಎರಡು ವಾರಗಳಿಂದ ಸೆಟ್‌ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ.

ಶಾಲಿನಿ ಬ್ಯಾನರ್ಸ್ ನಲ್ಲಿ ಸಿನಿಮಾ ತಯಾರಾಗುತ್ತಿದ್ದು, ಮಂಜುನಾಥ್ ಗೌಡ ನಿರ್ಮಾಣದ ಸಿನಿಮಾ ಮೂಲಕ ನಿರ್ದೇಶಕ, ನಿರ್ಮಾಪಕ ಮತ್ತು ನಟ ಇದೇ ಮೊದಲ ಬಾರಿಗೆ ಒಂದಾಗಿ ಸಿನಿಮಾ ಕೆಲಸ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT