ರಾಧಿಕಾ ಪಂಡಿತ್ 
ಸಿನಿಮಾ ಸುದ್ದಿ

ಈ ವರ್ಷ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಣೆ ಇಲ್ಲ, ಬೈಕೋಬೇಡಿ-ರಾಧಿಕಾ ಪಂಡಿತ್! ವಿಡಿಯೋ

ಸ್ಯಾಂಡಲ್‍ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಇಂದು ತಮ್ಮ 36ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಇನ್‍ಸ್ಟಾದಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿ ಅಭಿಮಾನಿಗಳ ಬಳಿ ಕ್ಷಮೆ ಕೇಳಿದ್ದಾರೆ.

ಬೆಂಗಳೂರು: ಸ್ಯಾಂಡಲ್‍ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಇಂದು ತಮ್ಮ 36ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಇನ್‍ಸ್ಟಾದಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿ ಅಭಿಮಾನಿಗಳ ಬಳಿ ಕ್ಷಮೆ ಕೇಳಿದ್ದಾರೆ.
 
 ಸೋಷಿಯಲ್ ಮೀಡಿಯಾ ಮೂಲಕ ವಿಡಿಯೋ ಶೇರ್ ಮಾಡಿರುವ ರಾಧಿಕಾ, “ಪ್ರತಿ ವರ್ಷ ನನ್ನ ಹುಟ್ಟುಹಬ್ಬದ ದಿನ ಬೇರೆ ಜಾಗಗಳಿಂದ, ಬೇರೆ ಊರುಗಳಿಂದ ನನ್ನನ್ನು ಭೇಟಿ ಮಾಡಿ ವಿಶ್ ಮಾಡಲು ಬರುತ್ತೀರಾ ಎಂದು ನನಗೆ ಗೊತ್ತು. ಕಳೆದ ವರ್ಷ ಕೂಡ ಮಿಸ್ ಆಯ್ತು. ಈ ವರ್ಷ ದಯವಿಟ್ಟು ಯಾರು ಬೇಜಾರು ಮಾಡಿಕೊಳ್ಳಬೇಡಿ, ಬೈಕೋಬೇಡಿ” ಎಂದಿದ್ದಾರೆ.
  
ಈ ವರ್ಷ ಕೂಡ ನಾನು ನನ್ನ ಹುಟ್ಟುಹಬ್ಬ ಆಚರಿಸುತ್ತಿಲ್ಲ. ಏಕೆಂದರೆ ನನಗೆ ಇಬ್ಬರು ಪುಟಾಣಿ ಮಕ್ಕಳಿದ್ದಾರೆ. ಹಾಗಾಗಿ ಈ ವರ್ಷ ಹುಟ್ಟುಹಬ್ಬ ಆಚರಿಸುವುದು ಸ್ವಲ್ಪ ಕಷ್ಟ ಎಂದಿದ್ದಾರೆ

ಇದೇ ವೇಳೆ ನೀವು ಮಾಡುತ್ತಿರುವ ಮೆಸೇಜ್‍ಗಳು ಹಾಗೂ ಪ್ರೀತಿಯಿಂದ ಮಾಡುತ್ತಿರುವ ಕೆಲಸಗಳನ್ನು ನಾನು ಸೋಶಿಯಲ್ ಮೀಡಿಯಾದಲ್ಲಿ ನೋಡುತ್ತಿದ್ದೇನೆ. ಎಲ್ಲಾ ಮೆಸೇಜ್‍ಗಳನ್ನು ಓದುತ್ತಿದ್ದೇನೆ, ಹಾಗೆಯೇ ರಿಪ್ಲೈ ಕೂಡ ಮಾಡುತ್ತೇನೆ.  ನನಗೂ ಬೇಜಾರು ಆಗುತ್ತಿದೆ. ಯಾಕೆಂದರೆ ನನ್ನ ಹುಟ್ಟುಹಬ್ಬ ನಿಮ್ಮ ಜೊತೆ ಆಚರಿಸಿಲ್ಲ ಎಂದರೆ ಏನೋ ಅಪೂರ್ಣ ಎಂದು ಅನಿಸುತ್ತೆ. ಕಳೆದ ವರ್ಷ ಕೂಡ ಹುಟ್ಟುಹಬ್ಬ ಆಚರಿಸೋಕೆ ಆಗಿಲ್ಲ. ಮುಂದಿನ ವರ್ಷ ಭೇಟಿಯಾಗಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸೋಣ ಎಂದು ತಿಳಿಸಿದ್ದಾರೆ.

ನನ್ನ ಹುಟ್ಟುಹಬ್ಬದಂದು ದೂರದ ಊರಿನಿಂದ ಅಭಿಮಾನಿಗಳು ಬರುತ್ತಾರೆ. ಈ ಬಾರಿ ಕೂಡ ಅವರು ಬಂದು ನಿರಾಸೆ ಆಗುವುದು ನನಗೆ ಇಷ್ಟ ಇಲ್ಲ. ಹಾಗಾಗಿ ನಾನು ಈ ವಿಡಿಯೋ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡುತ್ತಿದ್ದೇನೆ.ನಿಮ್ಮಲ್ಲರ ಪ್ರೀತಿ ಹಾಗೂ ಆಶೀರ್ವಾದ ನನ್ನ ಕುಟುಂಬಕ್ಕೆ ಸದಾ ಹೀಗೆ ಇರಲಿ. ಆದಷ್ಟು ಬೇಗ ಸಿಗೋಣ ಎಂದು ರಾಧಿಕಾ ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT